ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಶರಾವತಿ ನೀರು; ಮತ್ತೆ ಚರ್ಚೆ ಆರಂಭ

|
Google Oneindia Kannada News

ಶಿವಮೊಗ್ಗ, ಮಾರ್ಚ್ 08 : ಬೆಂಗಳೂರು ನಗರಕ್ಕೆ ಶರಾವತಿ ನೀರು ತರುವ ಚರ್ಚೆ ಮತ್ತೆ ಆರಂಭವಾಗಿದೆ. 2019ರಲ್ಲಿ ಈ ಕುರಿತು ಚರ್ಚೆ ನಡೆದಿತ್ತು. ಶಿವಮೊಗ್ಗದಲ್ಲಿ ಈ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಶಿವಮೊಗ್ಗ ಬಂದ್ ನಡೆಸಲಾಗಿತ್ತು.

ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಬೆಂಗಳೂರಿಗೆ ಶರಾವತಿ ನೀರು ತರುವ ಬಗ್ಗೆ ಮಾತನಾಡಿದ್ದಾರೆ. "ಶರಾವತಿ ಜಲಾಶಯದಿಂದ ನೀರು ಹರಿಸುವ ಯೋಜನೆ ಸಿದ್ಧವಿದ್ದು, ಸರ್ಕಾರದ ಅನುಮೋದನೆ ಬಾಕಿ ಇದೆ" ಎಂದು ಹೇಳಿದ್ದಾರೆ.

ಶಿವಮೊಗ್ಗದ ಶರಾವತಿ ಒಡಲಲ್ಲಿ ಶೀಘ್ರ ಮತ್ತೊಂದು ಯೋಜನೆಶಿವಮೊಗ್ಗದ ಶರಾವತಿ ಒಡಲಲ್ಲಿ ಶೀಘ್ರ ಮತ್ತೊಂದು ಯೋಜನೆ

"ಶರಾವತಿಯಲ್ಲಿ ಲಭ್ಯವಿರುವ 30 ಟಿಎಂಸಿ ಅಡಿ ನೀರಿನಲ್ಲಿ ಮೊದಲ ಹಂತದಲ್ಲಿ 15 ಟಿಎಂಸಿ ಅಡಿ ನೀರನ್ನು ತರುವ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅನಿವಾರ್ಯವಾಗಿದೆ" ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Sharavati Water

ಬ್ರೇಕಿಂಗ್ ನ್ಯೂಸ್ : ಬೆಂಗಳೂರಿಗೆ ಶರಾವತಿ ನೀರು ತರುವ ಪ್ರಸ್ತಾಪವಿಲ್ಲ ಬ್ರೇಕಿಂಗ್ ನ್ಯೂಸ್ : ಬೆಂಗಳೂರಿಗೆ ಶರಾವತಿ ನೀರು ತರುವ ಪ್ರಸ್ತಾಪವಿಲ್ಲ

"15 ಟಿಎಂಸಿ ಅಡಿಯಲ್ಲಿ ಬೆಂಗಳೂರಿಗೆ 10 ಟಿಎಂಸಿ ಅಡಿ ಮತ್ತು ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ 5 ಟಿಎಂಸಿ ಅಡಿ ನೀರು ಬಳಸುವ ಯೋಜನೆ ಸಿದ್ಧಪಡಿಸಲಾಗಿದೆ" ಎಂದು ತುಷಾರ್ ಗಿರಿನಾಥ್ ವಿವರಣೆ ನೀಡಿದ್ದಾರೆ.

ಶರಾವತಿ ಉಳಿಸಲು ಒಂದಾದ ಮಲೆನಾಡು, ಶಿವಮೊಗ್ಗ ಬಂದ್ ಯಶಸ್ವಿ ಶರಾವತಿ ಉಳಿಸಲು ಒಂದಾದ ಮಲೆನಾಡು, ಶಿವಮೊಗ್ಗ ಬಂದ್ ಯಶಸ್ವಿ

"ಸದ್ಯ ಇರುವ ಎಲ್ಲಾ ನೀರಿನ ಮೂಲಗಳು ಮತ್ತು ಕಾವೇರಿ 5ನೇ ಹಂತ, ಎತ್ತಿನಹೊಳೆಯಿಂದ ನಿತ್ಯ ಬರಲಿರುವ 11 ಕೋಟಿ ಲೀಟರ್ ಬಿಟ್ಟರೆ ಮತ್ತೆ ನೀರಿನ ಮೂಲವಿಲ್ಲ. 2028-29ರ ವೇಳೆಗೆ ಮತ್ತೆ ನೀರಿನ ಹಾಹಾಕಾರ ಎದುರಾಗಲಿದೆ" ಎಂದರು.

"ಬೆಂಗಳೂರು ನಗರಕ್ಕೆ ನಿತ್ಯ 77.50 ಕೋಟಿ ಲೀಟರ್‌ಗಳಷ್ಟು ಕಾವೇರಿ ನೀರು ತರುವ 5ನೇ ಹಂತದ 4 ಸಾವಿರ ಕೋಟಿ ಮೊತ್ತದ ಯೋಜನೆಯಲ್ಲಿ 2 ಸಾವಿರ ಕೋಟಿ ಮೊತ್ತದ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ" ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

English summary
Sharavati water to Bengaluru city. Again discussion started to bring Sharavati water from Linganamakki reservoir in Shivamogga district to Bengaluru to tackle drinking water requirement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X