ತೀರ್ಥಹಳ್ಳಿ ರಾಮೇಶ್ವರ ದೇಗುಲದ ಅದ್ಧೂರಿ ತೆಪ್ಪೋತ್ಸವ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಾಮೇಶ್ವರ ಜಾತ್ರೆ ಅಂದರೆ ಬಹಳ ಹೆಸರುವಾಸಿ. ಶನಿವಾರ ತೆಪ್ಪೋತ್ಸವದೊಂದಿಗೆ ಜಾತ್ರೆಗೆ ತೆರೆ ಬಿದ್ದಿದೆ. ಇನ್ನೇನು ಸಂಕ್ರಾಂತಿಗೆ ಕೂಡ ಈ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ತೀರ್ಥಹಳ್ಳಿ, ಜನವರಿ 1: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಪ್ರಸಿದ್ಧವಾದ ರಾಮೇಶ್ವರ ದೇವಸ್ಥಾನದ ತೆಪ್ಪೋತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು. ಎಳ್ಳಮಾವಾಸ್ಯೆಯಿಂದ ಆರಂಭಗೊಂಡು ದೇವರ ರಥೋತ್ಸವ ಹಾಗೂ ತೆಪ್ಪೋತ್ಸವ ಹೀಗೆ ಮೂರು ದಿನಗಳ ಕಾರ್ಯಕ್ರಮ ಶನಿವಾರಕ್ಕೆ ಮುಕ್ತಾಯವಾಯಿತು. ಇನ್ನು ಈ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.
ಎಳ್ಳಮಾವಾಸ್ಯೆಯಂದು ಬೆಳಗಿನ ಜಾವ ದೇವರ ಉತ್ಸವಮೂರ್ತಿಗೆ ರಾಮಕೊಂಡದಲ್ಲಿ ಮಜ್ಜನ ಮಾಡಿಸಲಾಗುತ್ತದೆ. ಆ ನಂತರ ನೆರೆದಿದ್ದ ಭಕ್ತರೆಲ್ಲ ಹೊಳೆಯೆಲ್ಲ ಸ್ನಾನ ಮಾಡುತ್ತಾರೆ. ಗೊತ್ತಿದ್ದೋ-ಗೊತ್ತಿಲ್ಲದೆಯೋ ತಾಯಿಗೆ ಹೊಡೆದು-ಬಡಿದು ಮಾಡಿದ್ದಲ್ಲಿ ರಾಮಕೊಂಡದಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರ ಎಂಬುದು ನಂಬಿಕೆ.[ಡಿಸೆಂಬರ್ 1ರಿಂದ 31ರವರೆಗೆ ಆಗುಂಬೆ ಘಾಟಿ ರಸ್ತೆ ಸಂಚಾರ ಬಂದ್]

ಪರಶುರಾಮ ತನ್ನ ತಾಯಿಯನ್ನು ಕೊಂದ ಪಾಪವು ಹೋಗಿದ್ದು ಇದೇ ಸ್ಥಳದಲ್ಲಿ ಎಂಬುದು ಸ್ಥಳೀಯರ ನಂಬಿಕೆ. ಆದ್ದರಿಂದ ಇಲ್ಲಿ ಸ್ನಾನ ಮಾಡಿದರೆ ತಾಯಿಗೆ ತೊಂದರೆ ನೀಡಿದ್ದಲ್ಲಿ, ಅದು ಗೊತ್ತಿದ್ದು ನೀಡಿದಂತಿರಬಹುದು. ಅಥವಾ ಬಾಲ್ಯಾವಸ್ಥೆಯಲ್ಲಿ ಗೊತ್ತಿಲ್ಲದೆ ನೀಡಿದ್ದಂತಿರಬಹುದು. ಅದು ನಿವಾರಣೆ ಆಗುತ್ತದೆ ಎಂಬ ಕಾರಣಕ್ಕೆ ಇಲ್ಲಿಗೆ ಬರುವವರಿದ್ದಾರೆ.

ಇನ್ನು ಕೊಂಡದಲ್ಲಿ ಸ್ನಾನ ಮಾಡಿದ ನಂತರ ದೇವರಿಗೆ ನಮಸ್ಕರಿಸಿ, ಹಣ್ಣು-ಕಾಯಿ ಮಾಡಿಸುತ್ತಾರೆ. ಮೂರು ದಿನ ನಡೆದ ಅನ್ನದಾನಕ್ಕೆ ಭಕ್ತರು ತಮ್ಮಿಂದಾದ ಸೇವೆ ಸಲ್ಲಿಸಿದರು. ನಂತರ ದೊಡ್ಡ ತೇರನ್ನು ಸುಮಾರು ಒಂದು ಕಿಲೋಮೀಟರ್ ದೂರ ಎಳೆದರು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಆರಗ ಸೀಮೆ, ಮುತ್ತೂರು, ಆಗುಂಬೆ, ಕೊಪ್ಪ ಇತರ ಸೀಮೆಗಳು, ಹಳ್ಳಿಗಳಿಂದ ಭಕ್ತರು ಭಾಗವಹಿಸಿದ್ದರು.

ಇನ್ನು ಮೂರನೇ ದಿನ ತೆಪ್ಪದಲ್ಲಿ ಉತ್ಸವಮೂರ್ತಿಯನ್ನು ಇರಿಸಿ, ಸುತ್ತು ಬರಲಾಯಿತು. ಸಂಜೆ ರಥೋತ್ಸವ ಮಾಡಿ, ರಾತ್ರಿ ತೆಪ್ಪೋತ್ಸವ ನಡೆಯಿತು. ಈ ಭಾಗದಲ್ಲಿ ತುಂಬ ದೊಡ್ಡದಾದ ಈ ಜಾತ್ರೆಯಲ್ಲಿ ನೂರಕ್ಕೂ ಹೆಚ್ಚು ಅಂಗಡಿಗಳು ಇದ್ದವು. ಮಕ್ಕಳ ಆಟಿಕೆ ಸಾಮಾನು, ಐಸ್ ಕ್ರೀಮ್, ಬಟ್ಟೆ, ಪಾತ್ರೆ, ತೊಟ್ಟಿಲು ಅಂಗಡಿಗಳಿದ್ದವು. ದೋಸೆ ಮೇಳ ನಡೆಯಿತು.[ಮಲೆನಾಡಿನ ಆತಿಥ್ಯ, ಮನ ಮೆಚ್ಚುವ ಪರಿಸರಕ್ಕೆ 'ಅಮ್ತಿ ಹೋಂ ಸ್ಟೇ']

ಅಂದಹಾಗೆ, ಈ ವರ್ಷ ರಾಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮಾಡುವ ಆಲೋಚನೆ ಇದೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಕಳೆದ ಕೆಲ ವರ್ಷಗಳಿಂದಲೂ ಈ ಬಗ್ಗೆ ಮಾತುಕತೆ ನಡೆಯುತ್ತಿರುವುದರಿಂದ ಈ ವರ್ಷವೂ ಅನುಮಾನ ಅನ್ನುವವರು ಇರುವಂತೆಯೇ, ಈ ವರ್ಷ ದೇಗುಲ ಜೀರ್ಣೋದ್ಧಾರ ಖಂಡಿತಾ ಆಗುತ್ತದೆ ಎನ್ನುವವರೂ ಇದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications