ಶಿವಮೊಗ್ಗ: ಪಾಂಡವರು ತಂಗಿದ್ದ ಭೀಮೇಶ್ವರದಲ್ಲಿ ಶಿವರಾತ್ರಿ ಉತ್ಸವ
ಶಿವಮೊಗ್ಗ, , ಫೆ. 12: ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಶ್ರೀ ಕ್ಷೇತ್ರ ಭೀಮೇಶ್ವರದಲ್ಲಿ ಫೆ. 16 ರಿಂದ 20 ರವರೆಗೆ ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಈ ಬಗ್ಗೆ ಮಾಹಿತಿ ನೀಡಿದ ಭೀಮಲಿಂಗೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಬಣ್ಣುಮನೆ ಚಿದಂಬರರಾವ್ ಫೆ. 16 ರಂದು ಪಂಚಗವ್ಯ ಹವನ, ಶ್ರೀ ಮಹಾಹಣಪತಿ ಹವನ, ಶ್ರೀಶಕ್ತಿಪಂಚಾಕ್ಷರಿ ಜಪ, ಕಲ್ಪೋಕ್ತ ಪೂಜೆ, ಸಹಸ್ರ ನಾಮ, ಮಹಮಂಗಳಾರತಿ, ಅನ್ನಸಂತರ್ಪಣೆ ಮಡೆಯಲಿದೆ ಎಂದು ತಿಳಿಸಿದರು.[ನಾಗೇಶ್ವರ, ಕಾಶಿ ವಿಶ್ವನಾಥ ಪೌರಾಣಿಕ ಹಿನ್ನೆಲೆ]

17 ರಂದು ಶ್ರೀ ಶಕ್ತಿಪಂಚಾಕ್ಷರಿ ಜಪ, ರುದ್ರಾಭಿಷೇಕ, ಶಿವಕಲ್ಪೋಕ್ತ ಸಹಸ್ರ ನಾಮಪೂಜೆ, ಮಹಾಬಲಿ, ಪ್ರಸಾದ ವಿನಿಯೋಗ, ಸಂಜೆ ಶತರುದ್ರಾಭಿಷೇಕ, ಕಲ್ಪೋಕ್ತ ಸಹಸ್ರ ನಾಮಪೂಜೆ,ಭಜನಾ ಕಾರ್ಯಕ್ರಮಗಳು ನಡೆಯಲಿವೆ. 18 ರಂದು ಶ್ರೀಶಕ್ತಿಪಂಚಾಕ್ಷರಿ ಜಪ, ರುದ್ರಹವನ, ದೇವರ ಉತ್ಸವ, ರಂಗಪೂಜೆ, ಮಹಮಂಗಳಾರತಿ, ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
18 ರಂದು ರಾತ್ರಿ 8.30ಕ್ಕೆ ಸಾಗರದ ಸುಜಾತ ಮತ್ತು ಬಳಗ ದವರಿಂದ ಸುಗಮ ಸಂಗೀತ, ರಾತ್ರಿ 10.30ಕ್ಕೆ ಕಂಚಿಕೈ ಶ್ರೀಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಬಯಲಾಟ. 19 ರಂದು ರುದ್ರಾಭಿಷೇಕ, ಶ್ರೀಶಕ್ತಿಪಂಚಾಕ್ಷರಿ ಹವನ, ಮಹಾಮಂಗಳಾರತಿ, ಅನ್ನಸಂತರ್ಪಣೆ. 20 ರಂದು ರುದ್ರಾಭಿಷೇಕ, ರಂಗಪೂಜೆ, ಮಹಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.[ಶಿವರಾತ್ರಿ ವಿಶೇಷ : ಶ್ರೀಶೈಲ ಮಲ್ಲಿಕಾರ್ಜುನ ಮಹಾತ್ಮೆ]

ಪ್ರತಿ ವರ್ಷ ದೇವಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಿದ್ದು ಮೂಲ ಸೌಕರ್ಯಗಳ ಕೊರತೆ ಕಾಡುತ್ತಿದೆ. ದೇವಾಲಯ ಕುಸಿಯುತ್ತಿದ್ದು ಸರ್ಕಾರ ಅನುದಾನ ನೀಡಿದರೆ ದುರಸ್ತಿ ಸಾಧ್ಯ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಡಿ.ಆರ್ನಾರಾಯಣ್ಮೂರ್ತಿ, ನಿರ್ದೇಶಕ ಗಣೇಶ್ಭಟ್, ವಿಪ್ರಕೂಟ ಸಂಚಾಲಕ ಹು.ಬಾ ಅಶೋಕ, ರಾಮಾನಾಯ್ಕ, ಪ್ರಧಾನ ಅರ್ಚಕ ಚಂದ್ರಶೇಖರ ಭಟ್ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಐತಿಹಾಸಿಕ ಹಿನ್ನೆಲೆಯೇನು?
ಪಾಂಡವರು ತಮ್ಮ ವನವಾಸದ ಸಂದರ್ಭದಲ್ಲಿ ಇಲ್ಲಿ ಕೆಲ ಕಾಲ ತಂಗಿದ್ದರಂತೆ. ಅದು ಮಹಾಶಿವರಾತ್ರಿಯ ಸಮಯವಾಗಿದ್ದರಿಂದ ಧರ್ಮ ರಾಯನ ಶಿವಪೂಜೆಗೆ ಅಡ್ಡಿಯಾಗದಂತೆ ಭೀಮನು ಕಾಶಿಯಿಂದ ಶಿವಲಿಂಗವನ್ನು ತರಿಸಿ, ಈ ಸ್ಥಳದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದನೆಂಬ ನಂಬಿಕೆಯಿದೆ. ಹಬ್ಬದ ಸಂದರ್ಭ ಮಂಗಗಳಿಗೂ ಪ್ರಸಾದ ವಿತರಣೆ ಮಾಡುವುದು ಇಲ್ಲಿನ ವಿಶೇಷ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications