ಶರಾವತಿ ಹಿನ್ನೀರಿನ ಮಟ್ಟ ಇಳಿಕೆಯಾಗಿ ಲಾಂಚ್ ಸ್ಥಗಿತ: ಸಿಗಂದೂರು ಪ್ರವಾಸಿಗರಿಗೆ ಸಂಕಷ್ಟ
ಶಿವಮೊಗ್ಗ, ಜೂ. 11: ಶರಾವತಿ ಹಿನ್ನೀರಿನ ಮಟ್ಟ ಕುಸಿದ ಹಿನ್ನೆಲೆ ಮುಪ್ಪಾನೆ ಮಾರ್ಗದ ಲಾಂಚ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.
ಮುಪ್ಪಾನೆ ಮಾರ್ಗದಲ್ಲಿ ಸಣ್ಣ ಲಾಂಚ್ ಇದೆ. ಕರೂರು ಹೋಬಳಿಯ ಹಲವು ಗ್ರಾಮಗಳಿಗೆ ಈ ಲಾಂಚ್ ಸಂಪರ್ಕ ಸೇತುವೆಯಾಗಿತ್ತು. ಈಗ ಲಾಂಚ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಹೋಬಳಿಯ ಹಲವು ಗ್ರಾಮಗಳ ಜನರಿಗೆ ಸಂಕಷ್ಟ ತಂದೊಡ್ಡಿದೆ.
35 ಕಿ.ಮೀ ಬದಲು 72 ಕಿ.ಮೀ
ಕರೂರು ಹೋಬಳಿಯ ಒಳಗಿನ ಅನೇಕ ಗ್ರಾಮಗಳಿಗೆ ಮುಪ್ಪಾನೆ ಲಾಂಚ್ ಸಂಪರ್ಕ ಒದಗಿಸುತ್ತಿತ್ತು. 2017ರಲ್ಲಿ ಶಾಸಕ ಹರತಾಳು ಹಾಲಪ್ಪ ಅವರು ಈ ಮಾರ್ಗಕ್ಕೆ ಆದ್ಯತೆ ನೀಡಿ, ಜನ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಮುಪ್ಪಾನೆ ಲಾಂಚ್ ಇಲ್ಲದೆ ಹೋದರೆ ಈ ಭಾಗದ ಗ್ರಾಮಸ್ಥರು ಹೋಬಳಿ ಕೇಂದ್ರ ತಲುಪಲು 72 ಕಿ.ಮೀ ಸಂಚರಿಸಬೇಕಾಗುತ್ತದೆ. ಲಾಂಚ್ ಮೂಲಕ ಶರಾವತಿ ನದಿ ದಾಟಿದರೆ ಕೇವಲ 35 ಕಿ.ಮೀ ಮೂಲಕ ತಲುಪಬಹುದಾಗಿದೆ.

ಪೊಲೀಸರು, ಪ್ರವಾಸಿಗರಿಗೂ ಅನುಕೂಲ
ತುರ್ತು ಸಂದರ್ಭದಲ್ಲಿ ಪೊಲೀಸರು, ವಿದ್ಯುತ್ ಇಲಾಖೆ ಸಿಬ್ಬಂದಿ ಕರೂರು ಹೋಬಳಿಯ ಗ್ರಾಮಗಳಿಗೆ ತಲುಪಲು ಲಾಂಚ್ ಬಳಕೆ ಮಾಡಿಕೊಳ್ಳುತ್ತಿದ್ದರು. ಶಿರಸಿ, ಸಿದ್ಧಾಪುರ ಮಾರ್ಗದಲ್ಲಿ ಓಡಾಡುವವರಿಗೂ ಲಾಂಚ್ ಅನುಕೂಲವಾಗಿತ್ತು. ಸಿಗಂದೂರು ಪ್ರವಾಸಿಗರು ಕೂಡ ಈ ಮಾರ್ಗದಲ್ಲಿ ಓಡಾಡುತ್ತಿದ್ದರು. ಮುಪ್ಪಾನೆ ಲಾಂಚ್ ಸ್ಥಗಿತಗೊಂಡಿರುವುದರಿಂದ ಜನರು ಸುತ್ತಿಬಳಸಿ ಓಡಾಡುವಂತಾಗಿದೆ. ಮಳೆ ಹೆಚ್ಚಳವಾಗಿ ಹಿನ್ನೀರಿನ ಮಟ್ಟ ಏರಿಕೆಯಾದರೆ ಲಾಂಚ್ ಸೇವೆ ಪುನಾರಂಭವಾಗಲಿದೆ.
ಫೆ.28ರಂದು ಸಾಗರ ತಾಲೂಕಿನ ಶರಾವತಿ ಹಿನ್ನಿರಿನಲ್ಲಿ ಸಂತ್ರಸ್ತ ಜನರಿಗೆ ಅಗತ್ಯ ಇರುವ ಕಡೆಗಳಲ್ಲಿ ಲಾಂಚ್ ಹಾಗು ಸೇತುವೆ ನಿರ್ಮಾಣದ ಕೆಲಸಕ್ಕೆ ಆದ್ಯತೆ ನೀಡುತ್ತಿರುವುದಾಗಿ ಶಾಸಕ ಎಚ್ ಹಾಲಪ್ಪ ಹೇಳಿದ್ದರು.

ಸಾಗರದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶರಾವತಿ ಹಿನ್ನಿರಿನ ಎಣ್ಣೆ ಹೊಳೆಯ ಶಿಗ್ಗಲು ಕೋಗಾರು ಲಾಂಚ್ ಸೇವೆಗೆ ಅವರು ಚಾಲನೆ ನೀಡಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications