ಶಿವಮೊಗ್ಗː ಮಾಚೇನಹಳ್ಳಿ ಎಸ್ಬಿಎಂ ಬ್ಯಾಂಕ್ ದರೋಡೆ
ಶಿವಮೊಗ್ಗ, ಸೆ. 22 : ಭಾನುವಾರ ರಾತ್ರಿ ನಡೆದಿರುವ ಬ್ಯಾಂಕ್ ದರೋಡೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳು ಬೆಚ್ಚಿಬಿದ್ದಿವೆ.
ಶಿವಮೊಗ್ಗ ಹೊರವಲಯದ ಮಾಚೇನಹಳ್ಳಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಗೆ ಭಾನುವಾರ ರಾತ್ರಿ ನುಗ್ಗಿದ ದರೋಡೆಕೋರರು 36.6 ಲಕ್ಷ ರೂ. ನಗದು ಮತ್ತು 6.5 ಕೆಜಿ ಚಿನ್ನ ದೋಚಿದ್ದಾರೆ.(ಕಣ್ಕಟ್ಟು ವಿದ್ಯೆ; ಬ್ಯಾಂಕ್ ನಲ್ಲಿ ಮೂರು ಲಕ್ಷ ಮಂಗಮಾಯ)
ಶಿವಮೊಗ್ಗ ಮತ್ತು ಭದ್ರಾವತಿ ನಡುವಿನ ಮಾಚೇನಹಳ್ಳಿ ಬ್ಯಾಂಕ್ ನಲ್ಲಿ ಕಳ್ಳತನ ನಡೆದಿದೆ. ಬ್ಯಾಂಕ್ ಗೋಡೆಗೆ ಕನ್ನ ಕೊರೆದು ಒಳಪ್ರವೇಶಿಸಿದ ಕಳ್ಳರು ಸಿಸಿ ಟಿವಿ ಕೇಬಲ್ ಕಿತ್ತು ಹಾಕಿದ್ದಾರೆ. ನಂತರ ಬ್ಯಾಂಕ್ ಲಾಕರ್ನಲ್ಲಿದ್ದ ಎಲ್ಲ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.(ಬೆಂಗಳೂರು ಗಾಂಧಿನಗರದಲ್ಲಿ ಭದ್ರಾವತಿ ವಂಚಕಿಯರು)
ಬ್ಯಾಂಕ್ ಒಳಗೆ ನುಗ್ಗಿದ ದರೋಡೆಕೋರರು ಲಾಕರ್ಗಳನ್ನು ಕನ್ನ ಕೊರೆದ ಜಾಗದ ಮೂಲಕವೇ ಹೊರಗೆ ಎಳೆದು ತಂದಿದ್ದಾರೆ. ನಂತರ ಎಲ್ಲ ಲಾಕರ್ಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.
ಸಿಸಿಟಿವಿ ಸಂಪರ್ಕ ಸಂಪೂರ್ಣ ಧ್ವಂಸ ಮಾಡಿರುವುದರಿಂದ ಎಷ್ಟು ಜನರ ತಂಡ ಕೃತ್ಯ ಎಸಗಿದೆ ಎಂಬುದು ಗೊತ್ತಾಗಿಲ್ಲ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಸ್ಪಿ ಕೌಶಲೇಂದ್ರ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಗ್ರಾಹಕರು ಯಾವುದೇ ಆತಂಕ ಪಡುವ ಕೆಲಸವಿಲ್ಲ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಾಚೇನಹಳ್ಳಿ ಎಸ್ಬಿಎಂ ಬ್ಯಾಂಕ್
ಭಾನುವಾರ ರಾತ್ರಿ ದರೋಡೆಗೊಳಗಾಗಿರುವ ಮಾಚೇನಹಳ್ಳಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆ.

ಕನ್ನ ಕೊರೆದ ದರೋಡೆಕೋರರರು
ಶಿವಮೊಗ್ಗ ಮತ್ತು ಭದ್ರಾವತಿ ನಡುವಿನ ಮಾಚೇನಹಳ್ಳಿ ಬ್ಯಾಂಕ್ನ ಗೋಡೆ ಕನ್ನ ಕೊರೆದ ದೃಶ್ಯ.

ಕೃತಕ ದ್ವಾರ ನಿರ್ಮಾಣ
ಭಾನುವಾರ ಮಧ್ಯರಾತ್ರಿ ಮಾಚೇನಹಳ್ಳಿ ಎಸ್ಬಿಎಂ ಶಾಖೆ ಒಳಪ್ರವೇಶಿಸಲು ಕಳ್ಳರು ಮಾಡಿಕೊಂಡ ಕೃತಕ ದಾರಿ

ಎಸ್ಪಿ ಕೌಶಲೇಂದ್ರ ಕುಮಾರ್ ಭೇಟಿ
ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಶಿವಮೊಗ್ಗ ಎಸ್ಪಿ ಕೌಶಲೇಂದ್ರ ಕುಮಾರ್

ಪೊಲೀಸ್ ಪರಿಶೀಲನೆ
ದರೋಡೆಗೊಳಗಾಗಿರುವ ಬ್ಯಾಂಕ್ ಪರಿಶೀಲಿಸುತ್ತಿರುವ ಪೊಲೀಸ್ ಸಿಬ್ಬಂದಿ.

ಬ್ಯಾಂಕ್ ಎದುರು ಸೇರಿದ್ದ ಜನರು
ಬ್ಯಾಂಕ್ ದರೋಡೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications