ಶಿವಮೊಗ್ಗ: ಮಧ್ಯರಾತ್ರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು
ಶಿವಮೊಗ್ಗ, ಆಗಸ್ಟ್ 09: ಮಧ್ಯರಾತ್ರಿಯಲ್ಲಿ ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯನ್ನು ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಪೊಲೀಸ್ ಮನು ಶಂಕರ್ ರಕ್ಷಿಸಿದ್ದಾರೆ.
ಚಂದ್ರಿಕಾ ಎಂಬ 24 ವರ್ಷದ ಯುವತಿ ಬೆಕ್ಕಿನಕಲ್ಮಠದ ಬಳಿ ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ರಾತ್ರಿ 12 ಗಂಟೆಗೆ ಯುವತಿ ಏಕಾಂಗಿಯಾಗಿ ಹೋಗುವುದನ್ನು ಗಮನಿಸಿದ ಕೋಟೆ ಪೊಲೀಸ್ ಠಾಣೆಯ ಮನು ಶಂಕರ್ ಯುವತಿಯನ್ನು ವಿಚಾರಿಸಿದ್ದಾರೆ.
ಮನೆಯಲ್ಲಿ ಮಗಳು ಇಲ್ಲದಿರುವುದು ಪೋಷಕರಾದ ಸುಬ್ರಹ್ಮಣ್ಯ ದಂಪತಿಗಳಿಗೆ ತಳಮಳವುಂಟಾಗಿದೆ. ಮಗಳನ್ನು ಹುಡುಕಿಕೊಂಡು ಹೊರಟ ದಂಪತಿಗಳಿಗೆ ವಿನಾಯಕ ನಗರದ ಬಳಿ ಜಯನಗರ ಪೊಲೀಸ್ ಠಾಣೆಯ ಚೀತಾ ಪೊಲೀಸ್ ಗಂಗಾಧರ್ ಎದುರಾಗಿದ್ದಾರೆ.

ಗಂಗಾಧರ್ ಗೆ ಸುಬ್ರಹ್ಮಣ್ಯರವರು ಮಗಳು ಚಂದ್ರಿಕಾಳಿಗೆ ಬೈದಿದ್ದಕ್ಕೆ ಕೋಪ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದಾಳೆ, ದಯವಿಟ್ಟು ಹುಡುಕಿಕೊಡಿ ಎಂದು ಕೋರಿದ್ದಾರೆ. ಗಂಗಾಧರ್ ವಾಕಿಟಾಕಿಯಲ್ಲಿ ಕಂಟ್ರೋಲ್ ರೂಂಗೆ ವಿಷಯ ತಿಳಿಸಿದ್ದಾರೆ.
ಅಷ್ಟರಲ್ಲಿ ಕೋಟೆ ಪೊಲೀಸ್ ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯನ್ನು ತಡೆದು ನಿಲ್ಲಿಸಿಕೊಂಡಿದ್ದು, ನಂತರ ಜಯನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಯಲ್ಲಿ ಯುವತಿಗೆ ಬುದ್ದಿವಾದ ಹೇಳಿ ಪೋಷಕ ಸುಬ್ರಹ್ಮಣ್ಯರ ಜೊತೆ ಮನೆಗೆ ಕಳುಹಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications