ಬಾಗಲಕೋಟೆಯಲ್ಲಿ ಶಕ್ತಿ ಪ್ರದರ್ಶಿಸಲಿದ್ದಾರೆ ಬಿದರಿ!
ಶಿವಮೊಗ್ಗ, ಮಾ.5 : ಕಾಂಗ್ರೆಸ್, ಸಮಾಜವಾದಿ ಪಕ್ಷ ತೊರೆದು ಸ್ವಂತ ಪಕ್ಷ ಸ್ಥಾಪಿಸಿರುವ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಮತ್ತು ಜನಶಕ್ತಿ ಪಕ್ಷದ ಸಂಸ್ಥಾಪಕ ಶಂಕರ ಬಿದರಿ ಲೋಕಸಭೆ ಚುನಾವಣೆಗೆ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 2-3 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಂಕರ ಬಿದರಿ, ಜನಶಕ್ತಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಮತ್ತು ಇತರ 2-3 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಕಣಕ್ಕಿ ಇಳಿಸಲಿದೆ. ಬಾಗಲಕೋಟೆಯಲ್ಲಿ ತಾವು ಸ್ಪರ್ಧಿಸುತ್ತಿದ್ದು, ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಹೇಳಿದರು. [ಜನಶಕ್ತಿ ಪಕ್ಷ ಸ್ಥಾಪಿಸಿದ ಬಿದರಿ]

ತಾವು ಚುನಾವಣೆಗೆ ಸ್ಪರ್ಧಿಸಿದರೂ ಬೇರೆ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಚುನಾವಣೆಯಲ್ಲಿ ಬೇರೆ ಯವರನ್ನು ಸೋಲಿಸಲು ಅಥವಾ ಇನ್ನೊಬ್ಬರಿಗೆ ಅನುಕೂಲ ಮಾಡಿಕೊಡಲು ತಾವು ಸ್ಪರ್ಧಿಸುತ್ತಿಲ್ಲ ಎಂದು ಶಂಕರ ಬಿದರಿ ಸ್ಪಷ್ಟಪಡಿಸಿದರು. [ಇಲ್ಲಿದೆ ನೋಡಿ ಜನಶಕ್ತಿ ಪಕ್ಷದ ಭರವಸೆಗಳು]
ಜನಶಕ್ತಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದರೆ 50 ಸಾವಿರ, 1 ಲಕ್ಷ ಅಂತರದಲ್ಲಿ ಜಯಗಳಿಸಬೇಕು. ಸೋತರೂ ಅದು ಕಡಿಮೆ ಅಂತರದ್ದಾಗಿರಬೇಕು ಎಂಬುದು ನಮ್ಮ ಉದ್ದೇಶ. ಆದ್ದರಿಂದ ಸರಿಯಾದ ಅಭ್ಯರ್ಥಿಗಳನ್ನೆ ಕಣಕ್ಕಿಳಿಸಲಾಗುವುದು ಎಂದು ಶಂಕರ ಬಿದರಿ ತಿಳಿಸಿದರು. ಮೊದಲು ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುತ್ತಿದೆ. ಆದ್ದರಿಂದ ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದರು.
25 ಲಕ್ಷ ಸದಸ್ಯರು : ಲೋಕಸಭೆ ಚುನಾವಣೆ ಬಳಿಕ ಬರುವ ಎಲ್ಲ ಚುನಾವಣೆಗಳಲ್ಲಿ ಜನಶಕ್ತಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದ ಬಿದರಿ, ಡಿಸೆಂಬರ್ ಅಂತ್ಯದೊಳಗೆ ಪಕ್ಷಕ್ಕೆ 25 ಲಕ್ಷ ಮಂದಿಗೆ ಪ್ರಾಥಮಿಕ ಸದಸ್ಯತ್ವ ನೀಡುತ್ತಿದ್ದು, ಕಾರ್ಯಕರ್ತರಿಗೆ ಪಕ್ಷದ ಧ್ಯೇಯ ಉದ್ದೇಶ ಕುರಿತು ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಯಾವ ನಾಯಕರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನವನ್ನು ತಾವು ಮಾಡುವುದಿಲ್ಲ. ದೇಶದ ಬಗ್ಗೆ ಕಾಳಜಿ ಇರುವವರು ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕೆ ಬದ್ಧರಾಗಿರುವವರು ಪಕ್ಷಕ್ಕೆ ಬರಬಹುದು ಎಂದು ಬಿದರಿ ಆಹ್ವಾನ ನೀಡಿದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications