ಡೆಡ್ಲಿ ರಸ್ತೆಯಾದ ಶಿವಮೊಗ್ಗ ಬೈಪಾಸ್; ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ
ಶಿವಮೊಗ್ಗ, ಡಿಸೆಂಬರ್ 31; 30 ಡಿಸೆಂಬರ್ 2021ರ ರಾತ್ರಿ ರಸ್ತೆ ದಾಟುತ್ತಿದ್ದ ಅಬ್ದುಲ್ ರಶೀದ್ (70)ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆಯಿತು. ತಲೆ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಜನ ರೊಚ್ಚಿಗೆದ್ದು ರಾತ್ರಿಯೇ ಬಸ್ ತಡೆದು ಪ್ರತಿಭಟನೆ ಮಾಡಿದರು.
ಸೆಪ್ಟೆಂಬರ್ 2021ರಲ್ಲಿ ಬಸ್ ಇಳಿದು ರಸ್ತೆ ದಾಟಿ ನಂಜಪ್ಪ ಲೇಔಟ್ ನಲ್ಲಿರುವ ಮನೆಗೆ ತೆರಳುತ್ತಿದ್ದ ಶಿಕ್ಷಕ ರಾಜೀವ್ಗೆ ಬೈಕ್ ಡಿಕ್ಕಿಯಾಯಿತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೀವ್ ಮೃತರಾದರು. ಜೊತೆಗಿದ್ದ ಮಗ ವತ್ಸ (6) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
ಹೀಗೆ, ಶಿವಮೊಗ್ಗ ಬೈಪಾಸ್ ರಸ್ತೆ ನಿತ್ಯ ಒಂದಿಲ್ಲೊಂದು ಅಪಘಾತಕ್ಕೆ ಸಾಕ್ಷಿಯಾಗುತ್ತಿದೆ. ಇಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಎಷ್ಟೊ ಮಂದಿ ಅಪಘಾತದ ನೋವಿನಲ್ಲಿಯೇ ನರಳುತ್ತಿದ್ದಾರೆ.
ಬೈಪಾಸ್ ರಸ್ತೆಯ ಅಕ್ಕಪಕ್ಕದಲ್ಲಿ ಜ್ಯೋತಿ ನಗರ, ನಂಜಪ್ಪ ಲೇಔಟ್, ಊರುಗಡೂರು, ವಾದಿ-ಎ-ಹುದಾ ಸೇರಿದಂತೆ ವಿವಿಧ ಬಡಾವಣೆಗಳಿವೆ. ಇಲ್ಲಿಯ ನಿವಾಸಿಗಳು ಬೈಪಾಸ್ ರಸ್ತೆಯನ್ನು ಬಳಕೆ ಮಾಡಿಕೊಳ್ಳುತ್ತಾರೆ.
ಇನ್ನು, ಅಂತರ ಜಿಲ್ಲೆ ಕೆಎಸ್ಆರ್ಟಿಸಿ ಬಸ್ಸುಗಳು, ಲಾರಿಗಳೆಲ್ಲವು ಇದೆ ಮಾರ್ಗವಾಗಿ ನಗರ ಪ್ರವೇಶಿಸುತ್ತವೆ. ಹಾಗಾಗಿ ಬೈಪಾಸ್ ರಸ್ತೆಯಲ್ಲಿ ಜನ ದಟ್ಟಣೆಯು ಹೆಚ್ಚು, ವಾಹನಗಳ ಸಂಖ್ಯೆಯು ಹೆಚ್ಚು. ಈ ಬೈಪಾಸ್ ರಸ್ತೆಗೆ ಪ್ರವೇಶ ಪಡೆಯುತ್ತಿದ್ದಂತೆ, ವಾಹನಗಳ ವೇಗಕ್ಕೆ ಲಗಾಮು ಇಲ್ಲವಾಗುತ್ತದೆ. ಇದೆ ಕಾರಣಕ್ಕೆ ಅಪಘಾತ ಸಂಭವಿಸುತ್ತಿವೆ. ಹಾಗಾಗಿ ಬೈಪಾಸ್ ರಸ್ತೆ ಅಂದರೆ ಆತಂಕ ಪಡುವಂತಾಗಿದೆ.

ಅಕ್ಕಪಕ್ಕದಲ್ಲಿ ಶಾಲೆ, ಕಾಲೇಜುಗಳಿವೆ
ಎಂ. ಆರ್. ಎಸ್ ಸರ್ಕಲ್ ಮತ್ತು ಎನ್. ಟಿ. ರಸ್ತೆ ಮಧ್ಯೆ ಬೈಪಾಸ್ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ರಸ್ತೆ ಅಕ್ಕಪಕ್ಕದಲ್ಲಿ ಕೆಲವು ಶಾಲೆ, ಕಾಲೇಜುಗಳಿವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಸೇರಿದಂತೆ ಹಲವು ಪ್ರಭಾವಿಗಳ ಆಸ್ತಿ, ಉದ್ಯಮ, ಸಂಸ್ಥೆಗಳು ಇಲ್ಲಿವೆ. ಗ್ಯಾರೇಜುಗಳು, ವಿವಿಧ ಅಂಗಡಿ, ಮಳಿಗೆಗಳು ಕೂಡ ರಸ್ತೆಯ ಅಕ್ಕಪಕ್ಕದಲ್ಲಿವೆ. ಹಾಗಾಗಿ ನಿತ್ಯ ವಿದ್ಯಾರ್ಥಿಗಳು, ಜನ ಸಂಚಾರ ಇರುತ್ತದೆ.

ಏನಂತಾರೆ ಇಲ್ಲಿಯ ಜನ?
"ದೊಡ್ಡ ದೊಡ್ಡ ವಾಹನಗಳು ಅತಿ ವೇಗವಾಗಿ ಹೋಗುವುದರಿಂದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯವಾಗುತ್ತದೆ. ತುಂಬಾ ವೇಗವಾಗಿರುವಾಗಲೇ ಓವರ್ ಟೇಟ್ ಮಾಡುತ್ತಾರೆ. ಇಂತಹ ಸಂದರ್ಭ ಸ್ವಲ್ಪ ಯಾಮಾರಿದರೂ ಸಾವು, ನೋವು ಉಂಟಾಗುತ್ತದೆ" ಅನ್ನುತ್ತಾರೆ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುವ ಇಮ್ತಿಯಾಜ್.
"ಶಾಲೆ ಮಕ್ಕಳನ್ನು ಕರೆದುಕೊಂಡು ಬಂದಾಗ ಮತ್ತು ಕರೆದೊಯ್ಯುವಾಗ ರಸ್ತೆ ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಆಗ ತುಂಬಾ ಆತಂಕವಾಗುತ್ತದೆ. ಶಾಲಾ ಮಕ್ಕಳನ್ನು ಕಂಡರೂ ದೊಡ್ಡ ದೊಡ್ಡ ವಾಹನಗಳ ವೇಗ ಕಡಿಮೆಯಾಗುವುದಿಲ್ಲ. ಏನಾದರೂ ಹೆಚ್ಚು ಕಡಿಮೆಯಾದರೆ ಅನ್ನುವ ಭಯ ಯಾವಾಗಲೂ ಇರುತ್ತದೆ" ಅನ್ನುತ್ತಾರೆ ಹೆಸರು ಬಹಿರಂಗಪಡಿಸಲು ಇಚ್ಛಿಸದ ಶಿಕ್ಷಣ ಸಂಸ್ಥೆಯೊಂದರ ಸೆಕ್ಯೂರಿಟಿ.

ಬೈಪಾಸ್ ರಸ್ತೆಗೆ ಬೆಳಕು ಬೇಕು
ದಿನದ 24 ಗಂಟೆಯೂ ವಾಹನ ಸಂಚಾರ ಇರುವ ಬೈಪಾಸ್ ರಸ್ತೆಯಲ್ಲಿ ಬೆಳಕು ಇಲ್ಲ. ಅಪಘಾತಗಳ ಪ್ರಮಾಣ ಹೆಚ್ಚಲು ಪ್ರಮುಖ ಕಾರಣಗಳ ಪೈಕಿ ಇದು ಒಂದು. ರಾತ್ರಿ ಸಂದರ್ಭ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಚಾಲಕರಿಗೆ ಸಾಹಸದ ಕೆಲಸ. ರಸ್ತೆಗೆ ಡಿವೈಡರ್ ಇದೆ. ಆದರೂ ವಿರುದ್ಧ ದಿಕ್ಕಿನಿಂದ ಬರುವ ವಾಹನಗಳ ಲೈಟುಗಳು ವಾಹನ ಚಾಲಕರ ಕಣ್ಣು ಕುಕ್ಕಲಿದೆ. ಒಂದು ವೇಳೆ ಡಿವೈಡರ್ ಮೇಲೆ ಬೀದಿ ದೀಪ ಅಳವಡಿಸಿದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ರಸ್ತೆ ನಿರ್ಮಾಣವಾಗಿ ವರ್ಷಗಳೆ ಕಳೆದರೂ ಬೀದಿ ದೀಪ ಅಳವಡಿಸಿಲ್ಲ.

ವೇಗ ನಿಯಂತ್ರಣಕ್ಕಿಲ್ಲ ಕ್ರಮ
ಬೈಪಾಸ್ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಯಾವುದೆ ಕ್ರಮ ಕೈಗೊಂಡಿಲ್ಲ. ಬಿ. ಹೆಚ್. ರಸ್ತೆಯಲ್ಲಿ ಸಹ್ಯಾದ್ರಿ ಕಾಲೇಜಿನಿಂದ ಹೊಳೆ ಸೇತುವೆವರೆಗೂ ಅಲ್ಲಲ್ಲಿ ವಿಭಿನ್ನ ಮಾದರಿಯ ಸ್ಪೀಡ್ ಬ್ರೇಕರ್ ಹಾಕಲಾಗಿದೆ. ಅದೇ ಮಾದರಿಯ ಸ್ಪೀಡ್ ಬ್ರೇಕರ್ ಗಳನ್ನು ಬೈಪಾಸ್ ರಸ್ತೆಗೂ ಅಳವಡಿಸಿದರೆ ವೇಗ ತಗ್ಗಲಿದೆ ಅನ್ನುವುದು ಜನರ ಅಭಿಪ್ರಾಯ.

ಬ್ಯಾರಿಕೇಡ್ ಹಾಕಲಾಗಿದೆ
ಬೈಪಾಸ್ ರಸ್ತೆಯಲ್ಲಿ ಊರುಗಡೂರು, ಮತ್ತೂರು ರಸ್ತೆ ಹೋಗುವ ಕಡೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಹಾಗಾಗಿ ಇಲ್ಲಿ ವಾಹನಗಳ ವೇಗ ತಗ್ಗುತ್ತದೆ. ಉಳಿದೆಲ್ಲೂ ವೇಗ ನಿಯಂತ್ರಣಕ್ಕೆ ಕ್ರಮವಿಲ್ಲದಿರುವುದರಿಂದ ಅಪಘಾತಗಳು ಹೆಚ್ಚುತ್ತಿವೆ.
ವಾಹನ ದಟ್ಟಣೆ, ಜನ ಸಂಚಾರ ಹೆಚ್ಚಳವಾಗುತ್ತಿದ್ದಂತೆ ಶಿವಮೊಗ್ಗದ ಬೈಪಾಸ್ ರಸ್ತೆಯು, ಜಿಲ್ಲೆಯ ಡೆಡ್ಲಿ ರಸ್ತೆಗಳ ಪಾಲಿಗೆ ಸೇರ್ಪಡೆಯಾಗುತ್ತಿದೆ. ಈಗಲೇ ಅಧಿಕಾರಿಗಳು ಎಚ್ಚೆತ್ತುಕೊಂಡರೆ ಹಲವರ ಪ್ರಾಣ ಉಳಿಯಲಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications