"ಬಿಜೆಪಿಯಲ್ಲಿ ಬಿಎಸ್ವೈ ಸಮಾನ ರಾಜಕಾರಣಿ ಯಾರಿದ್ದಾರೆ ತೋರಿಸಿ''
ಶಿವಮೊಗ್ಗ, ಜನವರಿ 11: ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಸಮಾನ ರಾಜಕಾರಣಿ ಯಾರಿದ್ದಾರೆ ತೋರಿಸಲಿ ಎಂದು ಸಿಎಂ ಬದಲಾವಣೆ ಕುರಿತು ಮಾತನಾಡುವವರಿಗೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಪರೋಕ್ಷ ಸವಾಲ್ ಎಸೆದರು.
ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ನೂತನ ಸದಸ್ಯರಿಗೆ ಅಭಿನಂದನೆ ಮತ್ತು ಸನ್ಮಾನ ಸಮಾರಂಭವದಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ ಮಾತನಾಡಿದರು.
ಬಿ.ಎಸ್ ಯಡಿಯೂರಪ್ಪನವರು ಸಿಎಂ ಆದಾಗಿನಿಂದಲೂ ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿದೆ. ಆದರೆ ಸಿಎಂ ಯಡಿಯೂರಪ್ಪನಂಥ ಸಮರ್ಥ ನಾಯಕರು ನಮ್ಮ ಪಕ್ಷದಲ್ಲಿ ಯಾರಿದ್ದಾರೆ ತಿಳಿಸಿ ಎಂದರು.

ದಕ್ಷಿಣ ಭಾರತದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಮಹಾನಾಯಕ ಯಡಿಯೂರಪ್ಪ. ಅವರು ಪಕ್ಷಕ್ಕಾಗಿ ಜೀವವನ್ನು ಪಣಕ್ಕಿಟ್ಟು ಹೋರಾಡಿದ್ದಾರೆ. ಆದರೆ ವಿರೋಧ ಪಕ್ಷದವರು ಹಾಗೂ ನಮ್ಮ ಪಕ್ಷದ ಕೆಲವರು ಸೇರಿದಂತೆ ನಾಯಕತ್ವ ಬದಲಾವಣೆ ಕುರಿತು ಮಾತನಾಡುವುದು ಕೇಳಿ ನಮಗೆ ಬೇಸರವಾಗಿತ್ತು. ಇಂದಿನ ಪತ್ರಿಕೆಗಳನ್ನು ನೋಡಿ ಸಮಾಧಾನವಾಗಿ ಎಲ್ಲಾ ಬಾಯಿ ಮುಚ್ಚಿದಂತಾಗಿದೆ ಎಂದು ತಿಳಿಸಿದರು.
ಎಲ್ಲಾ ರೀತಿಯ ಊಹಾಪೋಹಗಳಿಗೂ ಹೈಕಮಾಂಡ್ ತೆರೆ ಎಳೆದಿದೆ. ಬಿ.ಎಸ್.ವೈ ಅವರೆ ಅವಧಿ ಮುಗಿಯುವವರೆಗೂ ಮುಂದುವರಿಯಲ್ಲಿದ್ದಾರೆ. ಗೋ ಹತ್ಯೆ ನಿಷೇಧ ಪರಿಣಾಮ ಗೋ ತಾಯಿಯ ಆಶೀರ್ವಾದದಿಂದ ಅವರ ಸ್ಥಾನ ಭದ್ರವಾಗಿದೆ. ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿ ಆಗಿ ಇರಲಿದ್ದು, ರಾಜ್ಯದ ಅಭಿವೃದ್ಧಿ ಕಡೆ ಗಮನ ನೀಡುತ್ತಾರೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications