ಶಿವಮೊಗ್ಗ: ಉದ್ವಿಗ್ನ ಸ್ಥಳಕ್ಕೆ ಇಂದು (ಅ.5) 'ಬಿಜೆಪಿ ಸತ್ಯಶೋಧನಾ ತಂಡ' ಭೇಟಿ
ಶಿವಮೊಗ್ಗ,ಅಕ್ಟೋಬರ್ 05: ಈದ್ ಮಿಲಾದ್ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಗೆ ಇಂದು ಗುರುವಾರ (ಅ.05) ಬಿಜೆಪಿಯ ಸತ್ಯಶೋಧನಾ ತಂಡ ಬೇಟಿ ನೀಡಿ ಪರಿಶೀಲಿಸಲಿದೆ. ಈ ತಂಡದಲ್ಲಿ ಪ್ರಮುಖ ನಾಯಕರು ಇರಲಿದ್ದು, ಖುದ್ದು ಸ್ಥಳದಲ್ಲಿ ಮಾಹಿತಿ ಪಡೆಯಲಿದ್ದಾರೆ. ನಂತರ ಘಟನೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆಗಳು ಇವೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸತ್ಯ ಶೋಧನಾ ತಂಡ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ಶಾಂತಿನಗರ-ರಾಗಿಗುಡ್ಡದ ಪ್ರದೇಶಕ್ಕೆ ಭೇಟಿ ಕೊಡಲಿದೆ. ಘಟನೆ ಕುರಿತು ಸ್ಥಳೀಯರ ಜೊತೆ ಚರ್ಚಿಸಿ ನೈಜತೆ ತಿಳಿದುಕೊಳ್ಳಲಿದೆ.

ಹಾಗಾದರೆ ತಂಡದಲ್ಲಿ ಯಾರು ಇರಲಿದ್ದಾರೆ ಎಂದು ನೋಡುವುದಾದರೆ, ನಳಿನ್ ಕುಮಾರ್ ಕಟೀಲ್ ಅವರ ಜೊತೆಗೆ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಡಾ.ಸಿಎನ್. ಅಶ್ವಥ್ ನಾರಾಯಣ, ಆರಗ್ ಜ್ಞಾನೇಂದ್ರ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಎಂಎಲ್ ಸಿ ಡಿ.ಎಸ್. ಅರುಣ, ಎಸ್. ರುದ್ರೇಗೌಡ ಸೇರಿದಂತೆ ಮತ್ತಿತರ ನಾಯಕರು ತಂಡದಲ್ಲಿರಲಿದ್ದಾರೆ.
ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಜಿಲ್ಲೆ
ರಾಜ್ಯದಲ್ಲಿ ನಿಗದಿಯಂತೆ ಸೆಪ್ಟಂಬರ್ 28ರಂದು ಗುರುವಾರ ಈದ್ ಮಿಲಾದ್ ಆಚರಣೆ ನಡೆಯಿತು. ಆದರೆ ಶಿವಮೊಗ್ಗದಲ್ಲಿ ಭಾನುವಾರ ಆಚರಣೆ ನಡೆಸಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಬೀದಿ ಬೀದಿಗಳಲ್ಲಿ ತಲ್ವಾರ್ ಪ್ರದರ್ಶಿಸಲಾಯಿತು. ಈ ವೇಳೆ ಪುಂಡರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತು. ಪರಿಣಾಮ ಜಿಲ್ಲೆಯ ಉದ್ವಿಗ್ನಗೊಂಡಿತು.
ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು ಕೊನೆಗೆ 144 ಸೆಕ್ಷನ್ ಜಾರಿ ಮಾಡಿದರು. ಗಲಾಟೆಯಲ್ಲಿ ಒಂದಿಬ್ಬರು ಪೊಲೀಸರಿಗೆ ಮತ್ತು ಯುವಕರಿಗೆ ಗಾಯಗಳಾಗಿವೆ. ಪೊಲೀಸರು ಮನೆಗಳಿಗೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ಸುಮಾರು 60 ಮಂದಿಯನ್ನು ವಶಕ್ಕೆ ಪಡೆದಿದ್ದು, 24 ಮಂದಿ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ
ಈ ಘಟನೆ ರಾಜ್ಯಾದ್ಯಂತ ಸುದ್ದಿ ಮಾಡಿದ್ದು, ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಬಿಜೆಪಿ ಕಟುವಾಗಿ ಟೀಕಿಸಿತು. ಇದರ ಮುಂದಿನ ಭಾಗವಾಗಿಯೇ ಬಿಜೆಪಿ ನಾಯಕರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ನೈಜತೆ ತಿಳಿದುಕೊಳ್ಳಲಿದ್ದಾರೆ.
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications