ಹತ್ತು ದಿನಗಳ ಶಿವಮೊಗ್ಗ ದಸರಾಕ್ಕೆ ಬನ್ನಿ
ಶಿವಮೊಗ್ಗ, ಸೆ.24 : ಮಲೆನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಗಳ ಪರಿಚಯ ಮಾಡಿಕೊಡುವ ಹತ್ತು ದಿನಗಳ ದಸರಾ ಮಹೋತ್ಸವಕ್ಕೆ ಸೆ.25ರ ಗುರುವಾರ ಚಾಲನೆ ದೊರೆಯಲಿದೆ. ಶಿವಮೊಗ್ಗ ದಸರಾ ಆಚರಣೆಗಾಗಿ ಸರ್ಕಾರ 1 ಕೋಟಿ ರೂ.ಗಳನ್ನು ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಿದೆ.
ಪ್ರತಿವರ್ಷ ಶಿವಮೊಗ್ಗ ದಸರಾದಲ್ಲಿ ನಾಟಕ, ಸಿನಿಮಾ ಪ್ರದರ್ಶನ, ವಿವಿಧ ಕ್ರೀಡೆಗಳು ಆಕರ್ಷಣೆಗಳಾಗಿದ್ದವು. ಈ ಬಾರಿ ಯೋಗಾಭ್ಯಾಸ, ಆಹಾರ ಮೇಳ ಮುಂತಾದವುಗಳನ್ನು ಹತ್ತು ದಿನದ ದಸರಾ ಉತ್ಸವದಲ್ಲಿ ಸೇರಿಸಲಾಗಿದೆ. ಶಿವಮೊಗ್ಗ ದಸರಾವನ್ನು ಆಚರಿಸುವ ಮಹಾನಗರ ಪಾಲಿಕೆಗೆ ಸರ್ಕಾರ ಒಂದು ಕೋಟಿ ರೂ. ಅನುದಾನ ನೀಡಿದೆ. [ಮೈಸೂರು ದಸರಾ ಚಿತ್ರಗಳನ್ನು ನೋಡಿ]

ಖ್ಯಾತ ಸಾಹಿತಿ ನಾ.ಡಿಸೋಜಾ ಅವರು ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಸೆ.29ರಂದು ದಸರಾವನ್ನು ಉದ್ಘಾಟಿಸಲಿದ್ದಾರೆ. ಸೆ.25 ಮತ್ತು 26ರಂದು ಮಹಿಳಾ ದಸರಾದ ಕಾರ್ಯಕ್ರಮಗಳು ಕುವೆಂಪು ರಂಗಮಂದಿರದಲ್ಲಿ ನಡೆಯಲಿವೆ. ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಗಾಯಕ ರಾಜೇಶ್ ಕೃಷ್ಣನ್ ಅವರ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. [ಶಿವಮೊಗ್ಗ ದಸರಾ ವಿವರ ಇಲ್ಲಿದೆ ನೋಡಿ]
ಸಹ್ಯಾದ್ರಿ ಕಾಲೇಜಿನಲ್ಲಿ ಸೆ.27 ಮತ್ತು 28ರಂದು ಯುವ ದಸರಾದ ಕಾರ್ಯಕ್ರಮಗಳು ನಡೆಯಲಿವೆ. ಕುವೆಂಪು ರಂಗಮಂದಿರದಲ್ಲಿ ಸೆ.27ರಂದು ಯೋಗ ದಸರಾ ಕಾರ್ಯಕ್ರಮಗಳು ನಡೆಯಲಿದ್ದು, ಯೋಗಗುರು ಎನ್.ಎಲ್.ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಅ.1 ಮತ್ತು 2ರಂದು ಕುವೆಂಪು ರಂಗಮಂದಿರದಲ್ಲಿ ಮಕ್ಕಳ ದಸರಾ ನಡೆಯಲಿದೆ. ಸುವರ್ಣ ಸಂಸ್ಕೃತಿ ಭವನದಲ್ಲಿ ಸೆ. 25ರಿಂದ 29ರ ವರೆಗೆ ವಿವಿಧ ನಾಟಕಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸೆ.29 ಮತ್ತು 30ರಂದು ಶಿವಪ್ಪನಾಯಕ ಅರಮನೆಯಲ್ಲಿ ಛಾಯಾಚಿತ್ರ ಪ್ರದರ್ಶನವಿದೆ.
ಅ.4ರಂದು ಶಿವಪ್ಪ ನಾಯಕ ಅರಮನೆಯಿಂದ ಆರಂಭವಾಗುವ ಅಂತಿಮ ದಿನದ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ಥಬ್ದ ಚಿತ್ರಗಳು, ಕಲಾಮೇಳಗಳು, ಸಕ್ರೆಬೈಲು ಆನೆಗಳು ಪಾಲ್ಗೊಳ್ಳಲಿವೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಈ ಮೆರವಣಿಗೆ ಅಂತ್ಯಗೊಳ್ಳಲಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications