ಶಿವಮೊಗ್ಗದಲ್ಲಿ ರೌಡಿ ಪರೇಡ್, ಚಟುವಟಿಕೆ ಬಿಡಲು ಲಾಸ್ಟ್ ವಾರ್ನಿಂಗ್ ಕೊಟ್ಟ ಎಸ್ಪಿ
ಶಿವಮೊಗ್ಗ, ಜುಲೈ 4: ಬಕ್ರೀದ್, ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ರೌಡಿಗಳ ಮೇಲೆ ಪೊಲೀಸರು ಹೆಚ್ಚಿನ ನಿಗಾ ಇರಿಸಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರ ರೌಡಿ ಪರೇಡ್ ಮಾಡಿ, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ನಗರದ ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. 175 ರೌಡಿಗಳು ಪರೇಡ್ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಮಾಹಿತಿ ಪಡೆದ ಜಿಲ್ಲಾ ರಕ್ಷಣಾಧಿಕಾರಿ ಅವರು, ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.
ಶಿವಮೊಗ್ಗ ಉಪ ವಿಭಾಗದ ಆರು ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್ನಲ್ಲಿ ಪಾಲ್ಗೊಂಡಿದ್ದರು. ದೊಡ್ಡಪೇಟೆ, ಕೋಟೆ, ವಿನೋಬನಗರ, ಜಯನಗರ, ತುಂಗಾ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳಿದ್ದರು. ಆಯಾ ಠಾಣೆಗಳ ವ್ಯಾಪ್ತಿಯ ರೌಡಿಗಳನ್ನು ಪ್ರತ್ಯೇಕವಾಗಿ ನಿಲ್ಲಿಸಿ ವಿಚಾರಣೆ ನಡೆಸಲಾಯಿತು.

ಚಟುವಟಿಕೆ ನಿಲ್ಲಿಸಲು ಡಿಸೆಂಬರ್ ಡೆಡ್ಲೈನ್
ಪರೇಡ್ನಲ್ಲಿ ಪಾಲ್ಗೊಂಡಿದ್ದ ಕೆಲವರು ಈಗಾಗಲೇ ತಮ್ಮ ಎಲ್ಲಾ ಚಟುವಟಿಕೆ ನಿಲ್ಲಿಸಿದ್ದಾರೆ. ಅವರ ಕುರಿತು ಪಟ್ಟಿ ಸಿದ್ಧಪಡಿಸಿಕೊಂಡಿದ್ದೇವೆ. ಡಿಸೆಂಬರ್ ತನಕ ಅವರ ಮೇಲೆ ನಿಗಾ ವಹಿಸಲಾಗುತ್ತದೆ. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸದೆ ಇದ್ದರೆ ಅವರನ್ನು ರೌಡಿ ಪಟ್ಟಿಯಿಂದ ಹೊರಗಿಡುವ ಕಾರ್ಯ ನಡೆಯಲಿದೆ ಎಂದು ಪರೇಡ್ನಲ್ಲಿ ಭಾಗವಹಿಸಿದ್ದ ರೌಡಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದರು.

ರೌಡಿ ಶೀಟರ್ಗಳ ಮೇಲೆ ನಿರಂಗರ ನಿಗಾ
ರೌಡಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ನಿರಂತರ ನಿಗಾ ವಹಿಸಲಾಗುತ್ತದೆ. ಅವರು ಯಾರೊಂದಿಗೆ ಸೇರುತ್ತಾರೆ, ಸಹಚರರು ಯಾರು, ಎಲ್ಲಿ ಸೇರುತ್ತಾರೆ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ. ನಿರಂತರವಾಗಿ ಪರಿಶೀಲನೆ ನಡೆಯಲಿದೆ. ಅಲ್ಲದೇ ಅಂತಹ ವ್ಯಕ್ತಿಗಳ ಮನೆಗಳಿಗೂ ತೆರಳಿ ಪರಿಶೀಲನೆ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಗಾಂಜಾ ಹಾವಳಿ ತಪ್ಪಿಸಲು ಕ್ರಮ
ಜಿಲ್ಲೆಯಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಇದರ ಕಡಿವಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ. ರೌಡಿ ಪರೇಡ್ಗೆ ಬಂದಿದ್ದವರ ಪೈಕಿ ಕೆಲವರು ಗಾಂಜಾ ಸೇವನೆ ಮಾಡುವ ಶಂಕೆ ಇದ್ದು, ಅಂತಹವರ ವಿರುದ್ಧ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಎಚ್ಚರಿಕೆ ನೀಡಿದರು.

ಹಬ್ಬಗಳ ಹಿನ್ನಲೆ ಜಾಗೃತಿ
ಮುಂದಿನ ತಿಂಗಳಿನಿಂದ ಈ ವರ್ಷದ ಸಾಲು ಸಾಲು ಹಬ್ಬಗಳು ಬರಲಿವೆ. ಈ ಹಿನ್ನೆಲೆಯಲ್ಲಿ ರೌಡಿಗಳ ಮೇಲೆ ಹೆಚ್ಚು ನಿಗಾ ವಹಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಕೋಮು ಸೂಕ್ಷ್ಮ ಇರುವುದರಿಂದ ರೌಡಿಗಳ ಮೇಲೆ ಹೆಚ್ಚು ಗಮನ ವಹಿಸಿದ್ದೇವೆ. ಬಕ್ರೀದ್, ಗಣೇಶ ಹಬ್ಬ, ಈದ್ ಮಿಲಾದ್ ಹಬ್ಬಗಳಿವೆ. ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳ ಸಾಗಣೆ ಮಾಡುವ ಸದ್ಯತೆ ಇರುವುದರಿಂದ, ಅಂತಹವರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವರ ಮೇಲೆ ಗೂಂಡಾ ಕಾಯ್ದೆ ಹಾಕಲಾಗುತ್ತಿದೆ. ಈಗಾಗಲೇ ಚೋರ್ ಸಲೀಂ ಎಂಬಾತನ ವಿರುದ್ಧ ಗೂಂಡಾ ಕಾಯ್ದೆ ಹಾಕಲಾಗಿದೆ. ಕಡೇಕಲ್ ಹಬೀಬ್ ಎಂಬಾತನ ವಿರುದ್ಧ ಗೂಂಡಾ ಕಾಯ್ದೆಗೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಾದ್ಯಂತ ಸುಮಾರು 1400 ರೌಡಿಗಳಿದ್ದಾರೆ. ಶಿವಮೊಗ್ಗ ಉಪ ವಿಭಾಗದಲ್ಲಿಯೇ ಸುಮಾರು 800 ರೌಡಿಶೀಟರ್ಗಳಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Recommended Video
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications