ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಮಳೆಯಿಂದ ಮತ್ತೆ ಕುಸಿದ ರಂಜದಕಟ್ಟೆ ಸೇತುವೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 15: ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೇ ಮಳೆಯಾಗುತ್ತಿದೆ. ಶಿವಮೊಗ್ಗದಲ್ಲೂ ಮಳೆಯಾಗುತ್ತಿದ್ದು, ಈಚೆಗಷ್ಟೆ ದುರಸ್ತಿ ಕಂಡಿದ್ದ ರಂಜದ ಕಟ್ಟೆ ಸೇತುವೆ ಮತ್ತೆ ಕುಸಿದಿದೆ.

ಕುಸಿದು ಬಿದ್ದಿದ್ದ ತೀರ್ಥಹಳ್ಳಿ -ಮಂಗಳೂರು ಸಂಪರ್ಕ ಬೆಸೆಯುವ ರಂಜದಕಟ್ಟೆ ಸೇತುವೆಯನ್ನು ಸೆಪ್ಟೆಂಬರ್ 29ರಂದು ದುರಸ್ತಿಗೊಳಿಸಿ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇದೀಗ ಮತ್ತೆ ಸೇತುವೆ ಕುಸಿದಿದೆ.

ರಂಜದಕಟ್ಟೆ ಸೇತುವೆ ಸಿದ್ಧ; ಉಡುಪಿ-ಮಂಗಳೂರಿನ ಪ್ರಯಾಣಿಕರು ನಿರಾಳರಂಜದಕಟ್ಟೆ ಸೇತುವೆ ಸಿದ್ಧ; ಉಡುಪಿ-ಮಂಗಳೂರಿನ ಪ್ರಯಾಣಿಕರು ನಿರಾಳ

ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸೇತುವೆಯ ಕೆಲವು ಭಾಗ ಕೊಚ್ಚಿ ಹೋಗಿದೆ. ಹೀಗಾಗಿ ಸಂಚಾರವನ್ನು ನಿಲ್ಲಿಸಲಾಗಿದೆ. ಆಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.

Shivamogga: Ranjadakatte Bridge Collapsed Again By Rain

ಸಂಚಾರಕ್ಕೆ ಪರ್ಯಾಯ ಮಾರ್ಗಗಳು
* ಉಡುಪಿ, ಆಗುಂಬೆ, ಸಾಗರ, ಶಿವಮೊಗ್ಗ ಹೋಗುವವರು ತೀರ್ಥಹಳ್ಳಿ ಮಾರ್ಗದಲ್ಲಿ ಕಲ್ಮನೆ, ಉಂಟೂರುಕಟ್ಟೆ ಕೈಮರ ನಂತರ ಸಿಗುವ ಬಿಳುಕೊಪ್ಪ ಇಲ್ಲಿ ಶಾಲಾ ಸಮೀಪ ಇರುವ ರಸ್ತೆಯಲ್ಲಿ ಸಾತ್ಗೋಡು (7 KM) ಸಂಚರಿಸಿ ಅಲ್ಲಿಂದ ಬಲಭಾಗದಿಂದ ಮುಕ್ತಿಹರಿಹರಪುರ, ಬೊಬ್ಬಿ ಮಾರ್ಗವಾಗಿ ತೀರ್ಥಹಳ್ಳಿ ಮಾರ್ಗ ಸಂಪರ್ಕಿಸಬಹುದು.
* ಆಗುಂಬೆ, ಕಮ್ಮರಡಿ, ರಾಮಕೃಷ್ಣಪುರ, ದೇವಂಗಿ, ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದು.
* ಆಗುಂಬೆ ಕೊಪ್ಪ, ಶಿವಮೊಗ್ಗ ಮಾರ್ಗವಾಗಿ ಸಂಚರಿಸಬಹುದು.
* ಉಡುಪಿ, ಹುಲಿಕಲ್, ಮಾಸ್ತಿಕಟ್ಟೆ, ಯಡೂರು, ಕವಲೇದುರ್ಗ, ಕೊಂಡ್ಲೂರು, ತೀರ್ಥಹಳ್ಳಿ ಸಂಪರ್ಕಿಸಬಹುದು.

English summary
Ranjadakatte bridge near teerthahalli which was recently repaired collapsed again due to rain
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X