ಶಿವಮೊಗ್ಗ: ಮಲೆನಾಡಿನಲ್ಲಿ ವಿಶಿಷ್ಟವಾದ ಪ್ರಕೃತಿ ವಂದನಾ ಕಾರ್ಯಕ್ರಮ
ಶಿವಮೊಗ್ಗ, ಸೆಪ್ಟೆಂಬರ್ 1: ಮಲೆನಾಡಿನ, ಮಳೆಕಾಡಿನ ಮರಗಳ ಸಂಖ್ಯೆ ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ ಪ್ರಕೃತಿ ಸಂಪತ್ತನ್ನು ಉಳಿಸಿ ಬೆಳೆಸುವ ವಿಶಿಷ್ಟ ಕಾರ್ಯಕ್ರಮವನ್ನು ಆಗುಂಬೆ ಹೋಬಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ವಿಕಾಸ ಟ್ರಸ್ಟ್ ಶಿವಮೊಗ್ಗ, ಪರ್ಯಾವರಣ ಸಂರಕ್ಷಣ ಗತಿವಿಧಿ ಘಟಕ ಆಗುಂಬೆ ಹೋಬಳಿ, ಅರಣ್ಯ ಇಲಾಖೆ, ಆಗುಂಬೆ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಆಗುಂಬೆ ಹೋಬಳಿಯ ಮನಸ್ಸುಗಾರ್ ನಲ್ಲಿ ಪ್ರಕೃತಿ ವಂದನಾ ಕಾರ್ಯಕ್ರಮ ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿಗಳಾದ ಉಮಾ, ಇತಿಹಾಸದ ಪುಟಗಳನ್ನು ಗಮನಿಸಿದಂತೆ ಪ್ರಕೃತಿಯು ನಾಗರಿಕತೆಯ ಆರಂಭದಿಂದಲೂ ಪ್ರತಿಯೊಂದು ವೃಕ್ಷವು ದೈವಿ ಸ್ವರೂಪವೆಂದು ಆರಾಧಿಸಿ ನಂಬಲಾಗುತ್ತದೆ ಎಂದರು.

ಗಿಡ, ಮರ, ಜಲ, ಭೂಮಿಯ ಸಂರಕ್ಷಣೆಗಾಗಿ, ಪರಿಸರ ಸಂರಕ್ಷಣೆ, ಪ್ರಾಣಿ, ಪಕ್ಷಿಗಳ ರಕ್ಷಣೆ ಹಾಗೂ ಪ್ರಾಚೀನ ಮೌಲ್ಯವನ್ನು ಸಮಾಜಕ್ಕೆ ಸ್ಮರಿಸುವ ದಿಶೆಯಲ್ಲಿ ಈ ಚಿಂತನೆ ಮಾಡಿ ಈ ಕಾರ್ಯಕ್ರಮ ಉತ್ತಮವಾಗಿದೆ ಎಂದು ತಿಳಿಸಿದರು.
ನೈಸರ್ಗಿಕ ಕಾಡನ್ನು ರಕ್ಷಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹತ್ವದ ಮಹತ್ವದ ಬಗ್ಗೆ ತಿಳಿಸಿದರು. ಇದಕ್ಕೂ ಮೊದಲು ಗಿಡಗಳಿಗೆ ಪವಿತ್ರವಾದ ಗಂಗಾಜಲ ಪ್ರೋಕ್ಷಣೆ ಮಾಡಿ, ಅರಿಶಿನ ಹಚ್ಚಿ, ಪುಷ್ಟ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿಕಾಸ್ ಟ್ರಸ್ಟ್ ನ ಪಾಂಡುರಂಗ ಪರಾಂಡೆ, ಹಣ್ಣಿನ ಮರಗಳ ವಿನಾಶದಿಂದ ಪ್ರಾಣಿ, ಪಕ್ಷಿಗಳು ರೈತರ ಹೊಲ, ಗದ್ದೆಗಳಿಗೆ ದಾಳಿ ಇಡುತ್ತಿರುವ ಬಗ್ಗೆ ಮನವರಿಕೆಯನ್ನು ಮಾಡಿದರು. ಹೊನ್ನೇತಾಳು ಸಹಕಾರ ಸಂಘದ ಅಧ್ಯಕ್ಷರಾದ ರವೀಶ್ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಹೆಚ್ಚಿನ ವಿಶ್ವಾಸ ಬೆಳೆಯಬೇಕು ಎಂದು ತಿಳಿಸಿದರು.
ಹಣ್ಣಿನಮರ, ನೈಸರ್ಗಿಕ ಅರಣ್ಯ ಬೆಳಸಿದ ಟೀಕಪ್ಪ ಗೌಡ ಹಾಗೂ ಅವರ ಧರ್ಮಪತ್ನಿ ಹೇಮಾವತಿ, ಹಾಗೂ ಉಮಾರವರನ್ನು ಸನ್ಮಾನಿಸಲಾಯಿತು. ನಿತ್ಯಾನಂದ ಅಣ್ಣುಗೋಡು, ಅಂಬರೀಶ್ ಮಳಲಿ, ನೇತ್ರಾವತಿ ಚಂದ್ರಹಾಸ್ ಹಾಗೂ ಇತರೆ ಪ್ರಮುಖರು, ಬೆಟ್ಲಂಗಿ ಹಾಗೂ ಮನಸ್ಸುಗಾರ್ ಗ್ರಾಮಸ್ಥರು ಇದ್ದರು.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications