ಶಿವಮೊಗ್ಗ: ಉದ್ವಿಗ್ನ ಸ್ಥಳಕ್ಕೆ ಇಂದು (ಅ.5) 'ಬಿಜೆಪಿ ಸತ್ಯಶೋಧನಾ ತಂಡ' ಭೇಟಿ
ಶಿವಮೊಗ್ಗ,ಅಕ್ಟೋಬರ್ 05: ಈದ್ ಮಿಲಾದ್ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಗೆ ಇಂದು ಗುರುವಾರ (ಅ.05) ಬಿಜೆಪಿಯ ಸತ್ಯಶೋಧನಾ ತಂಡ ಬೇಟಿ ನೀಡಿ ಪರಿಶೀಲಿಸಲಿದೆ. ಈ ತಂಡದಲ್ಲಿ ಪ್ರಮುಖ ನಾಯಕರು ಇರಲಿದ್ದು, ಖುದ್ದು ಸ್ಥಳದಲ್ಲಿ ಮಾಹಿತಿ ಪಡೆಯಲಿದ್ದಾರೆ. ನಂತರ ಘಟನೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆಗಳು ಇವೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸತ್ಯ ಶೋಧನಾ ತಂಡ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ಶಾಂತಿನಗರ-ರಾಗಿಗುಡ್ಡದ ಪ್ರದೇಶಕ್ಕೆ ಭೇಟಿ ಕೊಡಲಿದೆ. ಘಟನೆ ಕುರಿತು ಸ್ಥಳೀಯರ ಜೊತೆ ಚರ್ಚಿಸಿ ನೈಜತೆ ತಿಳಿದುಕೊಳ್ಳಲಿದೆ.

ಹಾಗಾದರೆ ತಂಡದಲ್ಲಿ ಯಾರು ಇರಲಿದ್ದಾರೆ ಎಂದು ನೋಡುವುದಾದರೆ, ನಳಿನ್ ಕುಮಾರ್ ಕಟೀಲ್ ಅವರ ಜೊತೆಗೆ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಡಾ.ಸಿಎನ್. ಅಶ್ವಥ್ ನಾರಾಯಣ, ಆರಗ್ ಜ್ಞಾನೇಂದ್ರ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಎಂಎಲ್ ಸಿ ಡಿ.ಎಸ್. ಅರುಣ, ಎಸ್. ರುದ್ರೇಗೌಡ ಸೇರಿದಂತೆ ಮತ್ತಿತರ ನಾಯಕರು ತಂಡದಲ್ಲಿರಲಿದ್ದಾರೆ.
ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಜಿಲ್ಲೆ
ರಾಜ್ಯದಲ್ಲಿ ನಿಗದಿಯಂತೆ ಸೆಪ್ಟಂಬರ್ 28ರಂದು ಗುರುವಾರ ಈದ್ ಮಿಲಾದ್ ಆಚರಣೆ ನಡೆಯಿತು. ಆದರೆ ಶಿವಮೊಗ್ಗದಲ್ಲಿ ಭಾನುವಾರ ಆಚರಣೆ ನಡೆಸಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಬೀದಿ ಬೀದಿಗಳಲ್ಲಿ ತಲ್ವಾರ್ ಪ್ರದರ್ಶಿಸಲಾಯಿತು. ಈ ವೇಳೆ ಪುಂಡರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತು. ಪರಿಣಾಮ ಜಿಲ್ಲೆಯ ಉದ್ವಿಗ್ನಗೊಂಡಿತು.
ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು ಕೊನೆಗೆ 144 ಸೆಕ್ಷನ್ ಜಾರಿ ಮಾಡಿದರು. ಗಲಾಟೆಯಲ್ಲಿ ಒಂದಿಬ್ಬರು ಪೊಲೀಸರಿಗೆ ಮತ್ತು ಯುವಕರಿಗೆ ಗಾಯಗಳಾಗಿವೆ. ಪೊಲೀಸರು ಮನೆಗಳಿಗೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ಸುಮಾರು 60 ಮಂದಿಯನ್ನು ವಶಕ್ಕೆ ಪಡೆದಿದ್ದು, 24 ಮಂದಿ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ
ಈ ಘಟನೆ ರಾಜ್ಯಾದ್ಯಂತ ಸುದ್ದಿ ಮಾಡಿದ್ದು, ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಬಿಜೆಪಿ ಕಟುವಾಗಿ ಟೀಕಿಸಿತು. ಇದರ ಮುಂದಿನ ಭಾಗವಾಗಿಯೇ ಬಿಜೆಪಿ ನಾಯಕರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ನೈಜತೆ ತಿಳಿದುಕೊಳ್ಳಲಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications