ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜೆಡಿಎಸ್‌ಗೆ ನೂತನ ಸಾರಥಿ ನೇಮಕ

By Gururaj
|
Google Oneindia Kannada News

ಶಿವಮೊಗ್ಗ, ಆಗಸ್ಟ್ 13 : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಯತ್ತ ಗಮನ ಹರಿಸಿದೆ. ಶಿವಮೊಗ್ಗ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷರಾಗಿ ಆರ್‌.ಎಂ.ಮಂಜುನಾಥ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಆರ್.ಎಂ.ಮಂಜುನಾಥ ಗೌಡ ಅವರನ್ನು ಅಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಿರಂಜನ್ ಅವರು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು.

ಬಿಜೆಪಿ ಭದ್ರಕೋಟೆಯಾದ ಶಿವಮೊಗ್ಗ, ಚುನಾವಣೆಯಲ್ಲಿ ಗೆದ್ದವರು, ಸೋತವರುಬಿಜೆಪಿ ಭದ್ರಕೋಟೆಯಾದ ಶಿವಮೊಗ್ಗ, ಚುನಾವಣೆಯಲ್ಲಿ ಗೆದ್ದವರು, ಸೋತವರು

ಆರ್.ಎಂ.ಮಂಜುನಾಥ ಗೌಡ ಅವರು 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ತೊರೆದು ಜೆಡಿಎಸ್ ಸೇರಿದ್ದರು. ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ 40127 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಎಚ್ ವಿಶ್ವನಾಥ್ ಸಂದರ್ಶನಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಎಚ್ ವಿಶ್ವನಾಥ್ ಸಂದರ್ಶನ

RM Manjunatha Gowda

ಒಬ್ಬರೂ ಶಾಸಕರಿಲ್ಲ : 2013ರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಮೂರು ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ, 2018ರ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಜಯಗಳಿಸಿಲ್ಲ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಪಕ್ಷ ಸಂಘಟನೆ ಮಾಡುವುದು ನೂತನ ಅಧ್ಯಕ್ಷರ ಮುಂದಿರುವ ಸವಾಲು.

'ದಳಪತಿ'ಯಾದ ಎಚ್.ವಿಶ್ವನಾಥ್ ಮುಂದಿರುವ ಸವಾಲುಗಳು!'ದಳಪತಿ'ಯಾದ ಎಚ್.ವಿಶ್ವನಾಥ್ ಮುಂದಿರುವ ಸವಾಲುಗಳು!

English summary
The Janata Dal (Secular) supremo H.D.Deve Gowda appointed R.M. Manjunatha Gowda as new president for Shivamogga district party unit. Manjunatha Gowda lost 2018 assembly election from Thirthahalli. Party not won any seat in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X