ಮೂರು ವಲಯವಾಗಿ ವಿಂಗಡನೆಯಾದ ಶಿವಮೊಗ್ಗ ಮಹಾನಗರ ಪಾಲಿಕೆ
ಶಿವಮೊಗ್ಗ, ಮಾರ್ಚ್ 18: ಜನಸ್ನೇಹಿ ಆಡಳಿತಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಮೂರು ವಲಯವಾಗಿ ವಿಭಾಗ ಮಾಡಲಾಗಿದೆ. ಮೂರು ವಲಯಗಳಿಗೆ ಪ್ರತ್ಯೇಕ ಕಛೇರಿಯನ್ನು ಸ್ಥಾಪನೆ ಮಾಡಲಾಗಿದೆ. ಆದ್ದರಿಂದ ಇನ್ನು ಮುಂದೆ ಜನರ ಪಾಲಿಕೆಯ ಕೆಲಸಗಳಿಗಾಗಿ ತಮ್ಮ ವಯಲದ ಕಛೇರಿಗೆ ಭೇಟಿ ನೀಡಬಹುದು. ಪ್ರತಿಯೊಂದು ಕೆಲಸಕ್ಕೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮುಖ್ಯ ಕಛೇರಿಗೆ ಹೋಗುವುದು ತಪ್ಪಲಿದ್ದು ಹಣ, ಸಮಯ ಉಳಿತಾಯವಾಗಿದೆ.
ಮಾರ್ಚ್ 17ರಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಕೇಂದ್ರ, ಉತ್ತರ ಮತ್ತು ದಕ್ಷಿಣ ವಲಯ ಎಂದು ಮೂರು ವಲಯ ಮಾಡಲಾಗಿದೆ. ಪ್ರತಿ ವಲಯಕ್ಕೆ ಸಹ ಪ್ರತ್ಯೇಕ ಕಛೇರಿಯನ್ನು ಸ್ಥಾಪನೆ ಮಾಡಲಾಗಿದೆ. ಇಷ್ಟು ದಿನ ಶಿವಮೊಗ್ಗ ಮಹಾನಗರ ಪಾಲಿಕೆ ಒಂದೇ ಕಛೇರಿಯನ್ನು ಹೊಂದಿದ್ದು, ಕೇಂದ್ರ ಕಛೇರಿಯಲ್ಲಿಯೇ ಎಲ್ಲಾ ಕೆಲಸಗಳು ನಡೆಯುತ್ತಿದ್ದವು.

ಮೂರು ಕಛೇರಿಗಳ ಸ್ಥಾಪನೆ: 2013ರಲ್ಲಿ ಕರ್ನಾಟಕ ಸರ್ಕಾರ ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಘೋಷಣೆ ಮಾಡಿತು. ಈಗ ಮೊದಲ ಬಾರಿಗೆ ಮಹಾನಗರ ಪಾಲಿಕೆಯನ್ನು ವಲಯಗಳಾಗಿ ವಿಂಗಡನೆ ಮಾಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾದರಿಯಲ್ಲಿ ಮಹಾನಗರ ಪಾಲಿಕೆಯನ್ನು ವಲಯವಾಗಿ ವಿಂಗಡನೆ ಮಾಡಿಕೊಂಡು ಆಡಳಿತ ನಡೆಸಲಾಗುತ್ತದೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ಉತ್ತರ ವಲಯದ ಕಛೇರಿಯನ್ನು ವಿನೋಬ ನಗರದ ಶುಭಮಂಗಳ ಕಲ್ಯಾಣ ಮಂದಿರದ ಪಾಲಿಕೆ ಕಟ್ಟಡದ ಬಳಿ ತೆರೆಯಲಾಗಿದೆ. ಸುತ್ತಮುತ್ತಲಿನ ಜನರು ಕೇಂದ್ರ ಕಛೇರಿಗೆ ಹೋಗುವ ಬದಲು ವಲಯ ಕಛೇರಿಗೆ ಭೇಟಿ ನೀಡಬಹುದು.
ಗೋಪಿ ವೃತ್ತದ ಬಳಿಯ ದೇವರಾಜ ಅರಸು ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕೇಂದ್ರ ವಲಯದ ಕಛೇರಿಯನ್ನು ತೆರೆಯಲಾಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಕಛೇರಿಯನ್ನು ಇಮಾಮ್ ಬಾಡಾ ಬಳಿಯ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಗೊಳಿಸಲಾದ ಕಟ್ಟಡದಲ್ಲಿ ತೆರೆಯಲಾಗಿದೆ. ಜನರು ಈ ಕಛೇರಿಗಳಿಗೆ ಭೇಟಿ ನೀಡಬಹುದು.
ಶಿವಮೊಗ್ಗ ಮಹಾನಗರ ಪಾಲಿಕೆ ಕೇಂದ್ರ ಕಛೇರಿಯಾಗಿ ಮಾತ್ರ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಕಾರಣ ಅಧಿಕಾರಿಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿತ್ತು. ಅಲ್ಲದೇ ಜನರು ಸಹ ತಮ್ಮ ಕೆಲಸಗಳಿಗೆ ದೂರ ಪ್ರದೇಶಗಳಿಂದ ಮುಖ್ಯ ಕಛೇರಿಗೆ ಬರಬೇಕಿತ್ತು.
ಆದ್ದರಿಂದ ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ವಲಯವಾಗಿ ವಿಂಗಡನೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಈಗ ಮೂರು ವಿಭಾಗವಾಗಿ ಮಾಡಿ, ವಲಯ ಕಛೇರಿಗಳನ್ನು ತೆರೆಯಲಾಗಿದೆ.
ಈ ಕುರಿತು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಕವಿತಾ ಯೋಗಪ್ಪನವರ್ ಮಾತನಾಡಿದ್ದು, "ಶಿವಮೊಗ್ಗ ಮಹಾನಗರ ಪಾಲಿಕೆ ಕಛೇರಿಯನ್ನು ಮೂರು ವಲಯವಾಗಿ ವಿಭಾಗ ಮಾಡಲಾಗಿದೆ. ವಲಯವಾಗಿ ವಿಭಾಗ ಮಾಡಿರುವುದರಿಂದ ಜನರ ಅಲೆದಾಟ ತಪ್ಪಲಿದೆ" ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ 2013ರಲ್ಲಿ ಶಿವಮೊಗ್ಗ, ವಿಜಯಪುರ ಮತ್ತು ತುಮಕೂರು ನಗರಸಭೆಯನ್ನು ಮಹಾನಗರ ಪಾಲಿಕೆಗಳಾಗಿ ಘೋಷಣೆ ಮಾಡಿತು. ಬಳಿಕ ಶಿವಮೊಗ್ಗ ಮಹಾನಗರ ಪಾಲಿಕೆ ಕೇಂದ್ರ ಕಛೇರಿಯಲ್ಲಿಯೇ ಎಲ್ಲಾ ಕೆಲಸಗಳು ನಡೆಯುತ್ತಿದ್ದವು. ಪಾಲಿಕೆಯನ್ನು ವಲಯವಾಗಿ ವಿಭಾಗ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಅದು ಈಗ ಜಾರಿಗೆ ಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications