ನಟ ಶಿವರಾಜ್ ಕುಮಾರ್ ಮೇಲೆ ಎಫ್ ಐಆರ್
ಶಿವಮೊಗ್ಗ, ಏ.16: ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪತಿ, ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ವಿರುದ್ಧ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಶಿವರಾಜ್ ಕುಮಾರ್ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಐಪಿಸಿ ಸೆಕ್ಷನ್ 143, 188, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಪ್ರಕಾರ, ಕ್ಷೇತ್ರದ ಮತದಾರರಲ್ಲದವರು ಬುಧವಾರ ಲೋಕಸಭಾ ಕ್ಷೇತ್ರವನ್ನ ತೊರೆಯಬೇಕಾಗುತ್ತದೆ.
ಆದರೆ, ಶಿವರಾಜ್ಕುಮಾರ್ ಶಿವಮೊಗ್ಗ ಕ್ಷೇತ್ರದ ಮತದಾರರಲ್ಲದಿದ್ದರೂ ಪತ್ನಿ ಗೀತಾ ಜೊತೆ ಶಿವಮೊಗ್ಗದ ನವಿಲೆ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದರು. ಚುನಾವಣಾಧಿಕಾರಿ ಮುರಳಿಧರ್, ಮಂಜುನಾಥ್ ಈ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಶಿವರಾಜ್ ಕುಮಾರ್ ಅವ್ಪರ ಜತೆ ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್ ಮತ್ತಿತ್ತರರು ಚುನಾವಣಾ ಪ್ರಚಾರ ನಡೆಸಿದ್ದರು. ಹೀಗಾಗಿ, ಅಭ್ಯರ್ಥಿ ಗೀತಾ, ಶಿವರಾಜ್ ಕುಮಾರ್, ಶ್ರೀಕಾಂತ್ ಇನ್ನಿತರರ ಮೇಲೆ ಸಂಚಾರಿ ದಳದ ಚುನಾವಣಾಧಿಕಾರಿ ಮುರಳೀಧರ್ ದೂರು ದಾಖಲಿಸಿಕೊಂಡರು.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಶಿವರಾಜ್ ಕುಮಾರ್ ಅವರ ಹೆಸರಿರಲಿಲ್ಲ. ಆದರೆ, ಶಿವರಾಜ್ ಅವರು ಜನಪ್ರಿಯ ನಟರಾಗಿರುವುದರಿಂದ ಬುಧವಾರದಂದು ಪ್ರಚಾರ ಕಾರ್ಯದಲ್ಲಿ ತೊಡಗದಂತೆ ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದ್ದರು. ಅದರೆ, ಕುಂಸಿ, ಕೊಮ್ಮನಾಳು ಗ್ರಾಮದಲ್ಲಿ ಮನೆ ಮನೆ ಪ್ರಚಾರ ಮಾಡಬೇಕಾಗಿದ್ದ ಶಿವರಾಜ್ ಕೊನೆಗೆ ನವಿಲೆ ಗ್ರಾಮಕ್ಕೆ ತೆರಳಿದ ಸುದ್ದಿ ತಿಳಿದ ಅಧಿಕಾರಿಗಳು ಅಲ್ಲಿಗೆ ತಲುಪಿ ಪರಿಸ್ಥಿತಿ ಅವಲೋಕಿಸಿ ದೂರು ದಾಖಲಿಸಿಕೊಂಡರು.

ಜೆಡಿಎಸ್ ಅಕ್ರಮ: ಇತ್ತೀಚೆಗೆ ಹೊಸಂಗಡಿ, ಕೆರೆಕಟ್ಟೆ ಚೆಕ್ ಪೋಸ್ಟ್ ನಲ್ಲಿ ಬೈಂದೂರು ವಿಧಾನಸಭಾ ವ್ಯಾಪ್ತಿಯ ಸ್ಟ್ಯಾಟಿಕ್ ಸರ್ವೆಲೆನ್ಸ್ ಟೀಂ 01 ರ ಮುಖ್ಯಸ್ಥ ರಘುರಾಮ ಶೆಟ್ಟಿ ಮತ್ತು ತಂಡದವರು, ಪ್ಲೈಯಿಂಗ್ ಸ್ಕ್ವಾಡ್ ನ ಚಂದ್ರ ಶೇಖರ ಮೂರ್ತಿ, ರುಕ್ಕನ ಗೌಡ, ಅಮಾಸೆಬೈಲು ಪೊಲೀಸ್ ಠಾಣಾ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿರುವಾಗ, ಸಿದ್ಧಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಹೋಗುತಿದ್ದ ಜನತಾದಳದ ಚನಾವಣಾ ಪ್ರಚಾರದ ವಾಹನಗಳಾದ ಕೆಎ 20 ಜಡ್ 4666 ವೋಕ್ಸ್ ವ್ಯಾಗನ್ ಕಾರು ಹಾಗೂ ಕೆಎ 51 ಎನ್ 5688 ಸ್ಕಾರ್ಪಿಯೋ ವಾಹನಗಳನ್ನು ತಪಾಸಣೆಗೊಳಿಸಿದಾಗ ಜೆ.ಡಿ.ಎಸ್ ಪಕ್ಷದ ಚುನಾವಣಾ ಪ್ರಚಾರದ ಪರವಾನಿಗೆ ಪಡೆದ ವಾಹನ ಸಂಖ್ಯೆ ಕೆಎ 20 ಜಡ್ 4666ರ ಚಾಲಕನಾದ ಎಂ.ಮನ್ಸೂರ್ ಇಬ್ರಾಹಿಂ ಇವರ ಬಳಿ ರೂಪಾಯಿ 75000/-(ರೂ 1000 ಮುಖ ಬೆಲೆಯ 75 ನೋಟುಗಳು) ನಗದು ಯಾವುದೇ ದಾಖಲೆಗಳಿಲ್ಲದೆ ಪತ್ತೆಯಾಗಿತ್ತು. ಇದಾದ ಬಳಿಕ ಇನ್ನಷ್ಟು ಅಕ್ರಮ ಹಣ ಸಾಗಾಟದ ವರದಿ ಬಂದಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications