Get Updates
Get notified of breaking news, exclusive insights, and must-see stories!

ಮಲೆನಾಡಿಗೆ ಐಷಾರಾಮಿ ಬಸ್‌ಗಳನ್ನು ಪರಿಚಯಿಸಿದ ಉದ್ಯಮಿ ಸಾವಿಗೆ ಮರುಗಿದ ಜನ

ಶಿವಮೊಗ್ಗ, ಜನವರಿ 25: ಬಸ್ ಕ್ಲೀನರ್ ಆಗಿದ್ದ ಸಾಮಾನ್ಯ ವ್ಯಕ್ತಿ, ಮಲೆನಾಡು ಭಾಗದ ಸಾರಿಗೆ ಉದ್ಯಮವನ್ನು 'ಪ್ರಕಾಶ'ಮಾನಗೊಳಿಸಿದ್ದರು. ನೂರಾರು ಮಂದಿಗೆ ನೌಕರಿ ಕೊಟ್ಟು, ಹಲವರ ಬದುಕಿಗೆ ಆಸರೆಯಾಗಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ವ್ಯಕ್ತಿಯ ಬದುಕು ದುರಂತ ಅಂತ್ಯ ಕಂಡಿದ್ದು, ಇದಕ್ಕೆ ಇಡೀ ಮಲೆನಾಡು ಮರುಗಿದೆ.

ಶಿವಮೊಗ್ಗ ಜಿಲ್ಲೆ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಕಳೆದ ಶುಕ್ರವಾರ ಮನೆಯಿಂದ ಹೊರಟವರು ಹಿಂತಿರುಗಿರಲಿಲ್ಲ. ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು. ಸೋಮವಾರ ಬೆಳಗ್ಗೆ ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಬಳಿ ಶರಾವತಿ ಹಿನ್ನೀರಿನಲ್ಲಿ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ.

 ಕಾರು, ಮೊಬೈಲ್, ಚಪ್ಪಲಿಗಳು

ಕಾರು, ಮೊಬೈಲ್, ಚಪ್ಪಲಿಗಳು

ಜನವರಿ 22ರಂದು ಬೆಳಗ್ಗೆ ಪಟಗುಪ್ಪ ಸೇತುವೆ ಮೇಲೆ ಕಾರು ನಿಂತಿತ್ತು. ಪರಿಶೀಲನೆ ಬಳಿಕ ಅದು ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರದ್ದು ಎಂದು ಗೊತ್ತಾಗಿದೆ. ಕಾರಿನಲ್ಲೇ ಮೊಬೈಲ್ ಫೋನ್ ಇತ್ತು. ಸ್ವಲ್ಪ ದೂರದಲ್ಲಿ ಅವರ ಚಪ್ಪಲಿಗಳು ಸಿಕ್ಕಿದ್ದವು. ಮಾಹಿತಿ ತಿಳಿಯುತ್ತಿದ್ದಂತೆ ಹೊಸನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯು ಪ್ರಕಾಶ್ ಅವರ ಶೋಧ ಕಾರ್ಯ ಆರಂಭಿಸಿದರು. ಕುಟುಂಬದವರು, ಆಪ್ತರು, ಟ್ರಾವೆಲ್ಸ್ ಸಂಸ್ಥೆಯ ನೌಕರರು ಪಟಗುಪ್ಪ ಸೇತುವೆ ಬಳಿ ತೆರಳಿದರು. ಎರಡು ದಿನ ಶೋಧ ಕಾರ್ಯ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.

