Get Updates
Get notified of breaking news, exclusive insights, and must-see stories!

ಒಕ್ಕಲಿಗರ ಸಂಘ ಖಾಸಗಿ ವಿ.ವಿ. ಸ್ಥಾಪನೆಗೆ ಶೀಘ್ರವೇ ಅನುಮೋದನೆ: ಸಚಿವ ಅಶ್ವತ್ಥನಾರಾಯಣ ಭರವಸೆ

ಸಾಗರ, ಏಪ್ರಿಲ್‌ 14: ಒಕ್ಕಲಿಗರ ಸಂಘದ ವತಿಯಿಂದ ಖಾಸಗಿ ವಿಶ್ವವಿದ್ಯಾನಿಲಯ ಸ್ಥಾಪಿಸಲು ಸರ್ಕಾರವು ಕೆಲವೇ ತಿಂಗಳುಗಳಲ್ಲಿ ಅನುಮೋದನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಒಕ್ಕಲಿಗರ ಸಂಘದ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ಖಾಸಗಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂಬುದು ಸಮುದಾಯದ ಮಠಾಧೀಶರ ಅಪೇಕ್ಷೆಯಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಈ ಕನಸು ನನಸಾಗಲಿದೆ ಎಂದರು.

ಇಲ್ಲಿ ಇಂತಹ ಭವನ ನಿರ್ಮಿಸಬೇಕೆಂಬುದು ಬಹಳ ದಿನಗಳ ಕನಸಾಗಿತ್ತು. ಈಗ ಇದು ಹಲವರ ಶ್ರಮದಿಂದ ಸಾಕಾರವಾಗಿದೆ. ಸಮುದಾಯದ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಇದು ಈಡೇರಿದೆ. ಈ ಕಟ್ಟಡ ನಿರ್ಮಾಣಕ್ಕೆ ಸರ್ಕಾರ 30 ಲಕ್ಷ ರೂ ಮಂಜೂರು ಮಾಡಿದೆ ಎಂದು ಹೇಳಿದರು.

Private University shortly Approval for Vokkaligara Sangha: minister Ashwanth Narayan assures

ದೇಶ ವಿದೇಶಗಳಲ್ಲಿ ಕೂಡ ಒಕ್ಕಲಿಗರು ಸಂಘಟಿತರಾಗಿದ್ದು ನಾಡು ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರೆ. ಸಮುದಾಯದವರ ಅಭಿವೃದ್ಧಿಗಾಗಿ ಸರ್ಕಾರವು ಒಕ್ಕಲಿಗರ ಅಭಿವೃದ್ಧಿ ಕಾರ್ಪೊರೇಷನ್ ಸ್ಥಾಪಿಸಿದೆ. ಒಕ್ಕಲಿಗರು ಎಲ್ಲೆಲ್ಲಿ ಅಲ್ಪಸಂಖ್ಯಾತರಾಗಿದ್ದಾರೋ ಅವರ ಅಭಿವೃದ್ಧಿಗಾಗಿ ಕಾರ್ಪೊರೇಷನ್ ಕೆಲಸ ಮಾಡಲಿದೆ ಎಂದರು.

ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಕೆಂಪೇಗೌಡರು ಕಟ್ಟಿದ ಬೆಂಗಳೂರು ಇವತ್ತು ದೇಶದಲ್ಲೇ ಮುಂಚೂಣಿ ನಗರವಾಗಿದೆ. ತಂತ್ರಜ್ಞಾನ, ಕೌಶಲ, ಉದ್ಯಮಶೀಲತೆ, ನವೋದ್ಯಮ ನಗರವಾಗಿ ಬೆಂಗಳೂರು ಗಮನ ಸೆಳೆದಿದೆ. ಹೀಗೆ ಬೆಂಗಳೂರು ಅಭಿವೃದ್ಧಿ ಕಾಣುವುದರಲ್ಲಿ ಒಕ್ಕಲಿಗರ ಕೊಡುಗೆ ಸಾಕಷ್ಟಿದೆ ಎಂದು ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಒಕ್ಕಲಿಗ ಸಮುದಾಯ ಅಸಹಾಯಕವಾಗಬಾರದು. ನಾವು ಇಚ್ಛಾಶಕ್ತಿ ಆಧಾರಿತ ಪ್ರಯತ್ನಗಳನ್ನು ಮಾಡಿ ಸಾಧನೆ ಮಾಡಬೇಕು. ಕೌಶಲ, ಶಿಕ್ಷಣ, ಜ್ಞಾನದೊಂದಿಗೆ ಜಾಗತಿಕ ಮಟ್ಟದಲ್ಲಿ ನಾವು ಸ್ಪರ್ಧೆ ಮಾಡಬೇಕು ಎಂದು ಆಶಿಸಿದರು. ಒಕ್ಕಲಿಗ ಸಮುದಾಯವು ಮುಂದೆ ಬರಲು ನಾನು ಪ್ರಯತ್ನ ಮಿರಿ ಕೆಲಸ ಮಾಡುತ್ತಿದ್ದೇನೆ, ವಿದ್ಯಾರ್ಥಿಗಳ ಸಾಧನೆಗೆ ಹಾಗೂ ಅವರ ಗುರಿ ತುಂಬಾ ಮುಖ್ಯವಾಗಿರುತ್ತದೆ ಹಾಗಾಗಿ ವಿದ್ಯಾರ್ಥಿಗಳ ಮುಂದೆ ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕೆಂದು ಸಚಿವರು ಒಕ್ಕಲಿಗರಿಗೆ ಸಲಹೆ ನೀಡಿದರು.

ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರ ಒಕ್ಕಲಿಗರ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ಸಹಕಾರಿ ವಲಯದ ಮಂಜಣ್ಣ ಮತ್ತಿತರರು ಕಾರ್ಯಕ್ರದಲ್ಲಿ ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+