ಶಿವಮೊಗ್ಗ: ಮಳೆಯಲ್ಲಿ ಸಿಲುಕಿದ್ದ 150 ಮಂದಿಗೆ ಆಪತ್ಭಾಂಧವರಾದ ಅಗ್ನಿಶಾಮಕ ದಳ
ಶಿವಮೊಗ್ಗ, ಮೇ 24: ಭಾರಿ ಮಳೆಗೆ ಚರಂಡಿಗಳು ತುಂಬಿ ರಸ್ತೆಗಳು ಜಲಾವೃತವಾಗಿತ್ತು. ಮನೆಗಳಿಗೂ ನೀರು ನುಗ್ಗಿತ್ತು. ಮನೆ ಒಳಗಿದ್ದವರಿಗೆ ಹೊರಗೆ ಬರಲು ಭಯ. ಒಳಗಿರಲು ಆತಂಕ. ಇಂತಹ ಸಂದರ್ಭ ಜನರ ನೆರವಿಗೆ ಬಂದಿದ್ದೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ. ಮೇ 19ರಂದು ಶಿವಮೊಗ್ಗ ನಗರ ಅಕ್ಷರಶಃ ಮುಳುಗಿತ್ತು. ಸ್ಮಾರ್ಟ್ ಸಿಟಿ ಅವಾಂತರ, ಪಾಲಿಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ನಗರದ ಬಹು ಬಡಾವಣೆಗಳು ಜಲಾವೃತವಾಗಿದ್ದವು. ಇಂತಹ ಸಂದರ್ಭ ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು, ಹಗಲು, ರಾತ್ರಿ ಕೆಲಸ ಮಾಡಿದರು. 150ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು.
ಮೇ 19 ಬೆಳಗ್ಗೆ 10.30ಕ್ಕೆ ಆರ್.ಎಂ.ಎಲ್ ನಗರದ ಎರಡು ಕಡೆ ಮೊದಲ ರಕ್ಷಣಾ ಕಾರ್ಯಾಚರಣೆ ನಡೆಸಿಲಾಯಿತು. 25 ಜನರನ್ನು ರಕ್ಷಣೆ ಮಾಡಲಾಯಿತು. ಆ ಬಳಿಕ ಸುಮಾರು 15 ಕಡೆ ಅಗ್ನಿಶಾಮಕ ಸಿಬ್ಬಂದಿ ರೆಸ್ಕ್ಯೂ ಆಪರೇಷನ್ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿಯ ರಕ್ಷಣಾ ಕಾರ್ಯಾಚರಣೆ ಕುರಿತ ಇನ್ನಷ್ಟು ವಿವರ ಮುಂದಿದೆ...

ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ
ಗೋಪಾಲಗೌಡ ಬಡಾವಣೆ, ಶರಾವತಿ ನಗರ, ಮಿಳಘಟ್ಟ, ಗಾಂಧಿ ನಗರ, ಹೊಸಮನೆ, ವೆಂಕಟೇಶ ನಗರ, ಲಕ್ಷ್ಮೀ ಟಾಕೀಸ್ ಬಳಿ, ವಿದ್ಯಾನಗರದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದರು. ಈ ವೇಳೆ ಹಸುಗೂಸಿನಿಂದ ವಯೋವೃದ್ಧರ ತನಕ 150ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದರು.

ಅಬ್ದುಲ್ ಅಜೀಜ್ ಖಾನ್ ಎಂಬುವವರ ರಕ್ಷಣೆ
ಆರ್.ಎಂ.ಎಲ್ ನಗರದಲ್ಲಿ ಜಲಾವೃತವಾಗಿದ್ದ ಮನೆಯಿಂದ 90 ವರ್ಷದ ಅಬ್ದುಲ್ ಅಜೀಜ್ ಖಾನ್ ಎಂಬುವವರ ರಕ್ಷಣೆ ಮಾಡಲಾಯಿತು. ಅವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಯಿತು. ಗೋಪಾಲ ಗೌಡ ಬಡಾವಣೆಯಲ್ಲಿ ವೃದ್ಧೆಯೊಬ್ಬರನ್ನು ರಕ್ಷಿಸಲಾಯಿತು. ಅದೇ ದಿನ ರಾತ್ರಿ ವಿದ್ಯಾನಗರದಲ್ಲಿ ನವಜಾತ ಶಿಶು ಮತ್ತು ಬಾಣಂತಿಯ ರಕ್ಷಣಾ ಕಾರ್ಯ ನಡೆಸಲಾಯಿತು. ಇವರನ್ನು ಸುರಕ್ಷಿತವಾಗಿ ಬಡಾವಣೆಯಿಂದ ಹೊರಗೆ ಕರೆತರಲಾಯಿತು.

ಜೋರು ಮಳೆ, ಗುಂಡಿಗಳು, ನೀರು
ನಿರಂತರ ಮಳೆ ನಡುವೆ ಅಗ್ನಿಶಾಮಕ ಸಿಬ್ಬಂದಿಗೆ ಸವಾಲೆನಿಸಿದ್ದು ಸ್ಮಾರ್ಟ್ ಸಿಟಿ ಗುಂಡಿಗಳು. ಯಾವ ಬಡಾವಣೆಯಲ್ಲಿ ಎಲ್ಲಿ ಗುಂಡಿ ತೋಡಲಾಗಿದೆ ಅನ್ನುವುದರ ಖಚಿತೆತೆ ಇರಲಿಲ್ಲ. ಹಾಗಾಗಿ ಪ್ರತಿ ಹೆಜ್ಜೆ ಇಡುವಾಗಲು ಮುನ್ನೆಚ್ಚರಿಕೆ ವಹಿಸುತ್ತಿದ್ದರು. ಪ್ರತಿದಿನ ಓಡಾಡುತ್ತಿದ್ದ ರಸ್ತೆಯಲ್ಲಿ ಹೆಜ್ಜೆ ಇಡಲು ಜನರೆ ಹೆದರುತ್ತಿದ್ದ ಸಂದರ್ಭದಲ್ಲೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಕೆಲವು ಕಡೆ ಜನರನ್ನು ಎತ್ತಿಕೊಂಡು ಬಂದು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. ಇನ್ನೂ ಕೆಲವು ಕಡೆ ಹಗ್ಗ ಬಳಸಿ ಜನರ ರಕ್ಷಣೆ ಮಾಡಿದರು.
ಗೋಪಾಲಗೌಡ ಬಡಾಣೆಯಲ್ಲಿ ಜಲಾವೃತವಾಗಿದ್ದ ರಸ್ತೆಯಲ್ಲಿ ತೆರಳುತ್ತಿದ್ದ ಕಾರು ಆಫ್ ಆಗಿತ್ತು. ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದರಿಂದ ಕಾರಿನಲ್ಲಿದ್ದವರು ಕೆಳಗಿಳಿಯಲು ಹೆದರುತ್ತಿದ್ದರು. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ರೆಸ್ಕ್ಯೂ ಆಪರೇಷನ್ ನಡೆಸಿದರು. ಹಗ್ಗದ ಸಹಾಯದಿಂದ ಕಾರಿನಲ್ಲಿದ್ದವರನ್ನು ಕಾಪಾಡಿದರು.

ಪ್ರಾಣಿಗಳನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ
ಇನ್ನು, ಶಿವಮೊಗ್ಗದ ಸೋಮಿನಕೊಪ್ಪ ಕೆರೆಯ ನಡುಗಡ್ಡೆಯಲ್ಲಿ ಕುದುರೆ ಗುಂಪೊಂದು ಸಿಕ್ಕಿಬಿದ್ದಿದ್ದವು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮಾಡಿ 13 ಕುದುರೆಗಳ ರಕ್ಷಣೆ ಮಾಡಿದರು. ಎರಡು ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ನಡುಗಡ್ಡೆಯಲ್ಲಿ ಸಿಕ್ಕಿಬಿದ್ದಿದ್ದವು. ಅವುಗಳ ರಕ್ಷಣೆ ಮಾಡಿ ಕರ್ತವ್ಯ ಪಜ್ಞೆ ಜೊತೆಗೆ ಮಾನವೀಯತೆ ಮರೆದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಚಾಕಚಕ್ಯತೆ ಮತ್ತು ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಸಾವು ನೋವಿನ ಆತಂಕವು ದೂರಾಗಿದೆ. ಶಿವಮೊಗ್ಗದ ಜಲಾವೃತವಾಗಿದ್ದಾಗ ಜೀವದ ಹಂಗು ತೊರೆದು 150ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಿದ್ದಾರೆ. ಇವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications