ಶಿವಮೊಗ್ಗ; ಪದವಿ, ಸಿಇಟಿ ಪರೀಕ್ಷೆ ವಿರೋಧಿಸಿ ಸಿಎಂ ಮನೆಗೆ ಮುತ್ತಿಗೆ
ಶಿವಮೊಗ್ಗ, ಜುಲೈ 25: ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಸಿಇಟಿ ಮತ್ತು ಪದವಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದೆ ಎಂದು ಆರೋಪಿಸಿ ಎನ್ ಎಸ್ ಯುಐ ಕಾರ್ಯಕರ್ತರು ಇಂದು ಇಲ್ಲಿನ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
Recommended Video
ಭಾರತದಲ್ಲಿ
ಚೀನಾ
ವ್ಯವಹಾರ
ಇನ್ನು
ಮುಂದೆ
ಸುಲಭವಲ್ಲ
|
Oneindia
Kannada
ನಗರ ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಎನ್ ಎಸ್ ಯುಐ ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ಮುತ್ತಿಗೆ ಹಾಕಿದ್ದು, ವಿನೋಬನಗರ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ ಸಿಇಟಿ ಹಾಗೂ ಪದವಿ ಪರೀಕ್ಷೆ ನಡೆಸುವುದಾಗಿ ಸರ್ಕಾರ ಘೋಷಿಸಿದೆ ಎಂದು ಸಿಎಂ ಮನೆಗೆ ಮುತ್ತಿಗೆ ಹಾಕಿದರು.
ಕೋವಿಡ್ ಸೋಂಕಿದ್ದರೂ ಸಿಇಟಿ ಬರೆಯಲು ಅವಕಾಶ!
ರಾಜ್ಯ ಸರ್ಕಾರದ ವಿರುದ್ಧ ಸಂಘಟನೆಯ ಕಾರ್ಯಕರ್ತರು ಘೋಷಣೆ ಕೂಗಿದರು. ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋದರು.
Comments
English summary
NSUI activists protest infront of cm house against the decision of conducting cet, degree examinations inbetween increasing coronavirus cases,