ಕೊರೊನಾ ಸೋಂಕಿತರ ಸಂಬಂಧಿಯಿಂದ ಮೆಗ್ಗಾನ್ ಆಸ್ಪತ್ರೆ ಎದುರು ಪ್ರತಿಭಟನೆ
ಶಿವಮೊಗ್ಗ, ಮೇ 4: ಮೆಗ್ಗಾನ್ ಆಸ್ಪತ್ರೆಯಲ್ಲಿನ ಕರೋನ ಸೋಂಕಿತರ ಸಂಬಂಧಿಗಳು ಇವತ್ತು ದಿಢೀರ್ ಪ್ರತಿಭಟನೆ ನಡೆಸಿದರು. ಆಸ್ಪತ್ರೆ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರ ಆರೈಕೆಗೆ ಈವರೆಗೂ ಸಂಬಂಧಿಯೊಬ್ಬರನ್ನು ಬಿಡಲಾಗುತ್ತಿತ್ತು. ಪಿಪಿಇ ಕಿಟ್ ಧರಿಸಿಕೊಂಡು ಸಂಬಂಧಿಗಳು ವಾರ್ಡ್ ಒಳಗೆ ಹೋಗಬಹುದಾಗಿದೆ. ಆದರೆ ಇವತ್ತು ಮಧ್ಯಾಹ್ನ ಸೋಂಕಿತರ ಜೊತೆಗಿದ್ದ ಸಂಬಂಧಿಗಳನ್ನು ದಿಢೀರನೆ ವಾರ್ಡ್ ನಿಂದ ಹೊರಗೆ ಕಳುಹಿಸಲಾಗಿದೆ.
ಸಂಬಂಧಿಗಳ ಆರೋಪ ಏನು?
ಮೆಗ್ಗಾನ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಸರಿಯಾಗಿ ಆರೈಕೆ ಮಾಡುತ್ತಿಲ್ಲ. ಔಷಧೋಪಚಾರವು ಸರಿಯಾಗಿಲ್ಲ. ಮನೆಯವರೊಬ್ಬರು ಇದ್ದರೆ ಎಲ್ಲವೂ ಸರಿಯಾಗಿ ನಡೆಯಲಿದೆ. ಈಗ ಎಲ್ಲರನ್ನು ದಿಢೀರನೆ ಹೊರಗೆ ಕಳುಹಿಸಿ, ನಮ್ಮವರ ಜೀವಕ್ಕೆ ಕುತ್ತು ತರುವ ಪ್ರಯತ್ನ ನಡೆಯತ್ತಿದೆ ಎಂದು ಆರೋಪಿಸಿದರು.

ಎಮರ್ಜೆನ್ಸಿ ವಾರ್ಡ್ ಬಳಿ ಪ್ರತಿಭಟನೆ
ರೋಗಿಗಳ ಸಂಬಂಧಿಗಳು ಎಮರ್ಜೆನ್ಸಿ ವಾರ್ಡ್ ಕಡೆ ಇರುವ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದರು. ತಮ್ಮನ್ನು ವಾರ್ಡ್ ಒಳಗೆ ಬಿಡಬೇಕು ಎಂದು ಆಗ್ರಹಿಸಿದರು. ವಿಚಾರ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ರೋಗಿಗಳ ಸಂಬಂಧಿಗಳನ್ನು ಸಮಾಧಾನಪಡಿಸಿದರು.

ಮೆಗ್ಗಾನ್ ಆಸ್ಪತ್ರೆ ಆಡಳಿತ ತಮ್ಮನ್ನು ಒಳಗೆ ಬಿಡಬೇಕು. ಇಲ್ಲವಾದಲ್ಲಿ ತಮ್ಮ ಸಂಬಂಧಿಗಳ ಜೀವಕ್ಕೆ ತೊಂದರೆಯಾದರೆ ಆಡಳಿತವೇ ಹೊಣೆ ಎಂದು ಎಚ್ಚರಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications