ಶಿವಮೊಗ್ಗ: 7.26 ಲಕ್ಷ ರೂ.ಗೆ ಮೂರು ಪ್ರಾಣಿಗಳನ್ನು ದತ್ತು ಪಡೆದ ಸವ್ಯಸಾಚಿ ಕುಟುಂಬ
ಶಿವಮೊಗ್ಗ, ಜುಲೈ 26: ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಬರೋಬ್ಬರಿ 7.26 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಹುಲಿ ಮತ್ತು ಸಿಂಹವನ್ನು ದತ್ತು ಪಡೆದುಕೊಂಡು ಸವ್ಯಸಾಚಿ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇದೇ ಮೊದಲು ದೊಡ್ಡ ಮೊತ್ತಕ್ಕೆ ಸುಜಾತ ರಾಮಸ್ವಾಮಿ ಮತ್ತು ಸವ್ಯಸಾಚಿ ಎಂಬುವವರ ಕುಟುಂಬಸ್ಥರು 7.26 ಲಕ್ಷ ರೂ. ಗಳಿಗೆ ಎರಡು ಹುಲಿ ಮತ್ತು ಒಂದು ಸಿಂಹವನ್ನು ದತ್ತು ಪಡೆದುಕೊಂಡಿದೆ.
ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಲಾಕ್ ಡೌನ್ ಇನ್ನಿತರ ಸಮಸ್ಯೆಗಳಿಂದ ಇತ್ತೀಚಿನ ದಿನಗಳಲ್ಲಿ ಲಯನ್ ಸಫಾರಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದ್ದು, ಲಯನ್ ಸಫಾರಿಯ ಆದಾಯಕ್ಕೂ ಹೊಡೆತಬಿದ್ದಿದೆ.

ಈ ರೀತಿಯ ಪರಿಸ್ಥಿತಿಯಲ್ಲಿ ಸವ್ಯಸಾಚಿ ಅವರು ಲಯನ್ ಸಫಾರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಪ್ರಾಣಿಗಳನ್ನು ದತ್ತು ಪಡೆಯುವ ಬಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸಂತೋಷದಿಂದ ದತ್ತು ನೀಡಲು ಮುಂದಾಗಿದ್ದಾರೆ.
ಸವ್ಯಸಾಚಿ ತಮ್ಮ ತಾಯಿಯ ಜೊತೆಗೆ ಆಗಮಿಸಿ ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಲಯನ್ ಸಫಾರಿಯ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ ಚಂದ್ರ ತಿಳಿಸಿದ್ದಾರೆ.

ಈ ಹಿಂದೆ ಕ್ರಿಕೆಟ್ ಕ್ರೀಡಾಪಟು ಅನಿಲ್ ಕುಂಬ್ಳೆ ಶಿವಮೊಗ್ಗ ಲಯನ್ ಸಫಾರಿಯ ಪ್ರಾಣಿಯನ್ನು ದತ್ತು ಪಡೆದಿದ್ದರು. ಇದರ ನಂತರ ದೊಡ್ಡ ಮೊತ್ತಕ್ಕೆ ಪ್ರಾಣಿಯನ್ನು ಯಾರೂ ದತ್ತು ಪಡೆದುಕೊಂಡಿರಲಿಲ್ಲ. ಇದೀಗ ಸವ್ಯಸಾಚಿ ಕುಟುಂಬ ಸಂಕಷ್ಟ ಕಾಲದಲ್ಲಿ ಪ್ರಾಣಿ ದತ್ತು ಪಡೆದುಕೊಂಡಿರುವುದು ಸಮಾಜಕ್ಕೆ ಮಾದರಿಯ ಕೆಲಸವಾಗಿದ್ದು, ಅವರ ಪ್ರಾಣಿ ಪ್ರೇಮಕ್ಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications