ಬಹುಮಾನದ ಆಸೆ ಹುಟ್ಟಿಸಿ ಶಿವಮೊಗ್ಗದ ನರ್ಸ್ಗೆ 3 ಲಕ್ಷ ರೂ. ವಂಚನೆ
ಶಿವಮೊಗ್ಗ, ಮಾರ್ಚ್ 16: ಬಹುಮಾನದ ಆಸೆ ಹುಟ್ಟಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ಮೂರು ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಹುಮಾನಕ್ಕೆ ಮೊಬೈಲ್ ನಂಬರ್ ಆಯ್ಕೆಯಾಗಿದೆ ಎಂದು ಪತ್ರ ಕಳುಹಿಸಿ, ವಂಚಿಸಲಾಗಿದೆ.
ಶಿವಮೊಗ್ಗದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವನಿತಾ (29) ಎಂಬುವವರನ್ನು ವಂಚಿಸಲಾಗಿದ್ದು, ದೆಹಲಿಯ ನಾಪ್ಟಾಲ್ ಆನ್ಲೈನ್ ಶಾಪಿಂಗ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ವನಿತಾ ಅವರಿಗೆ ಬಹುಮಾನ ಬಂದಿದೆ ಎಂದು ಪತ್ರ ಕಳುಹಿಸಲಾಗಿತ್ತು. 12.50 ಲಕ್ಷ ರೂ. ಬಹುಮಾನಕ್ಕೆ ಆಯ್ಕೆಯಾಗಿದ್ದೀರ ಎಂದು ಪತ್ರದಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ವನಿತಾ, ಪತ್ರದಲ್ಲಿ ಇದ್ದ ಮೊಬೈಲ್ ನಂಬರಿಗೆ ಕರೆ ಮಾಡಿದ್ದರು.
12.50 ಲಕ್ಷ ರೂ. ಬಹುಮಾನ ನೀಡಲು ಕೆಲವು ಚಾರ್ಜಸ್ಗಳಿವೆ, ಎನ್ಒಸಿ ಬೇಕಿದೆ ಎಂದು ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವನಿತಾ, ಹಂತ ಹಂತವಾಗಿ ಮೂರು ಲಕ್ಷ ರೂ. ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ತಾವು ವಂಚನೆಗೆ ಒಳಗಾಗಿರುವುದು ಅರಿವಿಗೆ ಬರುತ್ತಿದ್ದಂತೆ, ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಚ್ಚರ ವಹಿಸಿ
ಬಹುಮಾನದ ಆಸೆ ಹುಟ್ಟಿಸಿ ಹಣ ಪಡೆದುಕೊಂಡು ವಂಚಿಸುವ ದೊಡ್ಡ ಜಾಲವೇ ಇದೆ. ಈ ಬಗ್ಗೆ ಪೊಲೀಸ್ ಇಲಾಖೆ, ಸೈಬರ್ ತಜ್ಞರು ಜಾಗೃತಿ ಮೂಡಿಸುತ್ತಿದ್ದಾರೆ. ಅಧಿಕೃತ ಸಂಸ್ಥೆಗಳಾದರೆ, ಬಹುಮಾನ ಬಂದಿದ್ದರೆ ಮಾಹಿತಿ ನೀಡಿ, ಬಹುಮಾನವನ್ನು ವಿತರಿಸುತ್ತವೆ. ಬಹುಮಾನಕ್ಕಾಗಿ ಚಾರ್ಜ್ ಎಂದು ಹಣ ಪಡೆಯುವುದಿಲ್ಲ. ಇಂತಹ ವಂಚಕರ ಜಾಲಕ್ಕೆ ಬೀಳದಂತೆ ಎಚ್ಚರ ವಹಿಸಬೇಕಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications