ಶಿವಮೊಗ್ಗ; ಎಲೆಕ್ಟ್ರಿಕ್ ಬಸ್ ಹತ್ತದ ಜನ, 8 ಬಸ್ ವಾಪಸ್!
ಶಿವಮೊಗ್ಗ, ಸೆಪ್ಟೆಂಬರ್ 27; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಆರಂಭಿಸಿದೆ. ಇವಿ ಪವರ್ ಪ್ಲಸ್ ಹೆಸರಿನ ವಿವಿಧ ಬಸ್ಗಳು ಬೆಂಗಳೂರು ನಗರವನ್ನು ವಿವಿಧ ಜಿಲ್ಲಾ ಕೇಂದ್ರಗಳಿಂದ ಸಂಪರ್ಕಿಸುತ್ತಿವೆ. ಈ ಐಷಾರಾಮಿ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ ಸಹ ಸಿಗುತ್ತಿದೆ.
ಕೆಎಸ್ಆರ್ಟಿಸಿ ಶಿವಮೊಗ್ಗ-ಬೆಂಗಳೂರು ನಡುವೆ ಸಹ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸಿತ್ತು. ಶಿವಮೊಗ್ಗ ವಿಭಾಗದಕ್ಕೆ 10 ಬಸ್ಗಳನ್ನು ನೀಡಲಾಗಿತ್ತು. ಈಗ ಈ ಪೈಕಿ 8 ಬಸ್ಗಳನ್ನು ಮೈಸೂರು ವಿಭಾಗಕ್ಕೆ ಕಳಿಸಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಎಲೆಕ್ಟ್ರಿಕ್ ಬಸ್ಗಳ ಸಂಚಾರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಆದರೆ ಶಿವಮೊಗ್ಗ-ಬೆಂಗಳೂರು ಮಾರ್ಗದ ಬಸ್ಗಳಿಗೆ ಪ್ರಯಾಣಿಕರ ಕೊರತೆ ಉಂಟಾಗಿದೆ. ಆದ್ದರಿಂದ ಹೆಚ್ಚು ಬೇಡಿಕೆ ಇರುವ ಮೈಸೂರು ವಿಭಾಗಕ್ಕೆ ಬಸ್ಗಳನ್ನು ಕಳಿಸಲಾಗಿದೆ.
ಪ್ರಯಾಣಿಕರ ಕೊರತೆ; shivamoggalive.com ಈ ಕುರಿತು ವರದಿ ಮಾಡಿದೆ. ಕೆಎಸ್ಆರ್ಟಿಸಿಯ ಶಿವಮೊಗ್ಗ ವಿಭಾಗದ ಜಿಲ್ಲಾ ಅಧಿಕಾರಿ ವಿಜಯ್ ಕುಮಾರ್ ಅವರ ಹೇಳಿಕೆಯನ್ನು ಪಡೆಯಲಾಗಿದ್ದು, "ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನಲೆಯಲ್ಲಿ 8 ಬಸ್ಗಳನ್ನು ಮೈಸೂರಿಗೆ ಕಳಿಸಿದ್ದೇವೆ. ಬೆಂಗಳೂರು-ಮೈಸೂರು ಮಾರ್ಗದಲ್ಲಿ ಈ ಬಸ್ಗಳು ಸಂಚಾರ ನಡೆಸುತ್ತಿವೆ" ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ ವಿಭಾಗಕ್ಕೆ 10 ಬಸ್ಗಳು ಮಂಜೂರಾಗಿದ್ದವು. ಮೊದಲ ಹಂತದಲ್ಲಿ ಎರಡು ಬಸ್ಗಳ ಕಾರ್ಯಾಚರಣೆ ಆರಂಭಿಸಲಾಯಿತು. ಬಳಿಕ ಹಂತ ಹಂತವಾಗಿ 8 ಬಸ್ಗಳ ಸಂಚಾರ ಆರಂಭಿಸಲಾಯಿತು. ಆದರೆ ಪ್ರಯಾಣಿಕರ ಕೊರತೆಯ ಕಾರಣ ಬೇರೆ ವಿಭಾಗದಲ್ಲಿ ಬೇಡಿಕೆ ಇರುವ ಮಾರ್ಗಕ್ಕೆ ಬಸ್ಗಳನ್ನು ಕಳಿಸಲಾಗಿದೆ.
ಬೆಂಗಳೂರು-ಶಿವಮೊಗ್ಗ ನಡುವೆ ಸದ್ಯ ಕೆಎಸ್ಆರ್ಟಿಸಿಯ ಎರಡು ಎಲೆಕ್ಟ್ರಿಕ್ ಬಸ್ಗಳು ಸಂಚಾರ ನಡೆಸುತ್ತಿವೆ. ಶಿವಮೊಗ್ಗದಿಂದ ಪ್ರತಿದಿನ ಬೆಳಗ್ಗೆ 11.03ಕ್ಕೆ ಮತ್ತು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ಬಸ್ ಹೊರಡಲಿದೆ. ಬೆಂಗಳೂರಿನಿಂದ ರಾತ್ರಿ 11 ಮತ್ತು 11.40ಕ್ಕೆ ಬಸ್ಗಳು ಶಿವಮೊಗ್ಗಕ್ಕೆ ಹೊರಡಲಿವೆ. ಈ ಬಸ್ಗಳ ಪ್ರಯಾಣ ದರ 550 ರೂ.ಗಳು.
