ಸಕಾಲದಲ್ಲಿ ನೀಡದ ಸೇವೆ: ಶಿವಮೊಗ್ಗ ಪಾಲಿಕೆ ಆಯುಕ್ತರಿಗೆ ಬಿತ್ತು 20 ಸಾವಿರ ರೂ. ದಂಡ
ಶಿವಮೊಗ್ಗ, ಅಕ್ಟೋಬರ್ 15: ಸಕಾಲದಲ್ಲಿ ಉದ್ಯಮ ಪರವಾನಗಿ ನೀಡದೇ ವಿಳಂಬ ಮಾಡಿದ್ದಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಗ್ರಾಹಕರ ವೇದಿಕೆ ನ್ಯಾಯಾಲಯವು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ವುಡ್ ಇಂಡಸ್ಟಿಗೋಸ್ಕರ ಎಸ್.ಎನ್ ಫಜಲುದ್ದೀನ್ ಎಂಬುವವರು 2018ರ ಜನವರಿ 11 ರಂದು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕಡತ ಕಳೆದಿರುವುದಾಗಿ ಹೇಳಿದ್ದಕ್ಕೆ 2018ರ ಮೇ 25 ರಂದು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಪರವಾನಗಿಗಾಗಿ 5 ಸಾವಿರ ರೂ. ಚಲನ್ ಕೂಡ ಪಾವತಿಸಿದ್ದಾರೆ.
ಸಕಾಲ ಕಾಯಿದೆ ಅಡಿ ಫೆ.21 ರೊಳಗೆ ಉದ್ಯಮ ಪರವಾನಗಿಯನ್ನು ನೀಡಬೇಕಿತ್ತು. ಆದರೆ 2019ರ ಏಪ್ರಿಲ್ 3 ರಂದು ಲೈಸೆನ್ಸ್ ನೀಡಿದ್ದು, ಅದರ ಅವಧಿ 2018ರ ಏಪ್ರಿಲ್ 1 ರಿಂದ 2019ರ ಮಾರ್ಚ್ 31ವರೆಗೆ ಇತ್ತು. ಅವಧಿ ಪೂರ್ಣಗೊಂಡ ಬಳಿಕ ಲೈಸೆನ್ಸ್ ನೀಡಿದ್ದು, ಅದರಿಂದ ಫಜಲುದ್ದೀನ್ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ.

ಈ ಕುರಿತು ಹಲವು ಸಲ ವಿಚಾರಿಸಿದ್ದು, ಮುಕ್ತಾಯಗೊಂಡ ಪರವಾನಗಿ ನೀಡಿರುವುದು ಸರಿಯಲ್ಲ ಚಾಲ್ತಿ ಅವಧಿಯದ್ದು ನೀಡುವಂತೆ ಕೋರಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ತಮಗಾದ ಸೇವಾ ನ್ಯೂನ್ಯತೆಯಿಂದಾಗಿ ಅವರು ಗ್ರಾಹಕರ ಸಂರಕ್ಷಣಾ ಕಾಯಿದೆ 1986 ಕಲಂ 12 ಅಡಿಯಲ್ಲಿ ದೂರು ನೀಡಿದ್ದರು.
ವಿಚಾರಣೆ ನಡೆಸಿದ ಗ್ರಾಹಕ ವೇದಿಕೆಯು ಪಾಲಿಕೆ ಆಯುಕ್ತರಿಗೆ ನೋಟೀಸ್ ಚಾರಿ ಮಾಡಿತ್ತು. ವಿಚಾರಣೆ ವೇಳೆ ಪರವಾನಗಿ ನೀಡಲು ಕೆಎಂಸಿ ಅನ್ವಯ ಅನೇಕ ವಿಧಾನಗಳನ್ನು ಅನುಸರಿಸಬೇಕಾಗಿರುವುದರಿಂದ ವಿಳಂಬವಾಗಿರುವುದಾಗಿ ಸಬೂಬು ನೀಡಿದ್ದಾರೆ. ಆದರೆ ಅವಧಿ ಮುಕ್ತಾಯಗೊಂಡ ಲೈಸೆನ್ಸ್ ನೀಡಿದ್ದು ಸರಿಯಲ್ಲ.
ಇದರಿಂದ ಸೇವಾನ್ಯೂನ್ಯತೆ ಆಗಿದೆ ಎಂದು ಪರಿಗಣಿಸಿ, ದೂರುದಾರರಿಗೆ 5,100 ರುಪಾಯಿಯನ್ನು ದೂರು ದಾಖಲಾದ ದಿನಾಂಕದಿಂದ ಶೇ.9ರ ಬಡ್ಡಿ ಸಮೇತ ಮರುಪಾವತಿ ಮಾಡಬೇಕು.
ಜೊತೆಗೆ ಮಾನಸಿಕ ಒತ್ತಡ, ಸೇವಾನ್ಯೂನ್ಯತೆ ಪರಿಹಾರ ಹಾಗೂ ತಕರಾರು ವೆಚ್ಚಕ್ಕಾಗಿ 20 ಸಾವಿರ ರೂ.ಗಳನ್ನು ಕೊಡುವಂತೆ ವೇದಿಕೆಯ ಅಧ್ಯಕ್ಷರಾದ ಸಿ.ಎಂ ಚಂಚಲ, ಸದಸ್ಯೆ ಸವಿತಾ ಬಿ.ಪಟ್ಟಣಶೆಟ್ಟಿ ಅವರ ಪೀಠ ಸೂಚನೆ ನೀಡಿದೆ. ತಪ್ಪಿದ್ದಲ್ಲಿ ಶೇ.10ರಷ್ಟು ಹೆಚ್ಚಿನ ಬಡ್ಡಿಯನ್ನು ನೀಡುವಂತೆ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications