ಸಹ್ಯಾದ್ರಿ ಉತ್ಸವ:ಪ್ರವಾಸಿ ತಾಣಗಳ ವೀಕ್ಷಣೆಗೆ ಹೆಲಿಕ್ಯಾಪ್ಟರ್ ಆಯೋಜನೆ
ಶಿವಮೊಗ್ಗ, ಜನವರಿ 15: ಸಹ್ಯಾದ್ರಿ ಉತ್ಸವ ಜನವರಿ 23ರಿಂದ 27ರವರೆಗೆ ನಡೆಯುತ್ತಿದ್ದು,ಉತ್ಸವದ ಅಂಗವಾಗಿ ಹೆಲಿಕ್ಯಾಪ್ಟರ್ ಮೂಲಕ ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು ಉತ್ಸವದಲ್ಲಿ ಕೆಸರು ಗದ್ದೆ ಓಟ, ಸೈಕಲ್ ಸ್ಪರ್ಧೆ, ಎತ್ತಿನಗಾಡಿ ಓಟ, ದೇಹದಾರ್ಢ್ಯ ಸ್ಪರ್ಧೆ, ಲಾನ್ ಟೆನ್ನಿಸ್, ಈಜು, ಸ್ಕೇಟಿಂಗ್ ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತಿದೆ ಎಂದರು.
ಉತ್ಸವದ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಬ್ಸಿಡಿ ದರದಲ್ಲಿ ಬಸ್ ಮೂಲಕ ಟೂರ್ ಪ್ಯಾಕೇಜ್ ಮಾಡಲಾಗಿದೆ. ಒಟ್ಟು 7 ಮಾರ್ಗಗಳನ್ನು ಮಾಡಲಾಗಿದ್ದು, ಕೇವಲ 100ರೂ. ದರ ನಿಗದಿಪಡಿಸಲಾಗಿದೆ.

ಸೈನ್ಸ್ ಮೈದಾನದಿಂದ ಪ್ರತಿದಿನ ಮುಂಜಾನೆ 7.30ಗಂಟೆಗೆ ಬಸ್ ಹೊರಟು ಸಂಜೆ 5.30ಕ್ಕೆ ವಾಪಾಸಾಗಲಿದೆ. ಉತ್ತಮ ಗುಣಮಟ್ಟದ ಖಾಸಗಿ ಬಸ್ ಗಳ ಮೂಲಕ ಪ್ರವಾಸ ಆಯೋಜಿಸಲಾಗುವುದು.
ಮಧ್ಯಾಹ್ನದ ಊಟದ ವೆಚ್ಚವನ್ನು ಸಹ ಭರಿಸಲಾಗುವುದು. ಸಾರ್ವಜನಿಕರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕಡಿಮೆ ವೆಚ್ಚದಲ್ಲಿ ಭೇಟಿ ನೀಡಲು ಇದು ಉತ್ತಮ ಅವಕಾಶವಾಗಿದೆ. ಚಾರಣಪ್ರಿಯರಿಗಾಗಿ ಚಾರಣ ಮಾರ್ಗವನ್ನು ಗುರುತಿಸಿ ಗೈಡೆಡ್ ಚಾರಣ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications