ಕುವೆಂಪು ಅವರ ಮನೆಯಲ್ಲಿ ಕಳ್ಳತನ ಮಾಡಿದವ ಸಿಕ್ಕಿಬಿದ್ದ
ಶಿವಮೊಗ್ಗ, ನವೆಂಬರ್ 27 : ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹಿಂದೆಯೂ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ದೇವಸ್ಥಾನಗಳಲ್ಲಿನ ಹುಂಡಿ ಹಣ ಕದಿಯುವುದನ್ನು ಕಾಯಕ ಮಾಡಿಕೊಂಡಿದ್ದ.
ಬಂಧಿತ ಆರೋಪಿಯನ್ನು ದಾವಣಗೆರೆ ತಾಲೂಕು ತುರ್ಚಘಟ್ಟದ ರೇವಣಸಿದ್ಧಪ್ಪ ಅಲಿಯಾಸ್ ಕಾಯಕದ ರೇವಣ್ಣ (45) ಎಂದು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ದಾವಣಗೆರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. [ಕಳ್ಳರ ಪಾಲಾದ ರಾಷ್ಟ್ರಕವಿ ಕುವೆಂಪು ಅವರ 'ಜ್ಞಾನಪೀಠ']

ನವೆಂಬರ್ 23ರ ಸೋಮವಾರ ರಾತ್ರಿ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿರುವ ಕುವೆಂಪು ಅವರ ಮನೆಗೆ ನುಗ್ಗಿದ್ದ ರೇವಣ ಸಿದ್ಧಪ್ಪ, ಪದ್ಮವಿಭೂಷಣ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ಕಳವು ಮಾಡಿದ್ದ. ಪೀಠೋಪಕರಣ, ಮತ್ತಿತರ ಸಾಮಗ್ರಿ ಧ್ವಂಸ ಮಾಡಿದ್ದ. [ರಾಜ್ಯೋತ್ಸವ ತಿಂಗಳಲ್ಲಿ 'ಬಾರಿಸು ಕನ್ನಡ ಡಿಂಡಿಮ' ಇರಲಿ]
ಮನೆಯಲ್ಲಿ ಅಳವಡಿಸಿದ್ದ ಸಿಸಿಟಿಯಲ್ಲಿ ರೇವಣ ಸಿದ್ಧಪ್ಪನ ಕೃತ್ಯ ಸೆರೆಯಾಗಿತ್ತು. ಈ ದೃಶ್ಯದ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಜ್ಞಾತ ಸ್ಥಳದಲ್ಲಿ ರೇವಣ ಸಿದ್ಧಪ್ಪ ವಿಚಾರಣೆ ನಡೆಯುತ್ತಿದ್ದು, ಶುಕ್ರವಾರ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆ ಇದೆ. [ಅರ್ಥಪೂರ್ಣ ತೀರ್ಥಹಳ್ಳಿಯ ಸಾರ್ಥಕ ಪ್ರವಾಸ]
ಕದಿಯುವುದೇ ಕಾಯಕ : ಬಂಧಿತ ಆರೋಪಿ ರೇವಣ ಸಿದ್ಧಪ್ಪ ಕದಿಯುವುದನ್ನೇ ಕಾಯಕವಾಗಿ ಮಾಡಿಕೊಂಡಿದ್ದ. ದೇವಸ್ಥಾನದಲ್ಲಿನ ಹುಂಡಿಗಳ ಹಣ ಕದ್ದ ಬಗ್ಗೆ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಈತ, ಒಂದು ವರ್ಷದ ಹಿಂದೆ ಬಿಡುಗಡೆಗೊಂಡಿದ್ದ.
ದಾವಣಗೆರೆ ಜಿಲ್ಲೆಯ ಹದಡಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಯಲ್ಲಿ ರೇವಣ ಸಿದ್ಧಪ್ಪ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕುವೆಂಪು ಅವರ ಮನೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಅಲ್ಲಿ ಹೆಚ್ಚು ಹಣವಿರಬಹುದು ಎಂದು ಅಂದಾಜಿಸಿದ್ದ ಈತ, ಪ್ರವಾಸಿಗರ ಸೋಗಿನಲ್ಲಿ ಮನೆಗೆ ಬಂದು ಪರಿಶೀಲನೆ ನಡೆಸಿದ್ದ. ಸೋಮವಾರ ರಾತ್ರಿ ಮನೆಗೆ ನುಗ್ಗಿ, ಪ್ರಶಸ್ತಿಗಳನ್ನು ದೋಚಿದ್ದ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications