ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಗರ ಮಾರಿಕಾಂಬಾಗೆ ಬಾಗೀನ ಅರ್ಪಿಸಿದ ಪ್ರಮೋದಾದೇವಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 25: ಸಾಗರ ಮಾರಿಕಾಂಬಾ ದೇವಿಗೆ ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಇಂದು ಬಾಗೀನ ಸಮರ್ಪಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಕಳೆದ ಒಂದು ವಾರಗಳಿಂದ ಅದ್ಧೂರಿಯಾಗಿ ನಡೆಯುತ್ತಿದ್ದು, ಸಾಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಈ ಬಾರಿಯೂ ಮೈಸೂರು ಸಂಸ್ಥಾನ ರಾಜಾಮಾತೆ ಪ್ರಮೋದಾ ದೇವಿ ಅವರು ಆಗಮಿಸಿ ದೇವಿಯ ದರ್ಶನವನ್ನು ಪಡೆದುಕೊಂಡರು.

ರಾಜ್ಯದ ಪ್ರಸಿದ್ದ ಸಾಗರ ಮಾರಿಕಾಂಬಾ ಜಾತ್ರೆಗೆ ಇಂದು ಚಾಲನೆರಾಜ್ಯದ ಪ್ರಸಿದ್ದ ಸಾಗರ ಮಾರಿಕಾಂಬಾ ಜಾತ್ರೆಗೆ ಇಂದು ಚಾಲನೆ

ಜಾತ್ರಾ ಮಹೋತ್ಸವ ಆಗಮಿಸಿ ಮಾರಿಕಾಂಬಾ ದೇವಿಗೆ ಬಾಗೀನ ಸಮರ್ಪಿಸಿದರು. ರಾಜಮಾತೆ ಪ್ರಮೋದದೇವಿ ಒಡೆಯರ್ ಬಳಿಕ ಕಾರ್ಗಲ್ ನ ಚಾಂಮುಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

Pramodhadevi Wadiyar Offered Bageena To Sagar Marikamba

ಶಿವಮೊಗ್ಗದಲ್ಲಿ ಉದ್ಯೋಗ ಮೇಳ; ನಿಮ್ಮ ಹೆಸರು ನೋಂದಾಯಿಸಿಶಿವಮೊಗ್ಗದಲ್ಲಿ ಉದ್ಯೋಗ ಮೇಳ; ನಿಮ್ಮ ಹೆಸರು ನೋಂದಾಯಿಸಿ

ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಸಾಗರ ಮಾರಿಕಾಂಬಾ ಜಾತ್ರೆಗೆ ಮೈಸೂರು ಸಂಸ್ಥಾನದ ರಾಜಮನೆತನದಿಂದ ಬಾಗೀನ ನೀಡುವ ಸಂಪ್ರದಾಯ ಇದೆ. ಅದೇ ರೀತಿ ರಾಜಮಾತೆ ಪ್ರಮೋದಾದೇವಿ ಇಂದು ಆಗಮಿಸಿ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

English summary
The Mysuru Rajamathe Pramodadevi today presented Bageena to Sagara Marikamba Devi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X