ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಜನಾಪುರ ಜಲಾಶಯ ಭರ್ತಿ, ಬಾಗಿನ ಅರ್ಪಿಸಿದ ಯಡಿಯೂರಪ್ಪ

By Gururaj
|
Google Oneindia Kannada News

ಶಿವಮೊಗ್ಗ, ಜುಲೈ 18 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುಧವಾರ ತವರು ಜಿಲ್ಲೆ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಶಿಕಾರಿಪುರಕ್ಕೆ ಭೇಟಿ ನೀಡಿದ ಅವರು ಅಂಜನಾಪುರ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದರು.

45 ವರ್ಷದ ಬಳಿಕ ದಾಖಲೆ ಬರೆದ ಕಾವೇರಿ ಕಣಿವೆಯ 4 ಜಲಾಶಯಗಳು!45 ವರ್ಷದ ಬಳಿಕ ದಾಖಲೆ ಬರೆದ ಕಾವೇರಿ ಕಣಿವೆಯ 4 ಜಲಾಶಯಗಳು!

ಶಿಕಾರಿಪುರ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಮತ್ತು ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸಲು ಅಂಜನಾಪುರ ಜಲಾಶಯವೇ ಪ್ರಮುಖ ಮೂಲವಾಗಿದೆ. ಇದೊಂದು ಚಿಕ್ಕ ಜಲಾಶಯವಾಗಿದ್ದು, 1.8 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಬಹುದಾಗಿದೆ.

ಶಿಕಾರಿಪುರ : ನಮ್ಮ ಕಷ್ಟ ಬಗೆಹರಿಸಿ ಎಂಬುದು ತೋಚಿಬಾಯಿ ಮನವಿಶಿಕಾರಿಪುರ : ನಮ್ಮ ಕಷ್ಟ ಬಗೆಹರಿಸಿ ಎಂಬುದು ತೋಚಿಬಾಯಿ ಮನವಿ

Shikaripura MLA Yeddyurappa offers bagina to Anjanapura dam

ಕುಮದ್ವತಿ ನದಿಗೆ ಅಡ್ಡಲಾಗಿ ಅಂಜನಾಪುರದಲ್ಲಿ ಜಲಾಶಯ ನಿರ್ಮಾಣ ಮಾಡಲಾಗಿದೆ. ನದಿಯ ಉಗಮ ಸ್ಥಾನ ಕೋಣಂದೂರು, ರಿಪ್ಪನ್ ಪೇಟೆ, ಚೋರಡಿ ಭಾಗದಲ್ಲಿ ಭಾರೀ ಮಳೆಯಾದರೆ ಜಲಾಶಯಕ್ಕೆ ನೀರು ಹರಿದು ಬರುತ್ತದೆ.

ಶಿಕಾರಿಪುರದಲ್ಲಿ ಭರ್ಜರಿ ಜಯ ಸಾಧಿಸಿದ ಬಿ.ಎಸ್.ಯಡಿಯೂರಪ್ಪಶಿಕಾರಿಪುರದಲ್ಲಿ ಭರ್ಜರಿ ಜಯ ಸಾಧಿಸಿದ ಬಿ.ಎಸ್.ಯಡಿಯೂರಪ್ಪ

Shikaripura MLA Yeddyurappa offers bagina to Anjanapura dam

ಸತತ ಬರಗಾಲದ ಬಳಿಕ ಎರಡು ವರ್ಷಗಳಿಂದ ಅಂಜನಾಪುರ ಜಲಾಶಯ ಭರ್ತಿಯಾಗುತ್ತಿದೆ. 2017ರಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಜಲಾಶಯ ಭರ್ತಿಯಾಗಿತ್ತು. ಆದರೆ, ಈ ಬಾರಿ ಭಾರೀ ಮಳೆಯ ಕಾರಣ ಜುಲೈ 20ಕ್ಕೂ ಮೊದಲೇ ಜಲಾಶಯ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.

English summary
Shikaripura MLA and Former Chief Minister of Karnataka B.S.Yeddyurappa offers bagina to Anjanapura dam. Anjanapura is the main drinking water source for Shikaripura and Shiralakoppa town of Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X