ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು 6 ದಿನಕ್ಕೆ ವಿಸ್ತರಣೆ
ಶಿವಮೊಗ್ಗ, ಮಾರ್ಚ್ 05 : ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲನ್ನು 6 ದಿನಗಳಿಗೆ ವಿಸ್ತರಣೆ ಮಾಡಲಾಗಿದೆ. ಪ್ರಸ್ತುತ ವಾರದಲ್ಲಿ ನಾಲ್ಕು ದಿನಗಳ ಕಾಲ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತಿದೆ.
ರೈಲ್ವೆ ಇಲಾಖೆ ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲನ್ನು 6 ದಿನಗಳಿಗೆ ವಿಸ್ತರಣೆ ಮಾಡಲು ಒಪ್ಪಿಗೆ ಕೊಟ್ಟಿದೆ. ಮಾರ್ಚ್ 7,2019 ರಿಂದ ರೈಲು ಮಂಗಳವಾರ ಹೊರತುಪಡಿಸಿ ಉಳಿದ ದಿನ ಸಂಚಾರ ನಡೆಸಲಿದೆ.
ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲಿನ ವೇಳಾಪಟ್ಟಿ
ಫೆ.3ರಂದು ಶಿವಮೊಗ್ಗ-ಬೆಂಗಳೂರು ನಡುವೆ ಜನ ಶತಾಬ್ದಿ ರೈಲು ಸಂಚಾರವನ್ನು ಆರಂಭಿಸಲಾಗಿತ್ತು. ಮೊದಲು ವಾರದ ಮೂರು ದಿನ ರೈಲು ಸಂಚಾರ ನಡೆಸಲಿದೆ ಎಂದು ಹೇಳಲಾಗಿತ್ತು, ಬಳಿಕ ಅದನ್ನು ನಾಲ್ಕು ದಿನಗಳಿಗೆ ವಿಸ್ತರಣೆ ಮಾಡಲಾಗಿತ್ತು.
ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲು ಸಂಚಾರ ಆರಂಭ
ಶಿವಮೊಗ್ಗ ಟೌನ್ ನಿಲ್ದಾಣದಿಂದ ಹೊರಡುವ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ತನಕ ಸಂಚಾರ ನಡೆಸಲಿದೆ. 14 ಬೋಗಿಯ ರೈಲಿನಲ್ಲಿ 7 ಎಸಿ ಕೋಚ್ಗಳಿವೆ.
#ಶಿವಮೊಗ್ಗ - #ಯಶವಂತಪುರ ಜನ ಶತಾಬ್ದಿ ಎಕ್ಸ್ ಪ್ರೆಸ್ ಮಾರ್ಚ್ 7ರಿಂದ ವಾರದಲ್ಲಿ 6 ದಿನ ಸಂಚಾರ (ಮಂಗಳವಾರ ಹೊರತುಪಡಿಸಿ)#Shivamogga - #Yeshwanthpur JanShatabdi exp to run 6 days week expect tuesday.@BYRBJP @BSYBJP ಮಲೆನಾಡಿಗರಿಗೆ ಉತ್ತಮ ರೈಲು ಸೇವೆ ಹೆಚ್ಚಿಸುವ ತಮ್ಮ ಪ್ರಯತ್ನಕ್ಕೆ ಅಭಿನಂದನೆಗಳು ಸರ್ pic.twitter.com/xpddrUyCiJ
— Karnataka Rail Users (@KARailway) March 5, 2019
ವೇಳಾಪಟ್ಟಿ : ಬೆಳಗ್ಗೆ 5.15ಕ್ಕೆ ಶಿವಮೊಗ್ಗದಿಂದ ಹೊರಡುವ ರೈಲು 10.10ಕ್ಕೆ ಯಶವಂತಪುರ ತಲುಪಲಿದೆ. ಯಶವಂತಪುರದಿಂದ ಸಂಜೆ 5.30ಕ್ಕೆ ಹೊರಡುವ ರೈಲು ರಾತ್ರಿ 10.25ಕ್ಕೆ ಶಿವಮೊಗ್ಗಕ್ಕೆ ತಲುಪಲಿದೆ. ಭದ್ರಾವತಿ, ಕಡೂರು ಮತ್ತು ತುಮಕೂರಿನಲ್ಲಿ ನಿಲುಗಡೆಗೊಳ್ಳಲಿದೆ.