ಕುಪ್ಪಳ್ಳಿಯ ಕುವೆಂಪು ವಸ್ತು ಸಂಗ್ರಹಾಲಯದಲ್ಲಿ ಕಳವಿಗೆ ಯತ್ನಿಸಿದವನ ಬಂಧನ
ಶಿವಮೊಗ್ಗ, ಆಗಸ್ಟ್ 01: ಇತ್ತೀಚೆಗೆ ಹಳೆ ರೇಡಿಯೊ, ಟಿ.ವಿಗಳಿಗೆ ಹೆಚ್ಚಿನ ಬೆಲೆ ದೊರೆಯುತ್ತದೆ ಎಂಬ ಸುಳ್ಳು ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಹಳೆ ರೇಡಿಯೊ, ಟಿ.ವಿಗಳಿಗಾಗಿ ಹುಡುಕುವವರು ಹೆಚ್ಚಾಗುತ್ತಿದ್ದಾರೆ.
ಆ ಕಾರಣಕ್ಕಾಗಿಯೇ ಉಡುಪಿ ಮೂಲದ ಕಳ್ಳನೊಬ್ಬ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕುವೆಂಪು ವಸ್ತು ಸಂಗ್ರಹಾಲಯಕ್ಕೆ ಕನ್ನ ಹಾಕಲು ಮುಂದಾಗಿದ್ದು, ಪೊಲೀಸರ ಅತಿಥಿಯಾಗಿದ್ದಾನೆ. ಜುಲೈ 31ರಂದು ಗಡಿಕಲ್ ಬಳಿಯ ವಸ್ತು ಸಂಗ್ರಹಾಲಯಕ್ಕೆ ನುಗ್ಗಿದ ಕಳ್ಳ, ಕಳ್ಳತನಕ್ಕೆ ಮುಂದಾಗಿದ್ದಾನೆ. ಈ ಸಮಯ ಗ್ರಾಮಸ್ಥರು ಈತನನ್ನು ಗಮನಿಸಿದ್ದನ್ನು ಕಂಡು ಪರಾರಿಯಾಗಿದ್ದಾನೆ.

ಆದರೆ ನಂತರ ಗಮನಿಸಿದಾಗ ವಸ್ತು ಸಂಗ್ರಹಾಲಯದ ಬೀಗ ಮುರಿದಿರುವುದು ಕಂಡುಬಂದು, ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ತದನಂತರ ಸಂಜೆ ಮತ್ತೆ ಗ್ರಾಮದಲ್ಲಿ ಕಳ್ಳತನಕ್ಕೆ ಆತ ಯತ್ನಿಸುತ್ತಿರುವಾಗಲೇ ಖುದ್ದು ಗ್ರಾಮಸ್ಥರು ಹಿಡಿದು ಆತನನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ವಸ್ತು ಸಂಗ್ರಹಾಲಯದಲ್ಲಿದ್ದ ರೇಡಿಯೋ ಕದಿಯಲು ಬಂದಿದ್ದ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications