ಶಿವಮೊಗ್ಗ: 7.26 ಲಕ್ಷ ರೂ.ಗೆ ಮೂರು ಪ್ರಾಣಿಗಳನ್ನು ದತ್ತು ಪಡೆದ ಸವ್ಯಸಾಚಿ ಕುಟುಂಬ
ಶಿವಮೊಗ್ಗ, ಜುಲೈ 26: ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಬರೋಬ್ಬರಿ 7.26 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಹುಲಿ ಮತ್ತು ಸಿಂಹವನ್ನು ದತ್ತು ಪಡೆದುಕೊಂಡು ಸವ್ಯಸಾಚಿ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇದೇ ಮೊದಲು ದೊಡ್ಡ ಮೊತ್ತಕ್ಕೆ ಸುಜಾತ ರಾಮಸ್ವಾಮಿ ಮತ್ತು ಸವ್ಯಸಾಚಿ ಎಂಬುವವರ ಕುಟುಂಬಸ್ಥರು 7.26 ಲಕ್ಷ ರೂ. ಗಳಿಗೆ ಎರಡು ಹುಲಿ ಮತ್ತು ಒಂದು ಸಿಂಹವನ್ನು ದತ್ತು ಪಡೆದುಕೊಂಡಿದೆ.
ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಲಾಕ್ ಡೌನ್ ಇನ್ನಿತರ ಸಮಸ್ಯೆಗಳಿಂದ ಇತ್ತೀಚಿನ ದಿನಗಳಲ್ಲಿ ಲಯನ್ ಸಫಾರಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದ್ದು, ಲಯನ್ ಸಫಾರಿಯ ಆದಾಯಕ್ಕೂ ಹೊಡೆತಬಿದ್ದಿದೆ.

ಈ ರೀತಿಯ ಪರಿಸ್ಥಿತಿಯಲ್ಲಿ ಸವ್ಯಸಾಚಿ ಅವರು ಲಯನ್ ಸಫಾರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಪ್ರಾಣಿಗಳನ್ನು ದತ್ತು ಪಡೆಯುವ ಬಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸಂತೋಷದಿಂದ ದತ್ತು ನೀಡಲು ಮುಂದಾಗಿದ್ದಾರೆ.
ಸವ್ಯಸಾಚಿ ತಮ್ಮ ತಾಯಿಯ ಜೊತೆಗೆ ಆಗಮಿಸಿ ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಲಯನ್ ಸಫಾರಿಯ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ ಚಂದ್ರ ತಿಳಿಸಿದ್ದಾರೆ.

ಈ ಹಿಂದೆ ಕ್ರಿಕೆಟ್ ಕ್ರೀಡಾಪಟು ಅನಿಲ್ ಕುಂಬ್ಳೆ ಶಿವಮೊಗ್ಗ ಲಯನ್ ಸಫಾರಿಯ ಪ್ರಾಣಿಯನ್ನು ದತ್ತು ಪಡೆದಿದ್ದರು. ಇದರ ನಂತರ ದೊಡ್ಡ ಮೊತ್ತಕ್ಕೆ ಪ್ರಾಣಿಯನ್ನು ಯಾರೂ ದತ್ತು ಪಡೆದುಕೊಂಡಿರಲಿಲ್ಲ. ಇದೀಗ ಸವ್ಯಸಾಚಿ ಕುಟುಂಬ ಸಂಕಷ್ಟ ಕಾಲದಲ್ಲಿ ಪ್ರಾಣಿ ದತ್ತು ಪಡೆದುಕೊಂಡಿರುವುದು ಸಮಾಜಕ್ಕೆ ಮಾದರಿಯ ಕೆಲಸವಾಗಿದ್ದು, ಅವರ ಪ್ರಾಣಿ ಪ್ರೇಮಕ್ಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications