ಶಿವಮೊಗ್ಗ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಕಂಗೆಟ್ಟ ಜನತೆ
ಶಿವಮೊಗ್ಗ, ಆಗಸ್ಟ್.14: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾನದಿಯ ರಾಮ ಮಂಟಪ, ಭದ್ರಾವತಿ ನಗರದಲ್ಲಿ ಹೊಸ ಸೇತುವೆ ಮುಳುಗಡೆಯಾಗಿವೆ.
72ನೇ ಸ್ವಾತಂತ್ರ್ಯ ದಿನಾಚರಣೆ 2018
ಭದ್ರಾ ಅಣೆಕಟ್ಟೆಯಿಂದ 51 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದ್ದು, ಭದ್ರಾವತಿಯ ಹೊಸ ಸೇತುವೆ ಮೇಲೆ 4 ಅಡಿಯಷ್ಟು ನೀರು ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಸೇತುವೆ ಸಂಚಾರ ಬಂದ್ ಮಾಡಲಾಗಿದ್ದು, ಹಳೆ ಸೇತುವೆ ಮೇಲೆ ಜನರ ಸಂಚಾರ ಹೆಚ್ಚಾಗಿದೆ.

ಸಾಗರದಲ್ಲೂ ನಿರಂತರ ಮಳೆ
ಇನ್ನು ಸಾಗರ ತಾಲೂಕಿನಲ್ಲಿ ಎಡೆಬಿಡದೆ ಮಳೆ ಸುರಿದ ಪರಿಣಾಮ ಕೆಳದಿ ರಸ್ತೆಯಲ್ಲಿ ಮನೋಹರ್ ಎಂಬುವವರ ಮನೆ ಕುಸಿದಿದ್ದು, ಅದೃಷ್ಟವಶಾತ್ ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗೆಯೇ ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಜಲಪಾತ ನೋಡಲು ಪ್ರವಾಸಿಗರು ತಾ, ಮುಂದು, ನಾ ಮುಂದು ಬರುತ್ತಿದ್ದಾರೆ.
ಜಲಾಶಯದಿಂದ ನದಿಗಳಿಗೆ ನೀರು
ಲಿಂಗನಮಕ್ಕಿ ಜಲಾಶಯಕ್ಕೆ ಒಂದು ಲಕ್ಷ ಕ್ಯೂಸೆಕ್ ಗೂ ಹೆಚ್ಚು ನೀರು ಹರಿದು ಬರುತ್ತಿದ್ದು, ಗರಿಷ್ಟ 1819 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 1816 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಡ್ಯಾಂ ಗೇಟು ತೆರೆದು ನೀರನ್ನು ನದಿಗೆ ಬಿಡಲಾಗಿದೆ.

ಡ್ಯಾಂನ 11 ಗೇಟ್ ಗಳ ಪೈಕಿ 9 ಗೇಟ್ ಗಳನ್ನು ತೆರೆದು 30 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರನ್ನು ಶರಾವತಿ ನದಿಗೆ ಬಿಡಲಾಗುತ್ತಿದೆ.
ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ತುಂಗಾ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂನಿಂದ ನದಿಗೆ ಸುಮಾರು 1 ಲಕ್ಷ ಕೂಸೆಕ್ ನೀರು ಬಿಡುಗಡೆಯಾಗಿದೆ.
ನಗರ ಪ್ರದೇಶ ಜಲಾವೃತ
ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಮುಳುಗಡೆಯಾಗಿವೆ. ಮಂಡಕ್ಕಿಭಟ್ಟಿ ಪ್ರದೇಶ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ.

ಕುಂಬಾರಗುಂಡಿ, ಮಂಜುನಾಥ ಟಾಕೀಸ್ ಬಳಿ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಜೆಪಿಎನ್ ಶಾಲೆ, ಮಲ್ಲೇಶ್ವರ ನಗರದ ಫ್ಯಾಮಿಲಿ ಪ್ಲಾನಿಂಗ್ ಆಸ್ಪತ್ರೆ ಜಲಾವೃತವಾಗಿದ್ದು ಜಲಾವೃತಗೊಂಡ ಪ್ರದೇಶಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications