ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿಗೆ ಪ್ರಧಾನಿ ಮೋದಿ ಕರೆ
ಶಿವಮೊಗ್ಗ, ಏಪ್ರಿಲ್ 23: ಬಿಜೆಪಿಯ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ 9 ಗಂಟೆಗೆ ಕರೆ ಮಾಡಿ, ಶಂಕರಮೂರ್ತಿ ಅವರ ಆರೋಗ್ಯ ವಿಚಾರಿಸಿದ್ದಾರೆ.
Recommended Video
ಲಾಕ್ ಡೌನ್ ಅವಧಿಯಲ್ಲಿ ಹೇಗೆ ಸಮಯ ಕಳೆಯುತ್ತಿದ್ದೀರಿ ಎಂದು ಮಾಹಿತಿ ಕೇಳಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದು, ಫೋನ್ ಮೂಲಕವೇ ಕೆಲಸ ಮಾಡುತ್ತಿರುವುದಾಗಿ ಪ್ರಧಾನಿಗೆ ಶಂಕರಮೂರ್ತಿ ಅವರು ಮಾಹಿತಿ ನೀಡಿದ್ದಾರೆ.
ಶಂಕರಮೂರ್ತಿ ಅವರಿಗೆ ಆರೋಗ್ಯ ಕಾಪಾಡಿಕೊಳ್ಳುವಂತೆ ಪ್ರಧಾನಿ ಮೋದಿ ಅವರು ಸಲಹೆ ನೀಡಿದ್ದು, ನಿಮ್ಮ ರಾಜಕೀಯ ಅನುಭವ ಹಾಗೂ ಪಕ್ಷ ಸಂಘಟನೆಯ ಅನುಭವ ಬೇರೆಯವರಿಗೂ ತಿಳಿಸುವಂತೆ ಸಲಹೆ ನೀಡಿ, ನಿಮ್ಮಂತ ಹಿರಿಯ ಅನುಭವಿ ರಾಜಕಾರಣಿಗಳು ಪಕ್ಷಕ್ಕೆ ಅಗತ್ಯ ಇದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಂದೂವರೆ ನಿಮಿಷಗಳ ಕಾಲ ಶಂಕರಮೂರ್ತಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು "ಒನ್ಇಂಡಿಯಾ' ದೊಂದಿಗೆ ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಸಮರ ಸಾರುತ್ತಿರುವ ಪ್ರಧಾನಿ ಮೋದಿ ಅವರು ಇಂತಹ ಬಿಗುವಿನ ಸಂದರ್ಭದಲ್ಲೂ ಸ್ವತಃ ಕರೆ ಮಾಡಿ ನಮ್ಮ ಆರೋಗ್ಯದ ಬಗ್ಗೆ ವಿಚಾರಿಸಿ, ನನ್ನ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.