ಕೆಎಸ್ಆರ್ಟಿಸಿಯ ಇವಿ ಪವರ್ ಪ್ಲಸ್ ಹೆಸರಿನ ಎಲೆಕ್ಟ್ರಿಕ್ ಬಸ್ ಐಷಾರಾಮಿ ಸೌಲಭ್ಯವನ್ನು ಹೊಂದಿದೆ. ಸಂಪೂರ್ಣ ಹವಾನಿಯಂತ್ರಿತವಾದ ಬಸ್ ಆಸನ ವ್ಯವಸ್ಥೆಯೂ ಉತ್ತಮವಾಗಿದೆ. ಅಲ್ಲದೇ ಶಬ್ದವಿಲ್ಲದೇ ಸಂಚಾರ ನಡೆಸುತ್ತದೆ, ಹೊರಗಿನ ಹೆಚ್ಚಿನ ಶಬ್ದ ಕೇಳದಂತೆ ಬಸ್ಗಳನ್ನು ವಿನ್ಯಾಸಗೊಳಿಸಲಾಗಿದೆ.
ಐರಾವತ ಮತ್ತು ಇವಿ ಪವರ್ ಪ್ಲಸ್ ಎಲೆಕ್ಟ್ರಿಕ್ ಬಸ್ಗಳ ದರಗಳು ಒಂದೇ ಆಗಿವೆ. ಆದ್ದರಿಂದ ಬಹುತೇಕ ಜನರು ಎಲೆಕ್ಟ್ರಿಕ್ ಬಸ್ ಬಿಟ್ಟು ಐರಾವತ ಬಸ್ಗಳಲ್ಲಿಯೇ ಸಂಚಾರ ನಡೆಸುತ್ತಿರುವುದು ಪ್ರಯಾಣಿಕರ ಕೊರತೆಗೆ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ.
ಶಿವಮೊಗ್ಗ-ತುಮಕೂರು ನಡುವೆ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಬಸ್ಗಳು ನಿಧಾನವಾಗಿ ಸಂಚಾರ ನಡೆಸುತ್ತಿವೆ. ಬೆಂಗಳೂರು-ಶಿವಮೊಗ್ಗ ನಡುವೆ 5.30 ಅಥವ 6 ಗಂಟೆಯಲ್ಲಿ ಸಂಚಾರ ನಡೆಸಬೇಕಾದ ಬಸ್ಗಳು 8 ಗಂಟೆ ತೆಗೆದುಕೊಳ್ಳುತ್ತಿವೆ. ಆದ್ದರಿಂದಲೂ ಜನರು ಈ ಬಸ್ ಹತ್ತುತ್ತಿಲ್ಲ ಎಂದು ವಿಶ್ಲೇಷಿಸಲಾಗಿದೆ.
ಕೆಎಸ್ಆರ್ಟಿಸಿ ಇವಿ ಪವರ್ ಪ್ಲಸ್ ಹೆಸರಿನ ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭ ಮಾಡುವುದಕ್ಕೂ ಮೊದಲು ಸಾಕಷ್ಟು ಸಿದ್ಧತೆಯನ್ನು ಮಾಡಿಕೊಂಡಿತ್ತು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾರ್ಜಿಂಗ್ ಪಾಯಿಂಟ್ ಆರಂಭಿಸಿ ಬಳಿಕ ಸೇವೆ ಆರಂಭಿಸಿತ್ತು. ಆದರೆ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಪ್ರಯಾಣಿಕರ ಕೊರತೆ ಇದೆ.
'ಮೇಕ್ ಇನ್ ಇಂಡಿಯಾ' ವಿದ್ಯುತ್ ಬಸ್ ಫೇಮ್-2 ಯೋಜನೆಯಯಲ್ಲಿ 50 ಅಂತರ-ನಗರ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಕೆಎಸ್ಆರ್ಟಿಸಿ ಆರಂಭಿಸಿದೆ. ಓಲೆಕ್ಟ್ರಾ ಕಂಪನಿಯ ಬಸ್ಗಳು ಇದಾಗಿವೆ. ದೇಶದ ಮೊದಲ ಬಹು ದೂರದ ಅಂತರ-ನಗರ ಎಲೆಕ್ಟ್ರಿಕ್ ಬಸ್ಗಳು ಇದಾಗಿದೆ.
ಈ ಬಸ್ ಪ್ರತಿ ಚಾರ್ಜ್ಗೆ 300 ಕಿ. ಮೀ. ವರೆಗೂ ಸಂಚಾರ ನಡೆಸುತ್ತದೆ. ಸುಧಾರಿತ Li-ion Phosphate ಬ್ಯಾಟರಿಯನ್ನು 2-3 ಗಂಟೆಗಳ ಅವಧಿಯಲ್ಲಿ ಫಾಸ್ಟ್ ಚಾರ್ಜರ್ನೊಂದಿಗೆ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು. ಬಸ್ 43 + ನಿರ್ವಾಹಕರು + ಚಾಲಕರ ಆಸನ ಸಾಮರ್ಥ್ಯವನ್ನು ಹೊಂದಿದೆ. 12 ಮೀ., ಹವಾನಿಯಂತ್ರಿತ ಬಸ್ಗಳು ಎಲೆಕ್ಟ್ರಾನಿಕ್ ನಿಯಂತ್ರಿತ ಏರ್ ಸಸ್ಪೆನ್ಷನ್ನಿಂದಾಗಿ ಆರಾಯದಾಯಕ ಅನುಭವವನ್ನು ಪ್ರಯಾಣಿಕರಿಗೆ ನೀಡುತ್ತದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications