ಎಳ್ಳಾಮಾವಾಸ್ಯೆ ಜಾತ್ರೆಗೆ ಭಕ್ತರನ್ನು ಕೈಬೀಸಿ ಕರೆದ ರಾಮೇಶ್ವರ ಸನ್ನಿಧಿ
ಶಿವಮೊಗ್ಗ, ಜನವರಿ 14: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಎಳ್ಳಾಮಾವಾಸ್ಯೆ ಜಾತ್ರೆಗೆ ಇಡೀ ತೀರ್ಥಹಳ್ಳಿ ರಂಗುಗೊಂಡಿದೆ. ತೀರ್ಥಹಳ್ಳಿಯ ಸೌಂದರ್ಯ ಇಮ್ಮಡಿಗೊಂಡಿತ್ತು. ಪಟ್ಟಣದ ಪ್ರಮುಖ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಇನ್ನು ತುಂಗಾ ಸೇತುವೆಗೆ ಸುಣ್ಣ ಬಣ್ಣದ ಅಲಂಕಾರದ ಜೊತೆಗೆ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ನದಿ ತೀರ ಸೇರಿದಂತೆ ದೇವಸ್ಥಾನದ ಸುತ್ತಮುತ್ತ ಮತ್ತು ದೇವಸ್ಥಾನ ವಿದ್ಯುತ್ ದೀಪದ ಬಣ್ಣದಲ್ಲಿ ಮಿಂದೆದ್ದಿದೆ ಇದು ನೋಡುಗರ ಕಣ್ಮನ ಸೆಳೆಯುತ್ತಿದೆ.
ತೀರ್ಥಹಳ್ಳಿ ತಾಲ್ಲೂಕಿನ ಶ್ರೀ ರಾಮೇಶ್ವರ ದೇವಸ್ಥಾನವು ಜಾತ್ರಾ ಪ್ರಯುಕ್ತ ತನ್ನ ನೋಟವನ್ನೇ ಬದಲಾಯಿಸಿಕೊಂಡಿದ್ದು, ಭಕ್ತರನ್ನು ತನ್ನೆಡೆಗೆ ಆಕರ್ಷಿಸುತ್ತಿದೆ.

ತೀರ್ಥ ಸ್ನಾನಕ್ಕೆ ಸಾಲು ಸಾಲು ಭಕ್ತರು ಬರುತ್ತಿದ್ದಾರೆ. ಬುಧವಾರ ಮುಂಜಾನೆಯಿಂದಲೇ ಸ್ನಾನಕ್ಕೆ ದೂರದೂರಿನಿಂದ ಬಂದ ಭಕ್ತರು ಆಗಮಿಸಿದ್ದರು. ದೇವಸ್ಥಾನ ಸಮಿತಿಯು ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದಾರೆ.

ರಾಮೇಶ್ವರ ದೇವರ ಎಳ್ಳಾಮಾವಾಸ್ಯೆ ಜಾತ್ರೆ ಆರಂಭಗೊಂಡಿದ್ದು, ಪುರಾಣ ಪ್ರಸಿದ್ಧ ರಾಮ ಕೊಂಡದ ಬಳಿ ಬೆಳಿಗ್ಗೆಯಿಂದಲೇ ಜನ ಪುಣ್ಯ ಸ್ನಾನ ಮಾಡಿದರು. ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ತೀರ್ಥಹಳ್ಳಿ ತಾಲ್ಲೂಕು ಆಡಳಿತವು ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡಿದ್ದು, ಜಾತ್ರೆ ಅಂಗಡಿಗಳಿಗೆ ಸ್ಥಳ ಅವಕಾಶ ನೀಡಿಲ್ಲ. ಇನ್ನೂ ಪ್ರತಿ ವರ್ಷದಂತೆ ಜಾತ್ರೆಯ ಅದ್ಧೂರಿ ಇಲ್ಲದೇ ಇದ್ದರೂ, ಜನರ ಸಂಖ್ಯೆಯಲ್ಲಿ ಕಡಿಮೆ ಏನಿಲ್ಲ. ಅಂಗಡಿ ವ್ಯಾಪಾರಿಗಳು ರಸ್ತೆಯುದ್ದಕ್ಕೂ ಮಳಿಗೆಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications