ಮಂಡಗದ್ದೆ ಬಳಿಯ ಚಂದ್ರಶೇಖರ ಗುರೂಜಿ ಹೆಂಡತಿ ಮನೆಯಲ್ಲಿ ನೀರವ ಮೌನ
ಶಿವಮೊಗ್ಗ, ಜು5: ಸರಳ ವಾಸ್ತು ಚಂದ್ರಶೇಖರ ಗುರೂಜಿ ಅವರ ಹತ್ಯೆ ವಿಚಾರ ತಿಳಿದು, ಮಂಡಗದ್ದೆ ಸಮೀಪ ಇರುವ ಅವರ ಹೆಂಡತಿ ಮನೆಯಲ್ಲಿ ನೀರವ ಮೌನ ಆವರಿಸಿದೆ. ಒಂದು ತಿಂಗಳ ಹಿಂದೆಯಷ್ಟೆ ಪತ್ನಿಯೊಂದಿಗೆ ಚಂದ್ರಶೇಖರ ಗುರೂಜಿ ಅವರು ಇಲ್ಲಿಗೆ ಬಂದಿದ್ದರು.
ಚಂದ್ರಶೇಖರ ಗುರೂಜಿ ಅವರ ಪತ್ನಿ ಅಂಕಿತಾ ಅವರು, ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಹೆಮ್ಮಕ್ಕಿ ಗ್ರಾಮದವರು. ಮೂರು ವರ್ಷದ ಹಿಂದೆ ಚಂದ್ರಶೇಖರ ಗುರೂಜಿ ಅವರು ಹೆಮ್ಮಕ್ಕಿ ಅಂಕಿತಾ ಅವರನ್ನ ವಿವಾಹವಾಗಿದ್ದರು.
ಕಳೆದ ತಿಂಗಳು ಬಂದಿದ್ದರು
ಚಂದ್ರಶೇಖರ ಗುರೂಜಿ ಅವರು ಕಳೆದ ತಿಂಗಳು ಪತ್ನಿ ಅಂಕಿತಾ ಮನೆಗೆ ಬಂದಿದ್ದರು. ಪತ್ನಿಯೊಂದಿಗೆ ಇಲ್ಲಿಯೆ ನಾಲ್ಕಾರು ದಿನ ಉಳಿದಿದ್ದರು ಎಂದು ಅಂಕಿತಾ ಅವರ ಅಜ್ಜಿ ಸಾವಿತ್ರಮ್ಮ ತಿಳಿಸಿದ್ದಾರೆ.

ಚಂದ್ರಶೇಖರ ಗುರೂಜಿ ಅವರು ಪತ್ನಿ ಅಂಕಿತಾ ಅವರೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು. ಹೆಮ್ಮಕ್ಕಿಗೆ ಬಂದಾಗ ಚಂದ್ರಶೇಖರ ಗುರೂಜಿ ಅವರು ಎಲ್ಲರೊಂದಿಗೆ ಬೆರೆಯುತ್ತಿದ್ದರು. ಪ್ರೀತಿ, ಸ್ನೇಹದಿಂದ ಎಲ್ಲರನ್ನು ಮಾತನಾಡಿಸುತ್ತಿದ್ದರು ಎಂದು ಸಾವಿತ್ರಮ್ಮ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮನೆಯಲ್ಲಿ ನೀರವ ಮೌನ
ಚಂದ್ರಶೇಖರ ಗುರೂಜಿ ಅವರ ಹತ್ಯೆಯಾದ ವಿಚಾರ ತಿಳಿಯುತ್ತಿದ್ದಂತೆ ಹೆಮ್ಮಕ್ಕಿಯಲ್ಲಿದ್ದ ಅಂಕಿತಾ ಅವರ ತಂದೆ ರಮೇಶ್ ಮತ್ತು ತಾಯಿ ಶೈಲಾ ಅವರು ಹುಬ್ಬಳಿಗೆ ತೆರಳಿದ್ದಾರೆ. ಅಂಕಿತಾ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಹೆಮ್ಮಕ್ಕಿ ಗ್ರಾಮದಲ್ಲಿ ಗುರೂಜಿಯೊಂದಿಗೆ ಸ್ನೇಹದಿಂದ ಬೆರೆತವರು ಈಗ ಅವರನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications