ಶಿವಮೊಗ್ಗದಲ್ಲಿ ಇನ್ನೆರಡು ದಿನ ಭಾರಿ ಮಳೆ: ಹೈ ಅಲರ್ಟ್ ಘೋಷಣೆ..!
ಶಿವಮೊಗ್ಗ, ಸೆಪ್ಟೆಂಬರ್ 21: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರಿದಿದ್ದು, ಇನ್ನೆರಡು ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೊರಡಿಸಿದೆ.
ಭದ್ರಾ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಿರುವುದರಿಂದ ಈಗಾಗಲೇ 70 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಭದ್ರಾವತಿ ಪಟ್ಟಣದ ಸಿದ್ಧರೂಢ ನಗರ, ಹುತ್ತಾ ಕಾಲೋನಿ, ಬಿ.ಹೆಚ್ ರಸ್ತೆ, ತರಿಕೆರೆ ರಸ್ತೆ ಮುಂತಾದ ಕಡೆಗಳಲ್ಲಿ ನೀರು ಅಪಾರ ಪ್ರಮಾಣದಲ್ಲಿ ನುಗ್ಗಿದ್ದು, ಅಲ್ಲಲ್ಲಿ ರಕ್ಷಣಾ ಕೇಂದ್ರ ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ನೀರಿನ ಮಟ್ಟ ಸ್ವಲ್ಪ ತಗ್ಗಿದೆಯಾದರೂ ಮಲೆನಾಡಿನಲ್ಲಿ ಮಳೆ ಆರ್ಭಟ ಕಡಿಮೆಯಾಗಿಲ್ಲ. ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾದ ದಕ್ಷಿಣದ ಚಿರಾಪುಂಜಿ ಆಗುಂಬೆಯಲ್ಲೂ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಆಗುಂಬೆ ಘಾಟ್ ನ ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದೆ. ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ
ಶರಾವತಿ ಕಣಿವೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈಗಾಗಲೇ ಲಿಂಗನಮಕ್ಕಿ ಜಲಾಶಯ 1811.05 ಅಡಿ ತಲುಪಿದೆ. ಮಳೆ ಇದೇ ರೀತಿ ಮುಂದುವರೆದರೆ, ಲಿಂಗನಮಕ್ಕಿ ಈ ಸಲ ಭರ್ತಿಯಾಗುವ ನಿರೀಕ್ಷೆ ಇದೆ. ಶರಾವತಿ ಕಣಿವೆ ಪ್ರದೇಶದ ಅನೇಕ ಕಡೆ ರಮಣೀಯ ಕಿರು ಜಲಪಾತಗಳು ಸೃಷ್ಠಿಯಾಗಿವೆ. ಎಲ್ಲಾ ಕಡೆ ಕೆರೆ, ಕಟ್ಟೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಕಳೆ ಬಂದಿದೆ.

ತುಂಗಾ ನದಿ ತುಂಬಿ ಹರಿಯುತ್ತಿದೆ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್, ನಾಗೋಡಿಯಲ್ಲಿ ಮಳೆ ಹೆಚ್ಚಾಗಿದ್ದು, ರಸ್ತೆ ಸಂಚಾರ ದುಸ್ತರವಾಗಿದೆ. ಮಾಣಿ, ಯಡೂರು, ಹುಲಿಕಲ್, ಮಾಸ್ತಿಕಟ್ಟೆ, ಚಕ್ರಾ, ಸಾವೆಹಕ್ಲು ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ತೀರ್ಥಹಳ್ಳಿ ಭಾಗದಲ್ಲೂ ಅತಿ ಹೆಚ್ಚು ಮಳೆಯಾಗಿದ್ದು, ತುಂಗಾ ನದಿ ತುಂಬಿ ಹರಿಯುತ್ತಿದೆ. ಕ್ಷಣ ಕ್ಷಣಕ್ಕೂ ನದಿಯ ನೀರು ಹೆಚ್ಚುತ್ತಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೊರಬ ಹಾಗೂ ಶಿಕಾರಿಪುರದಲ್ಲಿ ಕೂಡ ವರುಣನ ಆರ್ಭಟ ಮುಂದುವರಿದಿದೆ.

ಸೆಪ್ಟೆಂಬರ್ ತಿಂಗಳ ಮಳೆಯ ಸರಾಸರಿ ಪ್ರಮಾಣ 164.16 ಮಿ.ಮೀ
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 266.90 ಮಿ.ಮೀ ಮಳೆಯಾಗಿದ್ದು, ಸರಾಸರಿ 38.13 ಮಿ.ಮೀ ಮಳೆ ದಾಖಲಾಗಿದೆ. ಸೆಪ್ಟೆಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿ.ಮೀ ಇದ್ದು, ಇದುವರೆಗೆ ಸರಾಸರಿ 291.65 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 16.40, ಭದ್ರಾವತಿ 3.60, ತೀರ್ಥಹಳ್ಳಿ 97.40, ಸಾಗರ 45.40, ಶಿಕಾರಿಪುರ 9.00, ಸೊರಬ 27.10 ಹಾಗೂ ಹೊಸನಗರದಲ್ಲಿ 68.00 ಮಿ.ಮೀ. ಮಳೆಯಾಗಿದೆ.

ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಕ್ಕೆ
ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರದ ಮಂಟಪ ಮತ್ತೊಮ್ಮೆ ಮುಳುಗಡೆಯಾಗಿದೆ. ನಿನ್ನೆ ರಾತ್ರಿಯಿಂದ ಜಲಾಶಯದ ಹೊರ ಹರಿವು ಹೆಚ್ಚಳವಾಗಿದ್ದು, ತುಂಗಾ ನದಿ ಮೈದುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
ಭದ್ರಾವತಿಯ ಕವಲಗುಂದಿಯಲ್ಲಿ 30 ಮನೆಗಳು ಜಲಾವೃತಗೊಂಡಿದೆ. ಭದ್ರಾವತಿಯ ಹೊಸ ಸೇತುವೆ ಕಳೆದ ರಾತ್ರಿಯಿಂದ ಮುಳುಗಡೆಯಾಗಿದೆ. ಮಲೆನಾಡಿನಲ್ಲಿ ಮಳೆಯ ಪ್ರಮಾಣವು ಹೆಚ್ಚಾಗಿರುವ ಕಾರಣ ಜಲಾಶಯಗಳ ಹಿನ್ನೀರಿನ ಪ್ರಮಾಣದಲ್ಲೂ ಸಾಕಷ್ಟು ಏರಿಕೆ ಕಂಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications