ಕೋರ್ಟ್ ಮಧ್ಯಪ್ರವೇಶದಿಂದ ಸಿಗಂದೂರು ದೇವಸ್ಥಾನ ವಿವಾದ ಸುಖಾಂತ್ಯ
ಶಿವಮೊಗ್ಗ, ಅಕ್ಟೋಬರ್ 22: ಸಾಗರ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸಿಗಂದೂರಿನ ದೇವಾಲಯದಲ್ಲಿ ನವರಾತ್ರಿ ಹಾಗೂ ಮುಂದೆ ನಡೆಯುವ ಪೂಜಾ ವಿಧಿ-ವಿಧಾನಗಳ ಕುರಿತು ಉದ್ಭವಗೊಂಡ ವಿವಾದ ಸುಖಾಂತ್ಯ ಕಂಡಿದೆ. ಹಾಗಂತ ಎಲ್ಲವೂ ಸುಖಾಂತ್ಯ ಕಂಡಿಲ್ಲ. ಪೂಜಾ ವಿಧಿ-ವಿಧಾನಕ್ಕೆ ಮಾತ್ರ ತೆರೆ ಬಿದ್ದಿದೆ.
ಕಳೆದ ಕೆಲವು ತಿಂಗಳುಗಳಿಂದ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಪೂಜಾ ಕೈಂಕರ್ಯ ಹಾಗೂ ನವರಾತ್ರಿ ಪೂಜೆಗೆ ಸಂಬಂಧಪಟ್ಟಂತೆ ಉದ್ಭವಿಸಿದ್ದ ವಿವಾದ ಸಾಗರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಮಧ್ಯಸ್ಥಿಕೆಯಲ್ಲಿ ಬುಧವಾರ ಸುಖಾಂತ್ಯಗೊಂಡಿದೆ.
ದೇವಸ್ಥಾನದ ಭಕ್ತರಾದ ಸಂದೀಪ್ ಜೈನ್ ಹುಲಿದೇವರಬನ ಹಾಗೂ ನವೀನ್ ಜೈನ್ ಕೊಪ್ಪ ಎಂಬುವವರು ದೇವಸ್ಥಾನದ ಪೂಜಾ ವಿಧಿ-ವಿಧಾನಗಳನ್ನು ನಡೆಸಲು ಅರ್ಚಕ ಶೇಷಗಿರಿ ಭಟ್ಟರಿಗೆ ಯಾವುದೇ ರೀತಿಯ ಅಡ್ಡಿ ಆತಂಕ ಉಂಟು ಮಾಡಬಾರದು ಎಂದು ಧರ್ಮದರ್ಶಿ ರಾಮಪ್ಪ ಮತ್ತು ಅವರ ಪುತ್ರ ರವಿಕುಮಾರ್ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಕೋರಿ ಸೋಮವಾರ ದಾವೆ ದಾಖಲಿಸಿದ್ದರು.

ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಸೂಚನೆ
ಈ ದಾವೆಗೆ ಸಂಬಂಧಿಸಿದಂತೆ ದಾವೆ ಹೂಡಿದ್ದ ಪಕ್ಷಗಾರರು ದೇವಾಲಯದ ಧರ್ಮದರ್ಶಿ ರಾಮಪ್ಪ ಹಾಗೂ ಅವರ ಪುತ್ರ ರವಿಕುಮಾರ್ ಹಾಗೂ ಅರ್ಚಕ ಶೇಷಗಿರಿ ಭಟ್ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಕರೆಯಿಸಿದ ನ್ಯಾಯಾಧೀಶರಾದ ಫೆಲಿಕ್ಸ್ ಆಲ್ಫಾನ್ಸೋ ಅಂತೋನಿಯವರು ಮಧ್ಯಸ್ಥಗಾರಿಕೆ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದರು.

ನಲವತ್ತು ಭಕ್ತರ ಉಪಸ್ಥಿತಿ ಮಾತ್ರ ಇರಬೇಕು
ಉಭಯ ಪಕ್ಷಗಾರರ ವಕೀಲರ ಹಾಗೂ ನ್ಯಾಯಾಲಯ ನೇಮಿಸಿದ ಮಧ್ಯಸ್ಥಗಾರರ ಉಪಸ್ಥಿತಿಯಲ್ಲಿ ನಡೆದ ಮಾತುಕತೆಯಲ್ಲಿ ರಾಜಿ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ತೀರ್ಮಾನಿಸಲಾಯಿತು. ಕೋವಿಡ್-19ರ ಸಂದರ್ಭದಲ್ಲಿ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲಿ ಏಕಕಾಲಕ್ಕೆ ನಲವತ್ತು ಭಕ್ತರ ಉಪಸ್ಥಿತಿ ಮಾತ್ರ ಇರಬೇಕು.

ರಾಮಪ್ಪನವರ ಕುಟುಂಬದವರೊಂದಿಗೆ ಹೋಮ
ಈ ಭಕ್ತರು ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂಬ ಅಂಶಕ್ಕೆ ರಾಮಪ್ಪ, ರವಿಕುಮಾರ್ ಮತ್ತು ಶೇಷಗಿರಿ ಭಟ್ ಸಮ್ಮತಿ ಸೂಚಿಸಿದ್ದಾರೆ. ಪೂಜೆಯ ನಂತರ ಮಂಗಳಾರತಿ ತಟ್ಟೆಯನ್ನು ಒಂದು ನಿರ್ದಿಷ್ಟ ಪ್ರದೇಶದಲ್ಲಿ ಇಟ್ಟು ಅದಕ್ಕೆ ನಮಸ್ಕರಿಸಲು ಭಕ್ತರಿಗೆ ಅವಕಾಶ ನೀಡಬೇಕು. ಅರ್ಚಕರು ಅದನ್ನು ಎಲ್ಲಾ ಭಕ್ತರ ಎದುರು ಕೊಂಡೊಯ್ಯಬಾರದು. ದಸರಾ ಹಬ್ಬದ ಅಂಗವಾಗಿ ಅರ್ಚಕ ಶೇಷಗಿರಿ ಭಟ್ ಅವರು ತಮ್ಮ ಕುಟುಂಬದವರೊಂದಿಗೆ, ರಾಮಪ್ಪನವರ ಕುಟುಂಬದವರೊಂದಿಗೆ ಹೋಮವನ್ನು ನಡೆಸಬೇಕು ಎಂಬ ಅಂಶಕ್ಕೆ ಉಭಯ ಪಕ್ಷಗಾರರು ಒಪ್ಪಿಗೆ ಸೂಚಿಸಿದ್ದಾರೆ.

ದೇವಸ್ಥಾನದ ಪೂಜೆ ಹಾಗೂ ಇತರೆ ಚಟುವಟಿಕೆಗಳ ಮುಂದುವರೆಕೆ
ದೇವಾಲಯಕ್ಕೆ ದೇವಿಯ ದರ್ಶನಕ್ಕೆ ಬರುವ ಎಲ್ಲ ಭಕ್ತರು ಸರ್ಕಾರ ಸೂಚಿಸಿದ ಕೋವಿಡ್-19 ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಬೇಕು. ಕೋವಿಡ್ ಪಿಡುಗು ಮುಕ್ತಾಯವಾದ ನಂತರ ರಾಮಪ್ಪ, ರವಿಕುಮಾರ್ ಹಾಗೂ ಶೇಷಗಿರಿ ಭಟ್ಟರು ಪರಸ್ಪರ ಹೊಂದಾಣಿಕೆ ಮೂಲಕ ದೇವಸ್ಥಾನದ ಪೂಜೆ ಹಾಗೂ ಇತರೆ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಲು ಸಮ್ಮತಿ ಸೂಚಿಸಿದ್ದಾರೆ.
ನ್ಯಾಯಾಲಯದ ಸೂಚನೆಯಂತೆ ಮಧ್ಯಸ್ಥಗಾರರ ಮಧ್ಯಸ್ಥಿಕೆಯಲ್ಲಿ ರಾಮಪ್ಪ, ರವಿಕುಮಾರ್ ಹಾಗೂ ಶೇಷಗಿರಿ ಭಟ್ ಅವರು ಹೊಂದಿಕೊಂಡು ಹೋಗಲು ಸಮ್ಮತಿ ಸೂಚಿಸಿದ್ದರಿಂದ ದಾವೆಯನ್ನು ದಾಖಲಿಸಿದ್ದ ಸಂದೀಪ್ ಮತ್ತು ನವೀನ್ ಜೈನ್ ತಮ್ಮ ದಾವೆಯನ್ನು ಹಿಂದಕ್ಕೆ ಪಡೆದಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications