ಸಾಗರ ಅಥವ ಸೊರಬದಿಂದ ಸ್ಪರ್ಧಿಸಲು ಸಿದ್ಧ : ಹಾಲಪ್ಪ
ಶಿವಮೊಗ್ಗ, ಡಿಸೆಂಬರ್. 08 : 'ಸಾಗರ ಮತ್ತು ಸೊರಬದ ಪೈಕಿ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ, ಪಕ್ಷದ ವರಿಷ್ಠರ ಜೊತೆ ಈ ಕುರಿತು ಮಾತನಾಡಿದ್ದೇನೆ' ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಮಾತನಾಡಿದ ಹರತಾಳು ಹಾಲಪ್ಪ ಅವರು, 'ಒಂದು ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ಪಕ್ಷ ಏನು ಹೇಳುತ್ತದೆಯೋ? ಅದನ್ನು ನಾನು ಪಾಲಿಸುತ್ತೇನೆ' ಎಂದು ಸ್ಪಷ್ಟಪಡಿಸಿದರು.

'ಒಂದು ವೇಳೆ ಪಕ್ಷ ನನಗೆ ಟಿಕೇಟ್ ನೀಡಲು ನಿರಾಕರಿಸಿದರೆ ಬೇಸರವಿಲ್ಲ. ನಾನು ಸಾಮಾನ್ಯ ಕಾರ್ಯಕರ್ತ. ಪಕ್ಷ ಹೇಳಿದಂತೆ ಮಾಡುವುದು ಮಾತ್ರ ನನ್ನ ಕೆಲಸ' ಎಂದು ಹಾಲಪ್ಪ ತಿಳಿಸಿದರು.
ಸಾಗರ ಕ್ಷೇತ್ರದಿಂದ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಸುದ್ದಿ ಶಿವಮೊಗ್ಗ ರಾಜಕಾರಣದಲ್ಲಿ ಹಬ್ಬಿತ್ತು. ಶುಕ್ರವಾರ ಈ ಸುದ್ದಿಯನ್ನು ಬೇಳೂರು ಗೋಪಾಲಕೃಷ್ಣ ತಳ್ಳಿಹಾಕಿದ್ದರು.
ಹರತಾಳು ಹಾಲಪ್ಪ ಅವರು ಸೊರಬ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಆದರೆ, ಈ ಬಾರಿ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಿದ್ದಾರೆ. ಸೊರಬದಲ್ಲಿ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿ, ಸಾಗರದಲ್ಲಿ ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿದ್ದವು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications