Get Updates
Get notified of breaking news, exclusive insights, and must-see stories!

ಎಳ್ಳಾಮಾವಾಸ್ಯೆ ಜಾತ್ರೆಗೆ ಭಕ್ತರನ್ನು ಕೈಬೀಸಿ ಕರೆದ ರಾಮೇಶ್ವರ ಸನ್ನಿಧಿ

ಶಿವಮೊಗ್ಗ, ಜನವರಿ 14: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಎಳ್ಳಾಮಾವಾಸ್ಯೆ ಜಾತ್ರೆಗೆ ಇಡೀ ತೀರ್ಥಹಳ್ಳಿ ರಂಗುಗೊಂಡಿದೆ. ತೀರ್ಥಹಳ್ಳಿಯ ಸೌಂದರ್ಯ ಇಮ್ಮಡಿಗೊಂಡಿತ್ತು. ಪಟ್ಟಣದ ಪ್ರಮುಖ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಇನ್ನು ತುಂಗಾ ಸೇತುವೆಗೆ ಸುಣ್ಣ ಬಣ್ಣದ ಅಲಂಕಾರದ ಜೊತೆಗೆ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ನದಿ ತೀರ ಸೇರಿದಂತೆ ದೇವಸ್ಥಾನದ ಸುತ್ತಮುತ್ತ ಮತ್ತು ದೇವಸ್ಥಾನ ವಿದ್ಯುತ್ ದೀಪದ ಬಣ್ಣದಲ್ಲಿ ಮಿಂದೆದ್ದಿದೆ ಇದು ನೋಡುಗರ ಕಣ್ಮನ ಸೆಳೆಯುತ್ತಿದೆ.

ತೀರ್ಥಹಳ್ಳಿ ತಾಲ್ಲೂಕಿನ ಶ್ರೀ ರಾಮೇಶ್ವರ ದೇವಸ್ಥಾನವು ಜಾತ್ರಾ ಪ್ರಯುಕ್ತ ತನ್ನ ನೋಟವನ್ನೇ ಬದಲಾಯಿಸಿಕೊಂಡಿದ್ದು, ಭಕ್ತರನ್ನು ತನ್ನೆಡೆಗೆ ಆಕರ್ಷಿಸುತ್ತಿದೆ.

Shivamogga: Rameshwara Jatre Held In Thirthahalli

ತೀರ್ಥ ಸ್ನಾನಕ್ಕೆ ಸಾಲು ಸಾಲು ಭಕ್ತರು ಬರುತ್ತಿದ್ದಾರೆ. ಬುಧವಾರ ಮುಂಜಾನೆಯಿಂದಲೇ ಸ್ನಾನಕ್ಕೆ ದೂರದೂರಿನಿಂದ ಬಂದ ಭಕ್ತರು ಆಗಮಿಸಿದ್ದರು. ದೇವಸ್ಥಾನ ಸಮಿತಿಯು ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದಾರೆ.

Shivamogga: Rameshwara Jatre Held In Thirthahalli

ರಾಮೇಶ್ವರ ದೇವರ ಎಳ್ಳಾಮಾವಾಸ್ಯೆ ಜಾತ್ರೆ ಆರಂಭಗೊಂಡಿದ್ದು, ಪುರಾಣ ಪ್ರಸಿದ್ಧ ರಾಮ ಕೊಂಡದ ಬಳಿ ಬೆಳಿಗ್ಗೆಯಿಂದಲೇ ಜನ ಪುಣ್ಯ ಸ್ನಾನ ಮಾಡಿದರು. ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

Shivamogga: Rameshwara Jatre Held In Thirthahalli

ತೀರ್ಥಹಳ್ಳಿ ತಾಲ್ಲೂಕು ಆಡಳಿತವು ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡಿದ್ದು, ಜಾತ್ರೆ ಅಂಗಡಿಗಳಿಗೆ ಸ್ಥಳ ಅವಕಾಶ ನೀಡಿಲ್ಲ. ಇನ್ನೂ ಪ್ರತಿ ವರ್ಷದಂತೆ ಜಾತ್ರೆಯ ಅದ್ಧೂರಿ ಇಲ್ಲದೇ ಇದ್ದರೂ, ಜನರ ಸಂಖ್ಯೆಯಲ್ಲಿ ಕಡಿಮೆ ಏನಿಲ್ಲ. ಅಂಗಡಿ ವ್ಯಾಪಾರಿಗಳು ರಸ್ತೆಯುದ್ದಕ್ಕೂ ಮಳಿಗೆಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+