Doctor Manjappa : ಶಿವಮೊಗ್ಗದ ಬಡವರ ವೈದ್ಯ ಡಾ. ಮಂಜಪ್ಪ ನಿಧನ!
ಸಾಗರ ಜನವರಿ 23: ಕೇವಲ ಎರಡು ರೂಪಾಯಿ ಪಡೆದು ರೋಗಿಗಳನ್ನು ತಪಾಸಣೆ ಮಾಡುವ ಮೂಲಕ ಶಿವಮೊಗ್ಗದಲ್ಲಿ ಬಡವರ ಪಾಲಿಗೆ ದೇವರಾಗಿದ್ದ ವೈದ್ಯ ಮಂಜಪ್ಪ ನಿಧನರಾಗಿದ್ದಾರೆ. ಮಂಜಪ್ಪ ಡಾಕ್ಟ್ರು ಎಂದು ಪ್ರೀತಿಯಿಂದ ಕರೆಯಲ್ಪಡುವ ಇವರು 60 ವರ್ಷಗಳಿಂದ ಮಲೆನಾಡಿನಲ್ಲಿ ಸಾವಿರಾರು ಜನರ ಜೀವಗಳನ್ನು ಉಳಿಸಿದ್ದಾರೆ. 85 ವರ್ಷ ವಯಸ್ಸಿನ ಡಾ.ಮಂಜಪ್ಪ ಭಾನುವಾರ ಕೊನೆಯುಸಿರೆಳಿದ್ದಾರೆ. ಮಂಜಪ್ಪ ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಡಾ.ಮಂಜಪ್ಪ ಅವರು ಕಳೆದ ಆರು ದಶಕಗಳಿಂದ ಖಾಸಗಿ ವೈದ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಾಗರದ ಜೆ.ಸಿ ರಸ್ತೆಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಾ ಗ್ರಾಮೀಣ ಭಾಗದ ಜನರ ಪಾಲಿಗೆ ದೇವರಾಗಿದ್ದರು. ಡಾ.ಮಂಜಪ್ಪ ಅವರು ರೋಗಿಗಳಿಗೆ ತಪಾಸಣೆಗಾಗಿ ಇಂತಿಷ್ಟೇ ಹಣವನ್ನು ಜಿಗಧಿ ಮಾಡಿರಲಿಲ್ಲ. ಯಾವುದೇ ಫಲಾಪೇಕ್ಷೆ ಇಲ್ಲದೇ ರೋಗಿಗಳ ತಪಾಸಣೆ ಮಾಡುತ್ತಿದ್ದರು. ರೋಗಿಗಳಿಂದ ಎರಡು ರೂಪಾಯನ್ನು ಮಾತ್ರ ಪಡೆದು 'ಎರಡು ರೂಪಾಯಿ ವೈದ್ಯರು' ಎಂದೇ ಈ ಭಾಗದಲ್ಲಿ ಜನಜನಿತರಾಗಿದ್ದರು.

ಜಗತ್ತಿನಲ್ಲಿ ವ್ಯಾಪಾರೀಕರಣವಾದ ವೈದ್ಯಕೀಯ ವೃತ್ತಿಯನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಜನರ ಸೇವೆಗಾಗಿ ಜೀವನವನ್ನು ಮುಡಿಪಾಗಿಟ್ಟವರಲ್ಲಿ ಡಾ.ಮಂಜಪ್ಪ ಅವರು ಕೂಡ ಒಬ್ಬರಾಗಿದ್ದಾರೆ. ಡಾ. ಮಂಜಪ್ಪ ಅವರ ಈ ನಿಸ್ವಾರ್ಥ ಸೇವೆಯನ್ನು ಮೆಚ್ಚಿ ಗೌರವಿಸಲು ಹಲವಾರು ಸಂಘ ಸಂಸ್ಥೆಗಳು ಮುಂದೆ ಬಂದವಾದರೂ ಮಂಜಪ್ಪ ಅವರು ನಯವಾಗಿ ನಿರಾಕರಿಸಿದ್ದರು. ಅತ್ಯಂತ ಸರಳ ಹಾಗೂ ಸದಾ ಲವಲವಿಕೆಯಿಂದ ಡಾ. ಮಂಜಪ್ಪ ವೈದ್ಯಕೀಯ ವೃತ್ತಿಯಲ್ಲೇ ಸಂತೃಪ್ತಿಯನ್ನು ಕಾಣುತ್ತಿದ್ದರು. ಅಂತ್ಯಕ್ರಿಯೆ ಭಾನುವಾರ ಮಾರಿಕಾಂಬಾ ರುಧ್ರಭೂಮಿಯಲ್ಲಿ ನಡೆಯಿತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications