ಶಿವಮೊಗ್ಗದ ಬಸ್, ರೈಲು ನಿಲ್ದಾಣಗಳಲ್ಲಿ ತಪಾಸಣೆ ವ್ಯವಸ್ಥೆ: ಡಿಸಿ
ಶಿವಮೊಗ್ಗ, ಮಾರ್ಚ್ 18: ಕೊರೊನಾ ವೈರಸ್ ಸೋಂಕು ಶಿವಮೊಗ್ಗ ಜಿಲ್ಲೆಗೆ ಆವರಿಸಿಕೊಳ್ಳುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.
ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ, ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿ, ಕೊರೊನಾ ವೈರಸ್ ಪರೀಕ್ಷೆ ನಡೆಸಬೇಕು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಗಳಲ್ಲಿ ಕ್ರಿಮಿನಾಶಕಗಳನ್ನು ನಿಯಮಿತವಾಗಿ ಸಿಂಪಡಿಸುವ ಕಾರ್ಯ ಆರಂಭಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು, ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದರು.
ಈಗಾಗಲೇ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ರೀತಿ ಜಾತ್ರೆ ಮತ್ತು ಮದುವೆ ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡದಂತೆ ಸೂಚನೆ ನೀಡಲಾಗಿದೆ. ಎಲ್ಲಾ ಮಾಲ್, ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಕೊರೊನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ, ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿರುವ ಪ್ರಯೋಗಾಲಯದಲ್ಲಿ ಇದುವರೆಗೆ 34 ಶಂಕಿತ ಪ್ರಕರಣಗಳ ಪರೀಕ್ಷೆ ನಡೆಸಲಾಗಿದ್ದು, ಎಲ್ಲಾ ಪ್ರಕರಣಗಳು ನೆಗಟಿವ್ ಬಂದಿವೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 5 ಪರೀಕ್ಷೆ ನಡೆಸಲಾಗಿದೆ. ನೆರೆಯ ರಾಜ್ಯಗಳಿಂದಲೂ ಪರೀಕ್ಷೆಗಾಗಿ ಸ್ಯಾಂಪಲ್ಗಳನ್ನು ಸ್ವೀಕರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ವಿದೇಶಗಳಿಂದ ಆಗಮಿಸಿದ 49 ಮಂದಿಯ ಮೇಲೆ ನಿಗಾ ಇರಿಸಲಾಗಿದ್ದು, 14 ದಿನಗಳ ಕಾಲ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮಾಹಿತಿ ನೀಡಿದರು.
ಮೆಗ್ಗಾನ್ ನಲ್ಲಿ ಸದ್ಯ 30 ಹಾಸಿಗೆಯ ಐಸೋಲೇಷನ್ ವಾರ್ಡ್ ಸಜ್ಜುಗೊಳಿಸಲಾಗಿದ್ದು, ಇನ್ನೂ 100 ಬೆಡ್ ವಾರ್ಡ್ ಸಿದ್ಧಪಡಿಸಲಾಗುತ್ತಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 100 ಬೆಡ್ ಐಸೋಲೇಷನ್ ವಾರ್ಡ್ ಸಜ್ಜುಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ ಹೆಚ್.ಟಿ, ಶಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿ, ಡಾ.ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications