ಭದ್ರಾವತಿಯಲ್ಲಿ ಯುವಕನ ಮೇಲೆ ಹಲ್ಲೆ, ಕೋಮು ಗಲಾಟೆಯಲ್ಲ, ವೈಯಕ್ತಿಕ ದ್ವೇಷ!
ಶಿವಮೊಗ್ಗ, ಆಗಸ್ಟ್ 16: ಮನೆ ಮುಂದಿನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಈ ನಡುವೆ ಅಂದರ್ ಬಾಹರ್ ವಿಡಿಯೋ ವೈರಲ್ ಆಗಿದ್ದು, ಹಲ್ಲೆಗೆ ಇದುವೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಭದ್ರಾವತಿ ನೆಹರು ನಗರ ನಿವಾಸಿ ಸುನಿಲ್ (28) ಎಂಬಾತನ ಮೇಲೆ ಹಲ್ಲೆಯಾಗಿದ್ದು, ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಕೆಲಸಕ್ಕೆ ಹೋಗಲು ಸುನಿಲ್ ತನ್ನ ಮನೆ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮುಬಾರಕ್ ಅಲಿಯಾಸ್ ಡಿಚ್ಚಿ, ಸುನಿಲನನ್ನು ಅಡ್ಡಗಟ್ಟಿದ್ದಾನೆ. ಎಡಗೈ, ಭುಜ ಮತ್ತು ತಲೆಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಹಲ್ಲೆ ಬೆನ್ನಿಗೆ ವಿಡಿಯೋ ವೈರಲ್
ಹಲ್ಲೆ ನಡೆದ ಬೆನ್ನಿಗೆ ವಿಡಿಯೋ ವೈರಲ್ ಆಗಿದೆ. ಯುವಕರ ಗುಂಪೊಂದು ಜೂಜಾಟ ಆಡುತ್ತಿರುವುದನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದಾರೆ. ಜೂಜಾಟದಲ್ಲಿ ತೊಡಗಿಕೊಂಡವರಲ್ಲಿ ಸುನಿಲ್ ಕೂಡ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು, ಆ ವಿಡಿಯೋ ರೆಕಾರ್ಡ್ ಮಾಡಿದ್ದು ಮುಬಾರಕ್ ಅಲಿಯಾಸ್ ಡಿಚ್ಚಿ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಸುನಿಲ್ ಹೇಳಿಕೆ ಏನು?
ಇತ್ತ ಹಲ್ಲೆ ಬೆನ್ನಿಗೆ ಸುನಿಲ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. 'ವಿಕಲಾಂಗ ವ್ಯಕ್ತಿಯೊಬ್ಬರ ಜೊತೆಗೆ ಮುಬಾರಕ್ ಜಗಳವಾಡುತ್ತಿದ್ದ. ನಿನ್ನೆ ಇದನ್ನು ನಾನು ಬಿಡಿಸಿದ್ದೆ. ಹಾಗಾಗಿ ಇವತ್ತು ನನ್ನನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾನೆ' ಎಂದು ಹೇಳಿಕೆ ನೀಡಿದ್ದಾನೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣದ ಬೆನ್ನಿಗೆ ಭದ್ರಾವತಿಯಲ್ಲಿಯು ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಈಗ ಸುನಿಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿರುವುದು ಕೆಲಕಾಲ ಗೊಂದಲ ಮೂಡಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications