ಶಿವಮೊಗ್ಗದಲ್ಲಿ ಜನರಿಂದ ಪೌರ ಕಾರ್ಮಿಕರಿಗೆ, ಪೊಲೀಸರಿಗೆ ಪಾದ ಪೂಜೆ

ಶಿವಮೊಗ್ಗ, ಏಪ್ರಿಲ್ 14: ಕೊರೊನಾ ವೈರಸ್‌ ಭೀತಿ ನಡುವೆಯೂ ತಮ್ಮ ಆರೋಗ್ಯದ ಬಗ್ಗೆ ಯೋಚನೆ ಮಾಡದೆ, ಪೊಲೀಸರು, ಪೌರ ಕಾರ್ಮಿಕರು, ವೈದ್ಯರು ಹಾಗೂ ಪತ್ರಕರ್ತರು ಕೆಲಸ ಮಾಡುತ್ತಿದ್ದಾರೆ. ಈ ಪೈಕಿ ಪೊಲೀಸರಿಗೆ ಹಾಗೂ ಪೌರ ಕಾರ್ಮಿಕರಿಗೆ ವಿಶೇಷ ಗೌರವವನ್ನು ಶಿವಮೊಗ್ಗದಲ್ಲಿ ಸಲ್ಲಿಸಲಾಗಿದೆ.

ಶಿವಮೊಗ್ಗದ ಕಡೇಕಲ್ ಗ್ರಾಮದಲ್ಲಿ ಪೊಲೀಸರಿಗೆ ಹಾಗೂ ಪೌರ ಕಾರ್ಮಿಕರಿಗೆ ಪಾದ ಪೂಜೆ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ವತಿಯಿಂದ ಈ ಕಾರ್ಯಕ್ರಮ ನಡೆದಿದೆ. ಈ ಮೂಲಕ ಪೊಲೀಸರು ಹಾಗೂ ಪೌರ ಕಾರ್ಮಿಕರಿಗೆ ಗ್ರಾಮದ ಜನ ಧನ್ಯವಾದ ತಿಳಿಸಿದ್ದಾರೆ.

ಕೊರೊನಾ ವೈರಸ್‌ ತಡೆಯಲು, ಲಾಕ್ ಡೌನ್ ಘೋಷಣೆ ಆಗಿದೆ. ಪೊಲೀಸರು ಆ ನಿಯಮ ಸರಿಯಾಗಿ ಪಾಲನೆ ಆಗುವಂತೆ ನೋಡಿಕೊಳ್ಳುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಪೊಲೀಸರು ತಮ್ಮ ಕುಟುಂಬದಿಂದ ದೂರ ಇದ್ದಾರೆ.

People Thanked Police By Doing Paada Pooja In Shivamogga

ಇತ್ತ ಪೌರ ಕಾರ್ಮಿಕರು ಎಂದಿನಂತೆ ತಮ್ಮ ಕೆಲಸ ಮಾಡುತ್ತಿದ್ದಾರೆ. ವೈರಸ್‌ ಹರಡದಂತೆ ಶುಚಿತ್ವ ಕಾಪಾಡಿಕೊಳ್ಳಲು ಸಹಾಯ ಮಾಡಿದ್ದಾರೆ. ಹೀಗಾಗಿ ವೈರಸ್‌ ವಿರುದ್ಧ ಹೋರಾಟ ನಡೆಸಿದ ಇವರನ್ನು ಗ್ರಾಮಸ್ಥರು ಪಾದ ಪೂಜೆ ಮಾಡಿ, ಸನ್ಮಾನ ಮಾಡಿದರು. ತಮ್ಮ ರಕ್ಷಣೆಗೆ ನಿಂತವರಿಗೆ ನಮನ ಸಲ್ಲಿಸಿದರು.

ಅಂದಹಾಗೆ, ಶಿವಮೊಗ್ಗ ಜಿಲ್ಲೆಯಲ್ಲಿ ಅದೃಷ್ಟವಶಾತ್ ಈವರೆಗೆ ಒಂದು ಪಾಸಿಟಿವ್ ಪ್ರಕರಣಗಳು ಕಂಡು ಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+