ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಾಕತ್ತಿದ್ದರೆ ಎಂಪಿ ಸ್ಥಾನ ಗೆದ್ದು ತೋರಿಸಿ: ದೇವೇಗೌಡರಿಗೆ ಯಡಿಯೂರಪ್ಪ ಸವಾಲು

|
Google Oneindia Kannada News

Recommended Video

ಎಚ್ ಡಿ ದೇವೇಗೌಡ, ಜೆಡಿಎಸ್ ನಾಯಕನಿಗೆ ಸವಾಲ್ ಹಾಕಿದ ಬಿ ಎಸ್ ಯಡಿಯೂರಪ್ಪ | Oneindia Kannada

ಶಿವಮೊಗ್ಗ, ಅಕ್ಟೋಬರ್ 25: ತಾಕತ್ತಿದ್ದರೆ ಮೂರು ಎಂಪಿ ಸ್ಥಾನಗಳನ್ನು ಗೆದ್ದು ತೋರಿಸಿ ಎಂದು ಬಿಎಸ್ ಯಡಿಯೂರಪ್ಪ ಜೆಡಿಎಸ್ ನಾಯಕ ಎಚ್ ಡಿ ದೇವೇಗೌಡ ಅವರಿಗೆ ಸವಾಲು ಹಾಕಿದರು.

ಸೊರಬದಲ್ಲಿ ಪ್ರಚಾರ ನಡೆಸಿದ ಯಡಿಯೂರಪ್ಪ, ತಾವು ಸಿಎಂ ಆಗಬಾರದು ಎಂಬ ಕಾರಣಕ್ಕೆ ತಾನೇ 37 ಸೀಟುಗಳನ್ನು ಪಡೆದಿರುವ ನೀವು ಕಾಂಗ್ರೆಸ್ ಜೊತೆ ಸೇರಿಕೊಂಡು ಸರ್ಕಾರ ರಚಿಸಿರುವುದು ಎಂದು ದೇವೇಗೌಡರನ್ನು ಟೀಕಿಸಿದರು.

ಮಧು ಬಂಗಾರಪ್ಪಗೆ ಹಲವು ಪ್ರಶ್ನೆ ಕೇಳಿದ ಕುಮಾರ್ ಬಂಗಾರಪ್ಪ! ಮಧು ಬಂಗಾರಪ್ಪಗೆ ಹಲವು ಪ್ರಶ್ನೆ ಕೇಳಿದ ಕುಮಾರ್ ಬಂಗಾರಪ್ಪ!

ದಕ್ಷಿಣದಲ್ಲಿ ಬಿಜೆಪಿಯ ಬಾಗಿಲು ಮುಚ್ಚುವುದಾಗಿ ಹೇಳಿರುವ ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಬ್ಬಾಗಿಲು ಮುಚ್ಚಿಸೋಕೆ ನೀವು ಯಾರು? ವೆಂಕ, ನಾಣಿ, ಸೀನ ಅಂತ ನೀವು ಇರುವುದೇ ಮೂರು ಜನ. ಮೊದಲು ಮೂರು ಲೋಕಸಭೆ ಉಪ ಚುನಾವಣೆಯಲ್ಲಿ ಗೆದ್ದುಬನ್ನಿ ಎಂದು ಸವಾಲು ಹಾಕಿದರು.

Shimoga soraba lok sabha by elections 2018 yeddyurappa campaign

ಉಪ ಚುನಾವಣೆಯಲ್ಲಿ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಈಗಾಗಲೇ ಗೆದ್ದಿದೆ. ಇನ್ನೊಂದು ಕ್ಷೇತ್ರ ಗೆಲ್ಲುವುದು ಮಾತ್ರ ಬಾಕಿ ಇದೆ ಎಂದರು.

ಸುಳ್ಳೇ ಯಡಿಯೂರಪ್ಪ ಮನೆ ದೇವರು: ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಲೇವಡಿಸುಳ್ಳೇ ಯಡಿಯೂರಪ್ಪ ಮನೆ ದೇವರು: ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಲೇವಡಿ

ತಾವು ಒಂದಾಗಿರುವುದಾಗಿ ಸಿದ್ದರಾಮಯ್ಯ ಮತ್ತು ದೇವೇಗೌಡರು ಬೀಗುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದು ಯಾರು? ದಸರಾ ವೇಳೆ ಚಾಮುಂಡೇಶ್ವರಿ ಉತ್ಸವ ನಡೆಯುವಾಗ ಸಿದ್ದರಾಮಯ್ಯ ಎಲ್ಲಿ ಹೋಗಿದ್ದರು? ಅವೆಲ್ಲವನ್ನೂ ಜನರು ಮರೆತಿಲ್ಲ. ಈ ಎರಡೂ ಪಕ್ಷಗಳ ನಡುವೆ ಯಾವ ಹೊಂದಾಣಿಕೆಯೂ ಇಲ್ಲ.

ಶಿವಮೊಗ್ಗ ಉಪ ಚುನಾವಣೆ : ಆಣೆ-ಪ್ರಮಾಣ ರಾಜಕೀಯ ಆರಂಭ! ಶಿವಮೊಗ್ಗ ಉಪ ಚುನಾವಣೆ : ಆಣೆ-ಪ್ರಮಾಣ ರಾಜಕೀಯ ಆರಂಭ!

ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಈ ಹಿಂದೆಯೂ ಅನೇಕ ಬಾರಿ ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಅದೆಲ್ಲವನ್ನೂ ಮರೆತಂತೆ ನಟಿಸುತ್ತಿದ್ದಾರೆ ಎಂದರು.

English summary
BS Yeddyurappa slammed HD Devegowda, challenged him to win 3 lok sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X