ಮಧು ಮತ್ತೆ ವಿದೇಶಕ್ಕೆ ಹೋಗಲಿದ್ದಾರೆ : ಕುಮಾರ್ ಬಂಗಾರಪ್ಪ ಲೇವಡಿ
ಶಿವಮೊಗ್ಗ, ಅಕ್ಟೋಬರ್ 18 : 'ನವೆಂಬರ್ 3ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿಯುತ್ತದೆ. ನವೆಂಬರ್ 6ಕ್ಕೆ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ನವೆಂಬರ್ 7ರಂದು ಮಧು ಬಂಗಾರಪ್ಪ ಪುನಃ ವಿದೇಶಕ್ಕೆ ಹೋಗಲಿದ್ದಾರೆ' ಎಂದು ಕುಮಾರ್ ಬಂಗಾರಪ್ಪ ಲೇವಡಿ ಮಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದೆ. ಚುನಾವಣೆ ಪ್ರಚಾರ ಕಾವೇರುತ್ತಿದ್ದು, ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಲೋಕಸಭೆ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ, ಸಹೋದರ ಮಧು ಬಂಗಾರಪ್ಪ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಸೊರಬದ ತತ್ತೂರು ಮಹಾಶಕ್ತಿ ಕೇಂದ್ರದಲ್ಲಿ ಲೋಕಸಭಾ ಉಪ ಚುನಾವಣೆ ಪ್ರಚಾರ ನಡೆಯಿತು. ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಕುಮಾರ್ ಬಂಗಾರಪ್ಪ ಅವರು ಬಿ.ವೈ.ರಾಘವೇಂದ್ರ ಪರವಾಗಿ ಮತಯಾಚನೆ ಮಾಡಿದರು.
ನವೆಂಬರ್ 3ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಬಿ.ವೈ.ರಾಘವೇಂದ್ರ, ಮಧು ಬಂಗಾರಪ್ಪ ಮತ್ತು ಜೆಡಿಯುನಿಂದ ಮಹಿಮಾ ಪಟೇಲ್ ಕಣದಲ್ಲಿದ್ದಾರೆ. ಮೂವರು ಮಾಜಿ ಸಿಎಂಗಳ ಮಕ್ಕಳು ಕಣದಲ್ಲಿದ್ದು, ಚುನಾವಣೆ ಕುತೂಹಲ ಮೂಡಿಸಿದೆ...

ಮಧು ಬಂಗಾರಪ್ಪ ಅಭಿವೃದ್ಧಿ ಮಾಡಿಲ್ಲ
'ಮಧು ಬಂಗಾರಪ್ಪ ಅವರು ಮಾಡಿದ್ದೂ ಏನೂ ಇಲ್ಲ. ತಂದೆಯ ಸಮಾಧಿ ಸ್ಥಳವನ್ನು ಅಭಿವೃದ್ಧಿ ಮಾಡಿಲ್ಲ. ಕ್ಷೇತ್ರವನ್ನು ಅಭಿವೃದ್ಧಿ ಮಾಡಿಲ್ಲ. ಈಗ ನನಗೂ ಕೆಲಸ ಮಾಡಲು ಬಿಡುತ್ತಿಲ್ಲ. ಈಗ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ' ಎಂದು ಕುಮಾರ್ ಬಂಗಾರಪ್ಪ ವಾಗ್ದಾಳಿ ನಡೆಸಿದರು.

15 ದಿನದಲ್ಲಿ ವಿದೇಶಕ್ಕೆ ಹೋಗುವರು
'ನವೆಂಬರ್ 3ರಂದು ಲೋಕಸಭೆ ಉಪ ಚುನಾವಣೆ ಇದೆ. ನವೆಂಬರ್ 6ರಂದು ಫಲಿತಾಂಶ ಬರಲಿದೆ. ಮಾರನೇ ದಿನವೇ ಅವರು ವಿದೇಶಕ್ಕೆ ಹೋಗುತ್ತಾರೆ. ವಿದೇಶದಿಂದಲೇ ಅಲ್ಲವೇ ಬಂದು ನಾಮಪತ್ರವನ್ನು ಸಲ್ಲಿಸಿದ್ದು?' ಎಂದು ಕುಮಾರ್ ಬಂಗಾರಪ್ಪ ವ್ಯಂಗ್ಯವಾಡಿದರು.

ಏನು ಅರ್ಜಿ ಅಂತ ಗೊತ್ತಿದೆಯೋ?
'ವಿದೇಶದಲ್ಲಿದ್ದ ಮಧು ಬಂಗಾರಪ್ಪ ದೇವೇಗೌಡರು ಹೇಳಿದರು ಎಂದು ಇಲ್ಲಿಗೆ ಬಂದು ಅರ್ಜಿ ಹಾಕಿದ್ದಾರೆ. ಆ ಅರ್ಜಿಯಲ್ಲಿ ಏನಿದೆ? ಎಂಬುದು ಆತನಿಗೆ ಗೊತ್ತಿದೆಯೋ? ಇಲ್ಲವೋ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಭ್ಯರ್ಥಿ ಸಿಕ್ಕಿಲ್ಲ. ಆದ್ದರಿಂದ, ಮಧು ಅವರನ್ನು ತಂದು ನಿಲ್ಲಿಸಿದ್ದಾರೆ' ಎಂದು ಟೀಕಿಸಿದರು.

ಸೊರಬದ ಅಭಿವೃದ್ದಿ ಚಿಂತೆ ಇದೆ
'ನಮಗೆ ಸೊರಬದ ಅಭಿವೃದ್ಧಿ ಚಿಂತೆ ಇದೆ. ಆದರೆ, ಮಧು ಬಂಗಾರಪ್ಪ ಅವರಿಗೆ ಯಾವುದೇ ಚಿಂತೆ ಇಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ರಾಘವೇಂದ್ರ ಅವರಿಗೆ ಮತ ನೀಡಬೇಕು. ಹೆಚ್ಚಿನ ಮತಗಳ ಅಂತದಲ್ಲಿ ಅವರನ್ನು ಗೆಲ್ಲಿಸಬೇಕು' ಎಂದು ಮನವಿ ಮಾಡಿದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications