ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಡಿಕೆಯಿಂದ ಸ್ಯಾನಿಟೈಸರ್ ತಯಾರಿಕೆ: ಯುವ ಉದ್ಯಮಿ ನಿವೇದನ್ ಹೊಸ ಪ್ರಯೋಗ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 22: ಮಲೆನಾಡಿನಲ್ಲಿ ಅದರಲ್ಲೂ ಶಿವಮೊಗ್ಗ ಜಿಲ್ಲೆ ಅತೀ ಹೆಚ್ಚು ಅಡಿಕೆ ಬೆಳೆಯುವ ಬೆಳೆಗಾರರಿದ್ದು, ಅಡಿಕೆಯನ್ನು ಅನೇಕ ಪದಾರ್ಥಗಳಿಗೆ ಬಳಸುತ್ತಾರೆ. ಅದರೆ ಶಿವಮೊಗ್ಗದ ಯುವ ಉದ್ಯಮಿ ನಿವೇದನ್ ಸೆಂಪೆ ಹೊಸ ಪ್ರಯೋಗವನ್ನು ಮಾಡಿದ್ದಾರೆ.

ಈ ಅಡಿಕೆ ಚಹಾ, ಜ್ಯೂಸ್, ವಾಹನಗಳಲ್ಲಿ ಬಳಕೆ ಮಾಡುವ ಫರ್ಫ್ಯೂಮ್ ಮೊದಲಾದವುಗಳನ್ನು ಮಲೆನಾಡಿನ ಜನರ ಜೀವನಾಡಿ ಅಡಿಕೆಯಿಂದಲೇ ತಯಾರು ಮಾಡುವ ಮೂಲಕ ಜನರಿಲ್ಲಿ ಹೆಸರಾಗಿದ್ದಾರೆ.

ಯೋಗ ಶಿಕ್ಷಣ ಖಡ್ಡಾಯ ಮಾಡಲಾಗುವುದು: ಈಶ್ವರಪ್ಪಯೋಗ ಶಿಕ್ಷಣ ಖಡ್ಡಾಯ ಮಾಡಲಾಗುವುದು: ಈಶ್ವರಪ್ಪ

ಅಡಿಕೆಯಿಂದ ಅರೇಕಾ ಟೀ ಅಭಿವೃದ್ಧಿಪಡಿಸಿದ ನಿವೇದನ್ ಸೆಂಪೆ ಅವರು, ಅಡಿಕೆಯಿಂದ ಹ್ಯಾಂಡ್ ಸ್ಯಾನಿಟೈಸರ್ ಕೂಡಾ ಅಭಿವೃದ್ಧಿಪಡಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಅಡಿಕೆಯಿಂದ ಅರೇಕಾ ಸ್ಯಾನಿಟೈಸರ್ ಅಭಿವೃದ್ಧಿಪಡಿಸಿರುವ ನಿವೇದನ್ ಅವರು, ಅದನ್ನು ಗ್ರಾಮೀಣ ಯುವ ಉದ್ಯಮಿಗಳ ಮೂಲಕ ಮಾರುಕಟ್ಟೆಗೆ ಬಿಡುಗಡೆ ಮಾಡುವ ಆಲೋಚನೆ ಹೊಂದಿದ್ದಾರೆ.

Sanitizer Prepared Using Arecanut: A New Experiment by Young Entrepreneur Nivedan

ಸರಕಾರದ ಮಾನದಂಡದ ಪ್ರಕಾರ ಹ್ಯಾಂಡ್ ಸ್ಯಾನಿಟೈಸರ್ನಲ್ಲಿ ಶೇ.70 ರಷ್ಟು ಆಲ್ಕೋಹಾಲ್ ಅಂಶ ಇರಬೇಕು. ಇದರ ಜತೆಗೆ ಅಡಿಕೆಯಲ್ಲಿರುವ ಆ್ಯಂಟಿ ಮೈಕ್ರೋಬಿಯಲ್ ಪದಾರ್ಥ, ಗ್ಯಾಲಿಕ್ ಆ್ಯಸಿಡ್, ಟ್ಯಾನಿಚ್ ಸೇರಿದಂತೆ ಇತರೆ ಅಂಶಗಳನ್ನು ಬಳಸಿಕೊಂಡು ಹ್ಯಾಂಡ್ ಸ್ಯಾನಿಟೈಸರ್ ತಯಾರು ಮಾಡಲಾಗಿದೆ.

ಶಿವಮೊಗ್ಗದ ಮಾರವಳ್ಳಿಯಲ್ಲಿ ಕದಂಬರ ಕಾಲದ ನರಸಿಂಹ ಶಿಲ್ಪ ಪತ್ತೆಶಿವಮೊಗ್ಗದ ಮಾರವಳ್ಳಿಯಲ್ಲಿ ಕದಂಬರ ಕಾಲದ ನರಸಿಂಹ ಶಿಲ್ಪ ಪತ್ತೆ

ಈ ಕುರಿತು ಒನ್ ಇಂಡಿಯಾದೊಂದಿಗೆ ಮಾತನಾಡಿದ ಯುವ ಉದ್ಯಮಿ ನಿವೇದನ್ ಸೆಂಪೆ, ಇಡೀ ದೇಶವೇ ಕೊರೊನಾ ವೈರಸ್ ನಿಂದ ತತ್ತರಿಸಿದ್ದು, ಬೆಂಗಳೂರು ಸೇರಿದಂತೆ ದೇಶ-ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿದ್ದ ಸಾವಿರಾರು ಯುವಕರು, ನಗರಗಳನ್ನು ಬಿಟ್ಟು ಹಳ್ಳಿ ಸೇರಿಕೊಂಡಿದ್ದಾರೆ. ಈ ಯುವಕರಿಗೆ ಕೆಲಸಗಳಿಲ್ಲ ಆದ್ದರಿಂದ ಅಡಿಕೆ ಮಲೆನಾಡಿನಲ್ಲಿ ಸುಲಭವಾಗಿ ಸಿಗುವ ವಸ್ತು. ಇದನ್ನು ಬಳಸಿಕೊಂಡು ಉತ್ಪಾದನೆ ಮಾಡಲು ಯಾರಾದರೂ ಯುವಕರು ಮುಂದಾದರೇ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ನೀಡಿ ಎಲ್ಲಾ ರೀತಿಯಲ್ಲೂ ಪ್ರೋತ್ಸಾಹಿಸುತ್ತೇವೆ ಎಂದರು.

Sanitizer Prepared Using Arecanut: A New Experiment by Young Entrepreneur Nivedan

ಇದರ ಮುಖ್ಯ ಉದ್ದೇಶ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ಹಾಗೂ ಗ್ರಾಮೀಣ ಯುವಕರಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗವನ್ನು ಒದಗಿಸುವುದಾಗಿದೆ ಎಂದು ನಿವೇದನ್ ತಿಳಿಸಿದರು.

ಒಟ್ಟಿನಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಸ್ವ ಉದ್ಯೋಗ ಸೃಷ್ಠಿಸುವಲ್ಲಿ ಹಾಗೂ ಕೊರಾನಾದಿಂದ ಪಾರಾಗಲು ಸ್ಯಾನಿಟೈಸರ್ ಉತ್ಪಾದನೆ ಹಾಗೂ ಅಡಿಕೆ ಬೆಳೆಗಾರರಿಗೂ ಉಪಯೋಗವಾಗುವ ನಿಟ್ಟಿನಲ್ಲಿ ನಿವೇದನ್ ಅವರ ಆಲೋಚನೆ ವಿಶಿಷ್ಟವಾಗಿದ್ದು, ಸರ್ಕಾರದ ಮಟ್ಟದಲ್ಲಿ ಇದಕ್ಕೆ ಪ್ರೋತ್ಸಾಹ ದೊರೆತರೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಬಹು ಉಪಯೋಗಿಯಾಗಲಿದೆ.

English summary
Nivedan, who developed the Areca Sanitizer during the Coronavirus hardship, plans to release it to the market through rural young entrepreneurs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X