 ಕ್ಲೀನರ್ ಆಗಿದ್ದವರು ಮಾಲೀಕರಾದರು

ಕ್ಲೀನರ್ ಆಗಿದ್ದವರು ಮಾಲೀಕರಾದರು

ಪ್ರಕಾಶ್ ಅವರು ಮೂಲತಃ ಹಾಸನ ಜಿಲ್ಲೆಯ ಕಾಣೆಗೆರೆ ಗ್ರಾಮದವರು. ಉದ್ಯೋಗ ಅರಸಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿಗೆ ಬಂದರು. ವಾಹನ ಚಾಲನೆ ಮಾಡಲು ಗೊತ್ತಿದ್ದರಿಂದ ಶಾರದಾ ಡ್ರೈವಿಂಗ್ ಸ್ಕೂಲ್‌ನಲ್ಲಿ ವಾಹನ ಚಾಲಕರಾಗಿದ್ದರು. ಸ್ವಲ್ಪ ಸಮಯದ ಬಳಿಕ ಗೀತಾ ಬಸ್‌ನ ಕ್ಲೀನರ್ ಆದರು. ಬಳಿಕ ಕಂಡಕ್ಟರ್, ಡ್ರೈವರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. 1997ರಲ್ಲಿ ಪ್ರಕಾಶ್ ಅವರು ತಮ್ಮ ಸಹೋದರ ಗಂಗರಾಜು ಅವರೊಂದಿಗೆ ಪ್ರಕಾಶ್ ಟ್ರಾವೆಲ್ಸ್ ಆರಂಭಿಸಿದರು. ಒಂದು ಬಸ್ ಖರೀದಿಸಿ ಸಾಗರ- ಸೊರಬ ನಡುವೆ ಸೇವೆ ಆರಂಭಿಸಿದರು.

 ಐಷಾರಾಮಿ ಬಸ್‌ಗಳ ಪರಿಚಯ

ಐಷಾರಾಮಿ ಬಸ್‌ಗಳ ಪರಿಚಯ

ಮಲೆನಾಡಿಗೆ ಐಷಾರಾಮಿ ಬಸ್ಸುಗಳನ್ನು ತಂದ ಮೊದಲಿಗರಲ್ಲಿ ಪ್ರಕಾಶ್ ಅವರು ಒಬ್ಬರು. ಭದ್ರಾವತಿ, ಶಿವಮೊಗ್ಗ ತಾಲೂಕುಗಳು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ತಾಲೂಕಿನಿಂದಲೂ ಬೆಂಗಳೂರಿಗೆ ಡೈರೆಕ್ಟ್ ಬಸ್ ಸೇವೆ ಆರಂಭಿಸಿದರು. ಸ್ಲೀಪರ್, ಸೆಮಿ ಸ್ಲೀಪರ್‌ಗಳು ನಿತ್ಯ ಓಡಾಟ ಆರಂಭಿಸಿದವು. ಜೊತೆಗೆ ಆರು ಸೆಮಿ ಸ್ಲೀಪರ್ ಟೂರಿಸ್ಟ್ ಬಸ್‌ಗಳು ಪ್ರವಾಸಿಗರನ್ನು ಸೆಳೆದವು. ಸಾಗರ, ಹೊಸನಗರ, ಸೊರಬ ಭಾಗದಲ್ಲಿ ಮದುವೆ ಸಮಾರಂಭಕ್ಕಂತೂ ಈ ಬಸ್‌ಗಳಿಗೆ ಜನ ಡಿಮಾಂಡ್ ಮಾಡುತ್ತಿದ್ದರು.

 ನೂರಾರು ಉದ್ಯೋಗಿಗಳು

ನೂರಾರು ಉದ್ಯೋಗಿಗಳು

ಪ್ರಕಾಶ್ ಟ್ರಾವೆಲ್ಸ್ ಹೆಸರಿನಲ್ಲಿ 50ಕ್ಕೂ ಹೆಚ್ಚು ಬಸ್ಸುಗಳಿವೆ. ಪ್ರತ್ಯಕ್ಷ, ಪರೋಕ್ಷವಾಗಿ ಸುಮಾರು 500 ಮಂದಿ ಪ್ರಕಾಶ್ ಟ್ರಾವೆಲ್ಸ್‌ನಿಂದ ಜೀವನ ಕಟ್ಟಿಕೊಂಡಿದ್ದಾರೆ. ದೊಡ್ಡ ಸಂಖ್ಯೆ ಸಿಬ್ಬಂದಿ ಇದ್ದರೂ, ಪ್ರಕಾಶ್ ಅವರು ತಾಳ್ಮೆಯಿಂದಲೇ ವ್ಯವಹರಿಸುತ್ತಿದ್ದರು. ಎಂತಹ ಸಂದರ್ಭದಲ್ಲೂ ಸಿಬ್ಬಂದಿ ಜೊತೆ ನಿಲ್ಲುತ್ತಿದ್ದರು. ಇದೇ ಕಾರಣಕ್ಕೆ ಅನೇಕ ಸಿಬ್ಬಂದಿ ಹಲವು ವರ್ಷದಿಂದ ಪ್ರಕಾಶ್ ಟ್ರಾವೆಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.

 ಕೊರೊನಾದಿಂದ ಉದ್ಯಮಕ್ಕೆ ಪೆಟ್ಟು

ಕೊರೊನಾದಿಂದ ಉದ್ಯಮಕ್ಕೆ ಪೆಟ್ಟು

ಕೊರೊನಾ ಮತ್ತು ಲಾಕ್‌ಡೌನ್‌ನಿಂದಾಗಿ ಸಾರಿಗೆ ಉದ್ಯಮ ಸಂಕಷ್ಟಕ್ಕೀಡಾಯಿತು. ಪ್ರಕಾಶ್ ಟ್ರಾವೆಲ್ಸ್‌ಗೂ ದೊಡ್ಡ ಪೆಟ್ಟು ಬಿತ್ತು. ಹಾಗಿದ್ದೂ ಲಾಕ್‌ಡೌನ್ ಸಂದರ್ಭದಲ್ಲಿ ಪ್ರಕಾಶ್ ಸಿಬ್ಬಂದಿಗೆ ನೆರವಾಗಿದ್ದರು. ಲಾಕ್‌ಡೌನ್ ತೆರವಾದ ಬಳಿಕ ಸರ್ಕಾರದ ನಿರ್ಬಂಧ, ಕೋವಿಡ್ ಮಾರ್ಗಸೂಚಿಗಳ ಪರಿಣಾಮ ಪ್ರಕಾಶ್ ಟ್ರಾವೆಲ್ಸ್ ಸಂಪೂರ್ಣ ನಷ್ಟದ ಹಾದಿ ಹಿಡಿಯಿತು. ಬಸ್ಸುಗಳ ನಿರ್ವಹಣೆ, ಸಿಬ್ಬಂದಿ ಸಂಬಳ, ಪಡೆದ ಸಾಲ ತೀರಿಸುವ ಒತ್ತಡ ಎದುರಾಯಿತು.

ಆರ್ಥಿಕ ಸಂಕಷ್ಟ ನಿವಾರಿಸಿಕೊಳ್ಳುವ ಸಲುವಾಗಿ ಇತ್ತೀಚೆಗಷ್ಟೆ ಪ್ರಕಾಶ್ ಅವರು ಎರಡು ರೂಟ್‌ಗಳನ್ನು ಮಾರಾಟ ಮಾಡಿದ್ದರು. ಇದರಿಂದ ತಮ್ಮ ಸಮಸ್ಯೆಗಳು ಬಗೆಹರಿಯಲಿದೆ ಎಂದು ಪ್ರಕಾಶ್ ಭಾವಿಸಿದ್ದರು.

 ಸಾವಿನ ಕುರಿತು ಅನುಮಾನ

ಸಾವಿನ ಕುರಿತು ಅನುಮಾನ

ಪ್ರಕಾಶ್ ಅವರು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ದುರ್ಬಲರಾಗಿರಲಿಲ್ಲ. ಅವರ ಹತ್ಯೆಯಾಗಿದೆ ಎಂದು ಕುಟುಂಬದವರು, ಆಪ್ತರು, ಸಂಸ್ಥೆಯ ನೌಕರರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಮಧ್ಯೆ ಕೊರೊನಾದಿಂದ ಸಾರಿಗೆ ಉದ್ಯಮ ತೀವ್ರ ಸಂಕಷ್ಟಕ್ಕೀಡಾಗಿದೆ. ಟ್ರಾವೆಲ್ಸ್ ಉದ್ಯಮ ಆರ್ಥಿಕ ಸಂಕಷ್ಟಕ್ಕೀಡಾಗಿದ್ದರಿಂದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯು ಇದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Recommended Video

      Virat Kohli ಮಗಳನ್ನ ಯಾರೂ ನೋಡ್ಬೇಡಿ ಶೇರ್ ಮಾಡ್ಬೇಡಿ!!ಯಾಕ್ ಗೊತ್ತಾ? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+