Get Updates
Get notified of breaking news, exclusive insights, and must-see stories!

ಹರ್ಷ ಹಿಂದೂ ಎಂದು ಹೆಸರಿಟ್ಟುಕೊಂಡಿದ್ದೇ ತಪ್ಪಾ: ಸಹೋದರಿ ಅಶ್ವಿನಿ ಅಳಲು

ಶಿವಮೊಗ್ಗ, ಫೆಬ್ರವರಿ 21: "ಜಯ್ ರಾಮ್, ಶ್ರೀರಾಮ್ ಎಂದುಕೊಂಡೆ ನನ್ನ ತಮ್ಮ ಪ್ರಾಣ ಬಿಟ್ಟ. ಹರ್ಷದ ಹತ್ಯೆ ಮಾಡಿದವರು ಯಾರು ಎಂದು ಗೊತ್ತಿಲ್ಲ, ಆದರೆ ನಮ್ಮ ಕುಟುಂಬಕ್ಕೆ ನ್ಯಾಯ ಬೇಕು," ಎಂದು ಭಜರಂಗದಳದ ಕಾರ್ಯಕರ್ತರ ಹರ್ಷ ಅವರ ಸಹೋದರಿ ಅಶ್ವಿನಿ ಒತ್ತಾಯಿಸಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಳಿ ಪ್ರತಿಕ್ರಿಯೆ ನೀಡಿದ ಅಶ್ವಿನಿ, "ಭಾನುವಾರ ತಾವು ಚಿಕ್ಕಮಗಳೂರಿಗೆ ಹೋಗಿದ್ದೆ. ನಿನ್ನ ತಮ್ಮನನ್ನು ಹೊಡೆದು ಹಾಕಿದ್ದಾರೆ ಎಂದು ಫೋಟ್ ಮೂಲಕ ತಿಳಿಸಿದರು. ವಿಡಿಯೋ, ಫೋಟೋಗಳನ್ನು ಕಳುಹಿಸಿದ್ದರು. ಈಗ ನಾವು ಯಾರ ಬಳಿ ನ್ಯಾಯ ಕೇಳಬೇಕು," ಎಂದು ಪ್ರಶ್ನಿಸಿದ್ದಾರೆ.

"ನನ್ನ ತಮ್ಮ ಹರ್ಷ ಯಾರಿಗೂ ತೊಂದರೆ ಕೊಟ್ಟ ಹುಡುಗನೇ ಅಲ್ಲ. ಹಾಗಿದ್ದರೂ ಹತ್ಯೆ ಮಾಡಿದವರು ಯಾರು ಎಂಬುದು ನನಗೆ ಗೊತ್ತಿಲ್ಲ. ಜಯ್ ರಾಮ್, ಶ್ರೀರಾಮ್ ಎಂದುಕೊಂಡೇ ಪ್ರಾಣ ಬಿಟ್ಟಿದ್ದಾನೆ. ನಮ್ಮ ಕುಟುಂಬಕ್ಕೆ ನ್ಯಾಯ ಸಿಗಬೇಕು. ಹರ್ಷ ಹಿಂದೂ ಅಂತಾ ಹೆಸರಿಟ್ಟುಕೊಂಡಿದ್ದೇ ತಪ್ಪಾಯಿತೇ," ಎಂದು ಅಶ್ವಿನಿ ಪ್ರಶ್ನೆ ಮಾಡಿದ್ದಾರೆ.

Shivamogga Bajrangdal Activist Murder Case: Harsha’s Sister Says Our Family Need Justice

ಗೃಹ ಸಚಿವರಲ್ಲಿ ಅಶ್ವಿನಿ ಮನವಿ:

ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಸಾಂತ್ವನ ಹೇಳಿದರು. ಈ ವೇಳೆ ತಮ್ಮ ಸಹೋದರನ ಸಾವಿನ ನ್ಯಾಯ ಕೊಡಿಸುವಂತೆ ಗೃಹ ಸಚಿವರಲ್ಲಿ ಅಶ್ವಿನಿ ಮನವಿ ಮಾಡಿಕೊಂಡರು.

ಹರ್ಷ ಯಾರ ತಂಟೆಗೂ ಹೋಗುತ್ತಿರಲಿಲ್ಲ:

ನನ್ನ ಮಗ ಕೆಟ್ಟವನಾಗಿದ್ದರೆ ಇಷ್ಟು ಜನರು ಸೇರುತ್ತಿರಲಿಲ್ಲ. ಸುಖಾಸುಮ್ಮನೆ ಹರ್ಷ ಯಾರ ತಂಟೆಗೂ ಹೋಗುತ್ತಿದ್ದವನಲ್ಲ. ಆದರೆ ದೇಶಾಭಿಮಾನ ತುಂಬಾ ಇತ್ತು. ಯಾವುದೇ ಹೆಣ್ಣು ಮಕ್ಕಳನ್ನು ಕಣ್ಣೆತ್ತಿ ನೋಡುತ್ತಿರಲಿಲ್ಲ. ಬೇರೆ ಯಾರನ್ನಾದರೂ ಕೇಳಿ ನೋಡಿ. ದೇಶದ ಸೇನೆಯ ಬಗ್ಗೆ ಅವನಿಗೆ ಬಹಳಷ್ಟು ಗೌರವವಿತ್ತು. ನನ್ನ ಮಗನ ಬಗ್ಗೆ ನನಗೆ ಹೆಮ್ಮೆಯಿದೆ. ಅವನು ಹಿಂದೂ ಪರ ಕೆಲಸ ಮಾಡುತ್ತಿದ್ದನೇ ಹೊರತೂ ಬೇರೆ ಯಾರಿಗೂ ಅನ್ಯಾಯ ಮಾಡುತ್ತಿರಲಿಲ್ಲ. ನನ್ನ ಮಗ ಯಾರ ಬಳಿಯೂ ಒಂದು ರೂಪಾಯಿಗೂ ಕೈ ಚಾಚಿದವನಲ್ಲ," ಎಂದು ಹರ್ಷ ತಂದೆ ನಾಗರಾಜ್ ಜಿಂಗಾಡೆ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ:

ಶಿವಮೊಗ್ಗ ನಗರದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಭಜರಂಗ ದಳ ಕಾರ್ಯಕರ್ತ ಹರ್ಷನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಮಾರಕಾಸ್ತ್ರಗಳಿಂದ ನಡೆಸಿದ ಹಲ್ಲೆಯಿಂದಾಗಿ ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದ ಹರ್ಷನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ 22 ವರ್ಷದ ಹರ್ಷ ಮೃತಪಟ್ಟಿದ್ದಾನೆ.

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣ:

ಕಳೆದ ಐದು ವರ್ಷಗಳಿಂದ ಭಜರಂಗ ದಳದಲ್ಲಿ ಗುರುತಿಸಿಕೊಂಡಿದ್ದ ಹರ್ಷ ಹತ್ಯೆಗೆ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರಾತ್ರೋರಾತ್ರಿ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಾದ್ಯಂತ ಅಂಗಡಿ, ಹೋಟೆಲ್ ಬಂದ್ ಮಾಡಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 23 ರಾತ್ರಿ 9 ಗಂಟೆವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+